ಚಾ.ನಗರ ಜಿಲ್ಲಾಸ್ಪತ್ರೆ ಮುಂದೆ ಪೋಷಕರು, ಕಾರ್ಯಕರ್ತರಿಂದ ಪ್ರತಿಭಟನೆ
ಚಾಮರಾಜನಗರ: ತಾಲ್ಲೂಕಿನ ಮುರಟಿಪಾಳ್ಯದ ಅಶ್ವಥ್-ಚಂದ್ರಕಾಂತಿ ಗಿರಿಜನ ದಂಪತಿಯ ೯ ತಿಂಗಳ ಹೆಣ್ಣುಮಗು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದೆ ಎಂದು ಆರೋಪಿಸಿ ಜಿಲ್ಲಾಸ್ಪತ್ರೆ ಮುಂಭಾಗ ಹಲವರು ಬುಧವಾರ ಪ್ರತಿಭಟನೆ ನಡೆಸಿದರು.
ಮಧ್ಯಾಹ್ನ ೧೨.೫೨ರಲ್ಲಿ ಮಗು ಕರೆತಂದಿದ್ದು ಆ ಸಂದರ್ಭದಲ್ಲಿ ವೈದ್ಯರಿಲ್ಲದ ಕಾರಣ ತುರ್ತು ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ್ದರಿಂದ ಮೃತಪಟ್ಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇದೇ ವೇಳೆ ಬಿ.ರಾಚಯ್ಯ ಜೋಡಿರಸ್ತೆಯನ್ನು ಕೆಲಕಾಲ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಸರ್ಜನ್ ಡಾ.ಕೃಷ್ಣಪ್ರಸಾದ್ ಮಾತನಾಡಿ, ಆಸ್ಪತ್ರೆಗೆ ಕರೆತಂದಾಗಲೇ ಮಗುವಿನ ಸ್ಥಿತಿ ಗಂಭೀರವಾಗಿತ್ತು. ನಮ್ಮ ವೈದ್ಯರು ಚಿಕಿತ್ಸೆ ನೀಡಿದ್ದು ಮೈಸೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲು ಮುಂದಾದಾಗ ಹೃದಯಸ್ತಂಭನವಾಗಿದ್ದು ಮತ್ತೆ ಇಲ್ಲೇ ಚಿಕಿತ್ಸೆ ಮುಂದುವರಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ ಎಂದು ಸ್ಪಷ್ಟಪಡಿಸಿದರು.
ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮರಾಜು ಮತ್ತು ಸಿಬ್ಬಂದಿ ಭೇಟಿ ನೀಡಿ ಮನವೊಲಿಸಿದ ಬಳಿಕ ಪ್ರತಿಭಟನೆ ಕೈಬಿಟ್ಟರು. ಜಿಲ್ಲಾಸ್ಪತ್ರೆ ಆಂಬ್ಯುಲೆನ್ಸ್ನಲ್ಲಿ ಮಗುವಿನ ಮೃತದೇಹವನ್ನು ಸ್ವಗ್ರಾಮಕ್ಕೆ ಕಳುಹಿಸಿಕೊಡಲಾಯಿತು.
ಬಿವಿಎಸ್ ಜಿಲ್ಲಾ ಸಂಯೋಜಕ ಪರ್ವತ್ರಾಜ್, ಹೊಂಡರಬಾಳು ವಾಸು, ರಾಮಸಮುದ್ರ ರಾಜು, ದಡದಹಳ್ಳಿ ಮಲ್ಲು ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಆಸ್ಪತ್ರೆಗೆ ಕರೆತಂದಾಗಲೇ ಮಗುವಿನ ಸ್ಥಿತಿ ಗಂಭೀರವಾಗಿತ್ತು. ನಮ್ಮ ವೈದ್ಯರು ಚಿಕಿತ್ಸೆ ನೀಡಿದ್ದು ಮೈಸೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲು ಮುಂದಾದಾಗ ಹೃದಯಸ್ತಂಭನವಾಗಿದ್ದು ಮತ್ತೆ ಇಲ್ಲೇ ಚಿಕಿತ್ಸೆ ಮುಂದುವರಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.
-ಡಾ.ಕೃಷ್ಣಪ್ರಸಾದ್, ಜಿಲ್ಲಾ ಸರ್ಜನ್
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…