ಮೈಸೂರು: ಡಿಕೆ ಶಿವಕುಮಾರ್ ನೀಡಿದ್ದ ಸೆಟಲ್ಮೆಂಟ್ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಡಿಕೆ ಸುರೇಶ್ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಗೂಂಡಾಗಳು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಇಬ್ಬರೂ ಗೂಂಡಾಗಳು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. ನನ್ನ ಮಾತಿಗೆ ಡಿಕೆ ಶಿವಕುಮಾರ್ ಸಿನಿಮಾ ಸ್ಟೈಲ್ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಡಿಕೆಶಿ ಅವರ ಅರ್ಧ ಜೀವನ ತಿಹಾರ್ ಜೈಲಿನಲ್ಲಿ ಸೆಟಲ್ಮೆಂಟ್ ಆಗಿದೆ. ಉಳಿದ ಇನ್ನೊಂದು ಪಾರ್ಟ್ ಕೂಡ ಜೈಲಿನಲ್ಲೇ ಸೆಟಲ್ಮೆಂಟ್ ಆಗುತ್ತೆ. ನೋಡ್ತಾ ಇರಿ ಇಷ್ಟರಲ್ಲೇ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರಲಿದ್ದಾರೆ ಎಂದು ಕೆ.ಎಸ್. ಈಶ್ವರಪ್ಪ ಹೇಳಿದರು.
ನಾಡಪ್ರಭು ಕೆಂಪೇಗೌಡ ಅವರು ಡಿಕೆ ಶಿವಕುಮಾರ್ ಅವರ ಆಸ್ತಿಯಲ್ಲ, ತಮ್ಮನ್ನು ರಾಜ್ಯ ಕಟ್ಟಿದ ವ್ಯಕ್ತಿಯ ಜತೆ ಹೋಲಿಸಿಕೊಳ್ಳುವುದು ಸರಿಯಲ್ಲ ಎಂದ ಈಶ್ವರಪ್ಪ ದೇಶ ದ್ರೋಹಿ ಹೇಳಿಕೆ ನೀಡಿದ ಡಿಕೆ ಸುರೇಶ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕ್ರಮ ಕೈಗೊಳ್ಳಿ ಎಂದರೆ ನನಗೆ ನೊಟೀಸ್ ಕಳುಹಿಸಿ ರಾಷ್ಟ್ರದ್ರೋಹಿಗಳನ್ನು ರಕ್ಷಣೆ ಮಾಡುತ್ತಾರೆ ಎಂದು ಕಿಡಿಕಾರಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…