ಜಿಲ್ಲೆಗಳು

ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು ಆರೋಪ : ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟನೆ

ಚಾ.ನಗರ ಜಿಲ್ಲಾಸ್ಪತ್ರೆ ಮುಂದೆ ಪೋಷಕರು, ಕಾರ್ಯಕರ್ತರಿಂದ ಪ್ರತಿಭಟನೆ

ಚಾಮರಾಜನಗರ: ತಾಲ್ಲೂಕಿನ ಮುರಟಿಪಾಳ್ಯದ ಅಶ್ವಥ್-ಚಂದ್ರಕಾಂತಿ ಗಿರಿಜನ ದಂಪತಿಯ ೯ ತಿಂಗಳ ಹೆಣ್ಣುಮಗು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದೆ ಎಂದು ಆರೋಪಿಸಿ ಜಿಲ್ಲಾಸ್ಪತ್ರೆ ಮುಂಭಾಗ ಹಲವರು ಬುಧವಾರ ಪ್ರತಿಭಟನೆ ನಡೆಸಿದರು.
ಮಧ್ಯಾಹ್ನ ೧೨.೫೨ರಲ್ಲಿ ಮಗು ಕರೆತಂದಿದ್ದು ಆ ಸಂದರ್ಭದಲ್ಲಿ ವೈದ್ಯರಿಲ್ಲದ ಕಾರಣ ತುರ್ತು ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ್ದರಿಂದ ಮೃತಪಟ್ಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇದೇ ವೇಳೆ ಬಿ.ರಾಚಯ್ಯ ಜೋಡಿರಸ್ತೆಯನ್ನು ಕೆಲಕಾಲ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಸರ್ಜನ್ ಡಾ.ಕೃಷ್ಣಪ್ರಸಾದ್  ಮಾತನಾಡಿ, ಆಸ್ಪತ್ರೆಗೆ ಕರೆತಂದಾಗಲೇ ಮಗುವಿನ ಸ್ಥಿತಿ ಗಂಭೀರವಾಗಿತ್ತು. ನಮ್ಮ ವೈದ್ಯರು ಚಿಕಿತ್ಸೆ ನೀಡಿದ್ದು ಮೈಸೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲು ಮುಂದಾದಾಗ ಹೃದಯಸ್ತಂಭನವಾಗಿದ್ದು ಮತ್ತೆ ಇಲ್ಲೇ ಚಿಕಿತ್ಸೆ ಮುಂದುವರಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ ಎಂದು ಸ್ಪಷ್ಟಪಡಿಸಿದರು.
ಪೊಲೀಸ್ ಇನ್ಸ್‌ಪೆಕ್ಟರ್ ತಿಮ್ಮರಾಜು ಮತ್ತು ಸಿಬ್ಬಂದಿ ಭೇಟಿ ನೀಡಿ ಮನವೊಲಿಸಿದ ಬಳಿಕ ಪ್ರತಿಭಟನೆ ಕೈಬಿಟ್ಟರು. ಜಿಲ್ಲಾಸ್ಪತ್ರೆ ಆಂಬ್ಯುಲೆನ್ಸ್‌ನಲ್ಲಿ ಮಗುವಿನ ಮೃತದೇಹವನ್ನು ಸ್ವಗ್ರಾಮಕ್ಕೆ ಕಳುಹಿಸಿಕೊಡಲಾಯಿತು.

ಬಿವಿಎಸ್ ಜಿಲ್ಲಾ ಸಂಯೋಜಕ  ಪರ್ವತ್‌ರಾಜ್, ಹೊಂಡರಬಾಳು ವಾಸು, ರಾಮಸಮುದ್ರ ರಾಜು, ದಡದಹಳ್ಳಿ ಮಲ್ಲು ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


ಆಸ್ಪತ್ರೆಗೆ ಕರೆತಂದಾಗಲೇ ಮಗುವಿನ ಸ್ಥಿತಿ ಗಂಭೀರವಾಗಿತ್ತು. ನಮ್ಮ ವೈದ್ಯರು ಚಿಕಿತ್ಸೆ ನೀಡಿದ್ದು ಮೈಸೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲು ಮುಂದಾದಾಗ ಹೃದಯಸ್ತಂಭನವಾಗಿದ್ದು ಮತ್ತೆ ಇಲ್ಲೇ ಚಿಕಿತ್ಸೆ ಮುಂದುವರಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.

-ಡಾ.ಕೃಷ್ಣಪ್ರಸಾದ್, ಜಿಲ್ಲಾ ಸರ್ಜನ್

andolanait

Recent Posts

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

10 mins ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

1 hour ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

2 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

10 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಚಿತ್ರೋದ್ಯಮವೂ ಪೈರಸಿ ಎಂಬ ಪೆಡಂಬೂತವೂ

ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್‌ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…

10 hours ago