ಜಿಲ್ಲೆಗಳು

ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು ಆರೋಪ : ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟನೆ

ಚಾ.ನಗರ ಜಿಲ್ಲಾಸ್ಪತ್ರೆ ಮುಂದೆ ಪೋಷಕರು, ಕಾರ್ಯಕರ್ತರಿಂದ ಪ್ರತಿಭಟನೆ

ಚಾಮರಾಜನಗರ: ತಾಲ್ಲೂಕಿನ ಮುರಟಿಪಾಳ್ಯದ ಅಶ್ವಥ್-ಚಂದ್ರಕಾಂತಿ ಗಿರಿಜನ ದಂಪತಿಯ ೯ ತಿಂಗಳ ಹೆಣ್ಣುಮಗು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದೆ ಎಂದು ಆರೋಪಿಸಿ ಜಿಲ್ಲಾಸ್ಪತ್ರೆ ಮುಂಭಾಗ ಹಲವರು ಬುಧವಾರ ಪ್ರತಿಭಟನೆ ನಡೆಸಿದರು.
ಮಧ್ಯಾಹ್ನ ೧೨.೫೨ರಲ್ಲಿ ಮಗು ಕರೆತಂದಿದ್ದು ಆ ಸಂದರ್ಭದಲ್ಲಿ ವೈದ್ಯರಿಲ್ಲದ ಕಾರಣ ತುರ್ತು ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ್ದರಿಂದ ಮೃತಪಟ್ಟಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಇದೇ ವೇಳೆ ಬಿ.ರಾಚಯ್ಯ ಜೋಡಿರಸ್ತೆಯನ್ನು ಕೆಲಕಾಲ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಸರ್ಜನ್ ಡಾ.ಕೃಷ್ಣಪ್ರಸಾದ್  ಮಾತನಾಡಿ, ಆಸ್ಪತ್ರೆಗೆ ಕರೆತಂದಾಗಲೇ ಮಗುವಿನ ಸ್ಥಿತಿ ಗಂಭೀರವಾಗಿತ್ತು. ನಮ್ಮ ವೈದ್ಯರು ಚಿಕಿತ್ಸೆ ನೀಡಿದ್ದು ಮೈಸೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲು ಮುಂದಾದಾಗ ಹೃದಯಸ್ತಂಭನವಾಗಿದ್ದು ಮತ್ತೆ ಇಲ್ಲೇ ಚಿಕಿತ್ಸೆ ಮುಂದುವರಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ ಎಂದು ಸ್ಪಷ್ಟಪಡಿಸಿದರು.
ಪೊಲೀಸ್ ಇನ್ಸ್‌ಪೆಕ್ಟರ್ ತಿಮ್ಮರಾಜು ಮತ್ತು ಸಿಬ್ಬಂದಿ ಭೇಟಿ ನೀಡಿ ಮನವೊಲಿಸಿದ ಬಳಿಕ ಪ್ರತಿಭಟನೆ ಕೈಬಿಟ್ಟರು. ಜಿಲ್ಲಾಸ್ಪತ್ರೆ ಆಂಬ್ಯುಲೆನ್ಸ್‌ನಲ್ಲಿ ಮಗುವಿನ ಮೃತದೇಹವನ್ನು ಸ್ವಗ್ರಾಮಕ್ಕೆ ಕಳುಹಿಸಿಕೊಡಲಾಯಿತು.

ಬಿವಿಎಸ್ ಜಿಲ್ಲಾ ಸಂಯೋಜಕ  ಪರ್ವತ್‌ರಾಜ್, ಹೊಂಡರಬಾಳು ವಾಸು, ರಾಮಸಮುದ್ರ ರಾಜು, ದಡದಹಳ್ಳಿ ಮಲ್ಲು ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.


ಆಸ್ಪತ್ರೆಗೆ ಕರೆತಂದಾಗಲೇ ಮಗುವಿನ ಸ್ಥಿತಿ ಗಂಭೀರವಾಗಿತ್ತು. ನಮ್ಮ ವೈದ್ಯರು ಚಿಕಿತ್ಸೆ ನೀಡಿದ್ದು ಮೈಸೂರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲು ಮುಂದಾದಾಗ ಹೃದಯಸ್ತಂಭನವಾಗಿದ್ದು ಮತ್ತೆ ಇಲ್ಲೇ ಚಿಕಿತ್ಸೆ ಮುಂದುವರಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ.

-ಡಾ.ಕೃಷ್ಣಪ್ರಸಾದ್, ಜಿಲ್ಲಾ ಸರ್ಜನ್

andolanait

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

3 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

7 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

9 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

10 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

15 hours ago