ಜಿಲ್ಲೆಗಳು

ದೊಡ್ಡಗಟ್ಟಿ ಪ್ರಕಾಶನದಿಂದ ‘ಮಹಾ ದಾಸೋಹಿ’ ಕೃತಿ ಬಿಡುಗಡೆ

ಮೈಸೂರು: ಕಾಯಕ ಮತ್ತು ದಾಸೋಹದ ತತ್ವ, ಸಜ್ಜನಿಕೆ, ಸರಳತೆ, ಅರಿವಿನ ನಾಡಿನ ಪ್ರಖ್ಯಾತ ಧರ್ಮಗುರು, ಮಹಾಚೇತನ ಗುರುಮಲ್ಲೇಶ್ವರರು ಎಂದು ವಿದ್ವಾಂಸ ಡಾ.ಗೊ.ರು.ಚನ್ನಬಸಪ್ಪ ಹೇಳಿದರು.

ನಗರದ ಅಗ್ರಹಾರದ ಜೆಎಸ್‌ಎಸ್ ಶ್ರೀ ರಾಜೇಂದ್ರ ಭವನದಲ್ಲಿ ದೊಡ್ಡಗಟ್ಟಿ ಪ್ರಕಾಶನ  ಸಂಸ್ಥೆಯು ಹೊರ ತಂದಿರುವ ‘ಮಹಾ ದಾಸೋಹಿ’ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ನೂರಾರು ವರ್ಷಗಳಿಂದ ಹಸಿದವರಿಗೆ ದೇವನೂರು ಗುರುಮಲ್ಲೇಶ್ವರ ಮಠ ದಾಸೋಹ ನಡೆಸುತ್ತ ಬಂದಿದೆ. ಇಂತಹ ಅನ್ನದಾಸೋಹ ಪರಂಪರೆಯನ್ನುಗುರು ಮಲ್ಲೇಶ್ವರರು ಹುಟ್ಟು ಹಾಕಿ. ಹಸಿದು ಬಂದವರಿಗೆ ದಾಸೋಹ ನೀಡಲು ಜೋಳಿಗೆ ಹಿಡಿದು ಮನೆ ಮನೆಗೆ ಹೋಗಿ ಅನ್ನ ಭಿಕ್ಷೆ ಪಡೆದು ಬರುತ್ತಿದ್ದರು ಎಂದರು.

ಆ ಪರಂಪರೆ ಇಂದಿಗೂ ಮುಂದುವರಿದೆ. ಲೇಖಕರು ಪುಸ್ತಕವನ್ನು ಕಳುಹಿಸುವ ಜೊತೆಗೆ ಕಾರ್ಯಕ್ರಮಕ್ಕೆ ಪತ್ರ ಕೂಡ ಹಾಕಿದ್ದರು. ದೊಡ್ಡ ವ್ಯಕ್ತಿತ್ವ ಕುರಿತು ಪುಸ್ತಕ ಬರೆದಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಬಾರದೆ ಇರಲು ಸಾಧ್ಯವಿಲ್ಲ. ಹಾಗಾಗಿ ಬಂದಿರುವೆ ಎಂದರು.

ಲೇಖಕರು ಕೃತಿಯಲ್ಲಿ ಶರಣ ಸಾಹಿತ್ಯದ ಸಂದೇಶಗಳನ್ನು ಅಳವಡಿಸಿದ್ದಾರೆ. ಕಾದಂಬರಿ ಪ್ರಕಾರವನ್ನು ಬಳಸಿದ್ದಾರೆ. ಈ ಕೃತಿಗಾಗಿ ೫೦ ಆಕಾರ ಗ್ರಂಥಗಳನ್ನು ಅಧ್ಯಯನ ಮಾಡಿದ್ದು, ಗುರುಮಲ್ಲೇಶ್ವರರು ಪವಾಡ ಪುರುಷರೆಂದು ಕೃತಿಯಲ್ಲಿ ದಾಖಲಿಸಲಾಗಿದೆ. ಪವಾಡವೆಂದರೆ ಮಂತ್ರದಿಂದ ಮಾಡುವುದಲ್ಲ. ಒರಟನಾದವನನ್ನು ಸಾತ್ವಿಕವಾಗಿ ಮಾಡುವುದೇ ಪವಾಡ. ಒಂದು ಕಾಲಮಾನದ ನೈಜ ಅಂಶಗಳನ್ನು ದಾಖಲು ಮಾಡಿದ್ದಾರೆ ಎಂದು ಹೇಳಿದರು.

ಗುರುಮಲ್ಲೇಶ್ವರರು ವಿರಾಟ ಚೇತನ ಅವರು ದಾಖಲಿಸಲಿರುವ ಪುಸ್ತಕ ಇದು. ಗುರುಮಲ್ಲೇಶ್ವರರು ಶ್ರೇಷ್ಠ ಲೋಕ ಪ್ರಜ್ಞಾ ಜೀವಿ. ಅವರ ಬಗ್ಗೆ ಇಂದಿನ ತಲೆಮಾರಿಗೆ ತಿಳಿಸಲು ೭೦೦ ಪುಟಗಳ ಬೃಹತ್ ಗ್ರಂಥವನ್ನು ಲೇಖಕರು ರಚಿಸಿದ್ದಾರೆ ಎಂದು ಬಣ್ಣಿಸಿದರು.

ಗುಂಡ್ಲುಪೇಟೆ ತಾಲ್ಲೂಕಿನ ಸೋಮಳ್ಳಿಯ ಶ್ರೀ ವೀರಸಿಂಹಾಸನ ಶಿಲಾಮಠದ ಶ್ರೀ ಸಿದ್ದಮಲ್ಲ ಸ್ವಾಮೀಜಿ, ಶ್ರೀ ನಟರಾಜ ಶಿಕ್ಷಣ ಸಂಸ್ಥೆಯ ವಿಶೇಷಾಧಿಕಾರಿ ಡಾ.ಎಸ್.ಶಿವರಾಜಪ್ಪ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಮಲೆಯೂರು ಗುರುಸ್ವಾಮಿ, ಪರಿಷತ್ತಿನ ಜಿಲ್ಲಾಧ್ಯಕ್ಷ ಸಿದ್ದಪ್ಪ, ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಚಂದ್ರಶೇಖರ್ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.


ಶೂನ್ಯದ ಭಾಷೆ:

೪೫೦ ವರ್ಷಗಳ ಹಿಂದೆ ಮಹಾರಾಷ್ಟ್ರದಲ್ಲಿ ಏಕನಾಥ, ನಿವೃತಿ ನಾಥ ಮತ್ತು ಮುಕ್ತಬಾಯಿ ಎಂಬ ಮೂರು ಜನ ಸಂತರಿದ್ದರು. ಏಕನಾಥರು ಪತ್ರವೊಂದನ್ನು ಬರೆದು, ತಮ್ಮ ಶಿಷ್ಯನ ಕೈಯಲ್ಲಿ ಕೊಟ್ಟು ನಿವೃತ್ತಿ ನಾಥನಿಗೆ ತಲುಪಿಸಲು ಹೇಳಿದರು. ನಿವೃತಿನಾಥರು ಪತ್ರವನ್ನು ಓದಿ ಕಣ್ಣಿಗೆ ಒತ್ತಿಕೊಂಡು ಆ ಶಿಷ್ಯನ ಕೈಯಲ್ಲಿಯೇ ಮುಕ್ತಬಾಯಿ ಅವರಿಗೆ ತಲುಪಿಸಿದರು. ಮುಕ್ತಬಾಯಿ ಅವರು ಪತ್ರವನ್ನು ನೋಡಿ, ಮತ್ತೆ ಏಕನಾಥನಿಗೆ ತಲುಪಿಸುವಂತೆ ಶಿಷ್ಯನಿಗೆ ಕೊಟ್ಟರು. ಈ ವೇಳೆ ಶಿಷ್ಯನು ತನ್ನ ಕುತೂಹಲ ತಡೆಯಲಾರದೆ ಪತ್ರವನ್ನು ತೆರೆದು ನೋಡಿಯೇ ಬಿಟ್ಟನು. ಆ ಪತ್ರವೂ ಖಾಳೆ ಅಳೆಯಾಗಿತ್ತು. ಮತ್ತೆ ಅದನ್ನು ಏಕನಾಥನ ಕೈಗೆ ಕೊಟ್ಟು ಗುರುಗಳೇ ಇದರಲ್ಲಿ ಏನು ಇಲ್ಲ… ಇದರ ಅರ್ಥ ಏನೆಂದು ಕೇಳುತ್ತಾನೆ.

ಆಗ ಏಕನಾಥರು, ‘ಬದುಕಿಗೆ ಬೇಕಾದ ಎಲ್ಲವೂ ಖಾಲಿ ಅಳೆಯಲ್ಲಿಯೇ ಇದೆ. ಆದರೆ, ಇಲ್ಲಿರುವ ಭಾಷೆ ಶೂನ್ಯ ಭಾಷೆಯಾಗಿದೆ. ಇದನ್ನು ಅರ್ಥ ಮಾಡಿಕೊಳ್ಳಲು ಬೇಕಿರುವುದು ಅಂತರಂಗ. ಆಗ ಶೂನ್ಯ ಭಾಷೆ ಕಲಿಯಲು ಏನು ಬೇಕೆಂದು ಪ್ರಶ್ನೆ ಕೇಳುತ್ತಾನೆ ಆಗ ಜ್ಞಾನ ಮತ್ತು ಮೌನದ ಮೂಲಕ ಶೂನ್ಯ ಭಾಷೆಯನ್ನು ಅರ್ಥ ಮಾಡಿಕೊಳ್ಳಬಹುದು’ ಸಂದೇಶವನ್ನು ಕಥೆಯ ಮೂಲಕ ಡಾ.ಗೊ.ರು.ಚನ್ನಬಸಪ್ಪ ಬಿಡಿಸಿ ಹೇಳಿದರು.

andolanait

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

1 hour ago

2025ರ ನೆನಪು: ಅಗಲಿದ ಗಣ್ಯರ ನೆನಪಿನ ಮಾಲಿಕೆ…

2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ  ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…

1 hour ago

ಆಪರೇಟರ್ ಸಮಯ ಪ್ರಜ್ಞೆ: ನಕಲಿ ಜಿಪಿಎಗೆ ಬ್ರೇಕ್

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…

1 hour ago

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

11 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

13 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

13 hours ago