ಮೈಸೂರು: ಡಿಕೆ ಶಿವಕುಮಾರ್ ನೀಡಿದ್ದ ಸೆಟಲ್ಮೆಂಟ್ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಡಿಕೆ ಸುರೇಶ್ ಹಾಗೂ ಡಿಕೆ ಶಿವಕುಮಾರ್ ಇಬ್ಬರೂ ಗೂಂಡಾಗಳು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಇಬ್ಬರೂ ಗೂಂಡಾಗಳು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. ನನ್ನ ಮಾತಿಗೆ ಡಿಕೆ ಶಿವಕುಮಾರ್ ಸಿನಿಮಾ ಸ್ಟೈಲ್ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಡಿಕೆಶಿ ಅವರ ಅರ್ಧ ಜೀವನ ತಿಹಾರ್ ಜೈಲಿನಲ್ಲಿ ಸೆಟಲ್ಮೆಂಟ್ ಆಗಿದೆ. ಉಳಿದ ಇನ್ನೊಂದು ಪಾರ್ಟ್ ಕೂಡ ಜೈಲಿನಲ್ಲೇ ಸೆಟಲ್ಮೆಂಟ್ ಆಗುತ್ತೆ. ನೋಡ್ತಾ ಇರಿ ಇಷ್ಟರಲ್ಲೇ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲು ಸೇರಲಿದ್ದಾರೆ ಎಂದು ಕೆ.ಎಸ್. ಈಶ್ವರಪ್ಪ ಹೇಳಿದರು.
ನಾಡಪ್ರಭು ಕೆಂಪೇಗೌಡ ಅವರು ಡಿಕೆ ಶಿವಕುಮಾರ್ ಅವರ ಆಸ್ತಿಯಲ್ಲ, ತಮ್ಮನ್ನು ರಾಜ್ಯ ಕಟ್ಟಿದ ವ್ಯಕ್ತಿಯ ಜತೆ ಹೋಲಿಸಿಕೊಳ್ಳುವುದು ಸರಿಯಲ್ಲ ಎಂದ ಈಶ್ವರಪ್ಪ ದೇಶ ದ್ರೋಹಿ ಹೇಳಿಕೆ ನೀಡಿದ ಡಿಕೆ ಸುರೇಶ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಕ್ರಮ ಕೈಗೊಳ್ಳಿ ಎಂದರೆ ನನಗೆ ನೊಟೀಸ್ ಕಳುಹಿಸಿ ರಾಷ್ಟ್ರದ್ರೋಹಿಗಳನ್ನು ರಕ್ಷಣೆ ಮಾಡುತ್ತಾರೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…