ಚಾ.ನಗರ ಜಿಲ್ಲಾಸ್ಪತ್ರೆ ಮುಂದೆ ಪೋಷಕರು, ಕಾರ್ಯಕರ್ತರಿಂದ ಪ್ರತಿಭಟನೆ
ಚಾಮರಾಜನಗರ: ತಾಲ್ಲೂಕಿನ ಮುರಟಿಪಾಳ್ಯದ ಅಶ್ವಥ್-ಚಂದ್ರಕಾಂತಿ ಗಿರಿಜನ ದಂಪತಿಯ ೯ ತಿಂಗಳ ಹೆಣ್ಣುಮಗು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದೆ ಎಂದು ಆರೋಪಿಸಿ ಜಿಲ್ಲಾಸ್ಪತ್ರೆ ಮುಂಭಾಗ ಹಲವರು ಬುಧವಾರ ಪ್ರತಿಭಟನೆ ನಡೆಸಿದರು.
ಮಧ್ಯಾಹ್ನ ೧೨.೫೨ರಲ್ಲಿ ಮಗು ಕರೆತಂದಿದ್ದು ಆ ಸಂದರ್ಭದಲ್ಲಿ ವೈದ್ಯರಿಲ್ಲದ ಕಾರಣ ತುರ್ತು ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ್ದರಿಂದ ಮೃತಪಟ್ಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇದೇ ವೇಳೆ ಬಿ.ರಾಚಯ್ಯ ಜೋಡಿರಸ್ತೆಯನ್ನು ಕೆಲಕಾಲ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಸರ್ಜನ್ ಡಾ.ಕೃಷ್ಣಪ್ರಸಾದ್ ಮಾತನಾಡಿ, ಆಸ್ಪತ್ರೆಗೆ ಕರೆತಂದಾಗಲೇ ಮಗುವಿನ ಸ್ಥಿತಿ ಗಂಭೀರವಾಗಿತ್ತು. ನಮ್ಮ ವೈದ್ಯರು ಚಿಕಿತ್ಸೆ ನೀಡಿದ್ದು ಮೈಸೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲು ಮುಂದಾದಾಗ ಹೃದಯಸ್ತಂಭನವಾಗಿದ್ದು ಮತ್ತೆ ಇಲ್ಲೇ ಚಿಕಿತ್ಸೆ ಮುಂದುವರಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ ಎಂದು ಸ್ಪಷ್ಟಪಡಿಸಿದರು.
ಪೊಲೀಸ್ ಇನ್ಸ್ಪೆಕ್ಟರ್ ತಿಮ್ಮರಾಜು ಮತ್ತು ಸಿಬ್ಬಂದಿ ಭೇಟಿ ನೀಡಿ ಮನವೊಲಿಸಿದ ಬಳಿಕ ಪ್ರತಿಭಟನೆ ಕೈಬಿಟ್ಟರು. ಜಿಲ್ಲಾಸ್ಪತ್ರೆ ಆಂಬ್ಯುಲೆನ್ಸ್ನಲ್ಲಿ ಮಗುವಿನ ಮೃತದೇಹವನ್ನು ಸ್ವಗ್ರಾಮಕ್ಕೆ ಕಳುಹಿಸಿಕೊಡಲಾಯಿತು.
ಬಿವಿಎಸ್ ಜಿಲ್ಲಾ ಸಂಯೋಜಕ ಪರ್ವತ್ರಾಜ್, ಹೊಂಡರಬಾಳು ವಾಸು, ರಾಮಸಮುದ್ರ ರಾಜು, ದಡದಹಳ್ಳಿ ಮಲ್ಲು ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಆಸ್ಪತ್ರೆಗೆ ಕರೆತಂದಾಗಲೇ ಮಗುವಿನ ಸ್ಥಿತಿ ಗಂಭೀರವಾಗಿತ್ತು. ನಮ್ಮ ವೈದ್ಯರು ಚಿಕಿತ್ಸೆ ನೀಡಿದ್ದು ಮೈಸೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲು ಮುಂದಾದಾಗ ಹೃದಯಸ್ತಂಭನವಾಗಿದ್ದು ಮತ್ತೆ ಇಲ್ಲೇ ಚಿಕಿತ್ಸೆ ಮುಂದುವರಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.
-ಡಾ.ಕೃಷ್ಣಪ್ರಸಾದ್, ಜಿಲ್ಲಾ ಸರ್ಜನ್
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…
ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…
ಕನ್ನಡದ ಖಾಸಗಿ ಚಾನೆಲ್ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…
ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…
ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…