ಜಿಲ್ಲೆಗಳು

ದೊಡ್ಡಗಟ್ಟಿ ಪ್ರಕಾಶನದಿಂದ ‘ಮಹಾ ದಾಸೋಹಿ’ ಕೃತಿ ಬಿಡುಗಡೆ

ಮೈಸೂರು: ಕಾಯಕ ಮತ್ತು ದಾಸೋಹದ ತತ್ವ, ಸಜ್ಜನಿಕೆ, ಸರಳತೆ, ಅರಿವಿನ ನಾಡಿನ ಪ್ರಖ್ಯಾತ ಧರ್ಮಗುರು, ಮಹಾಚೇತನ ಗುರುಮಲ್ಲೇಶ್ವರರು ಎಂದು ವಿದ್ವಾಂಸ ಡಾ.ಗೊ.ರು.ಚನ್ನಬಸಪ್ಪ ಹೇಳಿದರು.

ನಗರದ ಅಗ್ರಹಾರದ ಜೆಎಸ್‌ಎಸ್ ಶ್ರೀ ರಾಜೇಂದ್ರ ಭವನದಲ್ಲಿ ದೊಡ್ಡಗಟ್ಟಿ ಪ್ರಕಾಶನ  ಸಂಸ್ಥೆಯು ಹೊರ ತಂದಿರುವ ‘ಮಹಾ ದಾಸೋಹಿ’ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ನೂರಾರು ವರ್ಷಗಳಿಂದ ಹಸಿದವರಿಗೆ ದೇವನೂರು ಗುರುಮಲ್ಲೇಶ್ವರ ಮಠ ದಾಸೋಹ ನಡೆಸುತ್ತ ಬಂದಿದೆ. ಇಂತಹ ಅನ್ನದಾಸೋಹ ಪರಂಪರೆಯನ್ನುಗುರು ಮಲ್ಲೇಶ್ವರರು ಹುಟ್ಟು ಹಾಕಿ. ಹಸಿದು ಬಂದವರಿಗೆ ದಾಸೋಹ ನೀಡಲು ಜೋಳಿಗೆ ಹಿಡಿದು ಮನೆ ಮನೆಗೆ ಹೋಗಿ ಅನ್ನ ಭಿಕ್ಷೆ ಪಡೆದು ಬರುತ್ತಿದ್ದರು ಎಂದರು.

ಆ ಪರಂಪರೆ ಇಂದಿಗೂ ಮುಂದುವರಿದೆ. ಲೇಖಕರು ಪುಸ್ತಕವನ್ನು ಕಳುಹಿಸುವ ಜೊತೆಗೆ ಕಾರ್ಯಕ್ರಮಕ್ಕೆ ಪತ್ರ ಕೂಡ ಹಾಕಿದ್ದರು. ದೊಡ್ಡ ವ್ಯಕ್ತಿತ್ವ ಕುರಿತು ಪುಸ್ತಕ ಬರೆದಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಬಾರದೆ ಇರಲು ಸಾಧ್ಯವಿಲ್ಲ. ಹಾಗಾಗಿ ಬಂದಿರುವೆ ಎಂದರು.

ಲೇಖಕರು ಕೃತಿಯಲ್ಲಿ ಶರಣ ಸಾಹಿತ್ಯದ ಸಂದೇಶಗಳನ್ನು ಅಳವಡಿಸಿದ್ದಾರೆ. ಕಾದಂಬರಿ ಪ್ರಕಾರವನ್ನು ಬಳಸಿದ್ದಾರೆ. ಈ ಕೃತಿಗಾಗಿ ೫೦ ಆಕಾರ ಗ್ರಂಥಗಳನ್ನು ಅಧ್ಯಯನ ಮಾಡಿದ್ದು, ಗುರುಮಲ್ಲೇಶ್ವರರು ಪವಾಡ ಪುರುಷರೆಂದು ಕೃತಿಯಲ್ಲಿ ದಾಖಲಿಸಲಾಗಿದೆ. ಪವಾಡವೆಂದರೆ ಮಂತ್ರದಿಂದ ಮಾಡುವುದಲ್ಲ. ಒರಟನಾದವನನ್ನು ಸಾತ್ವಿಕವಾಗಿ ಮಾಡುವುದೇ ಪವಾಡ. ಒಂದು ಕಾಲಮಾನದ ನೈಜ ಅಂಶಗಳನ್ನು ದಾಖಲು ಮಾಡಿದ್ದಾರೆ ಎಂದು ಹೇಳಿದರು.

ಗುರುಮಲ್ಲೇಶ್ವರರು ವಿರಾಟ ಚೇತನ ಅವರು ದಾಖಲಿಸಲಿರುವ ಪುಸ್ತಕ ಇದು. ಗುರುಮಲ್ಲೇಶ್ವರರು ಶ್ರೇಷ್ಠ ಲೋಕ ಪ್ರಜ್ಞಾ ಜೀವಿ. ಅವರ ಬಗ್ಗೆ ಇಂದಿನ ತಲೆಮಾರಿಗೆ ತಿಳಿಸಲು ೭೦೦ ಪುಟಗಳ ಬೃಹತ್ ಗ್ರಂಥವನ್ನು ಲೇಖಕರು ರಚಿಸಿದ್ದಾರೆ ಎಂದು ಬಣ್ಣಿಸಿದರು.

ಗುಂಡ್ಲುಪೇಟೆ ತಾಲ್ಲೂಕಿನ ಸೋಮಳ್ಳಿಯ ಶ್ರೀ ವೀರಸಿಂಹಾಸನ ಶಿಲಾಮಠದ ಶ್ರೀ ಸಿದ್ದಮಲ್ಲ ಸ್ವಾಮೀಜಿ, ಶ್ರೀ ನಟರಾಜ ಶಿಕ್ಷಣ ಸಂಸ್ಥೆಯ ವಿಶೇಷಾಧಿಕಾರಿ ಡಾ.ಎಸ್.ಶಿವರಾಜಪ್ಪ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಮಲೆಯೂರು ಗುರುಸ್ವಾಮಿ, ಪರಿಷತ್ತಿನ ಜಿಲ್ಲಾಧ್ಯಕ್ಷ ಸಿದ್ದಪ್ಪ, ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ್ಷ ಚಂದ್ರಶೇಖರ್ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.


ಶೂನ್ಯದ ಭಾಷೆ:

೪೫೦ ವರ್ಷಗಳ ಹಿಂದೆ ಮಹಾರಾಷ್ಟ್ರದಲ್ಲಿ ಏಕನಾಥ, ನಿವೃತಿ ನಾಥ ಮತ್ತು ಮುಕ್ತಬಾಯಿ ಎಂಬ ಮೂರು ಜನ ಸಂತರಿದ್ದರು. ಏಕನಾಥರು ಪತ್ರವೊಂದನ್ನು ಬರೆದು, ತಮ್ಮ ಶಿಷ್ಯನ ಕೈಯಲ್ಲಿ ಕೊಟ್ಟು ನಿವೃತ್ತಿ ನಾಥನಿಗೆ ತಲುಪಿಸಲು ಹೇಳಿದರು. ನಿವೃತಿನಾಥರು ಪತ್ರವನ್ನು ಓದಿ ಕಣ್ಣಿಗೆ ಒತ್ತಿಕೊಂಡು ಆ ಶಿಷ್ಯನ ಕೈಯಲ್ಲಿಯೇ ಮುಕ್ತಬಾಯಿ ಅವರಿಗೆ ತಲುಪಿಸಿದರು. ಮುಕ್ತಬಾಯಿ ಅವರು ಪತ್ರವನ್ನು ನೋಡಿ, ಮತ್ತೆ ಏಕನಾಥನಿಗೆ ತಲುಪಿಸುವಂತೆ ಶಿಷ್ಯನಿಗೆ ಕೊಟ್ಟರು. ಈ ವೇಳೆ ಶಿಷ್ಯನು ತನ್ನ ಕುತೂಹಲ ತಡೆಯಲಾರದೆ ಪತ್ರವನ್ನು ತೆರೆದು ನೋಡಿಯೇ ಬಿಟ್ಟನು. ಆ ಪತ್ರವೂ ಖಾಳೆ ಅಳೆಯಾಗಿತ್ತು. ಮತ್ತೆ ಅದನ್ನು ಏಕನಾಥನ ಕೈಗೆ ಕೊಟ್ಟು ಗುರುಗಳೇ ಇದರಲ್ಲಿ ಏನು ಇಲ್ಲ… ಇದರ ಅರ್ಥ ಏನೆಂದು ಕೇಳುತ್ತಾನೆ.

ಆಗ ಏಕನಾಥರು, ‘ಬದುಕಿಗೆ ಬೇಕಾದ ಎಲ್ಲವೂ ಖಾಲಿ ಅಳೆಯಲ್ಲಿಯೇ ಇದೆ. ಆದರೆ, ಇಲ್ಲಿರುವ ಭಾಷೆ ಶೂನ್ಯ ಭಾಷೆಯಾಗಿದೆ. ಇದನ್ನು ಅರ್ಥ ಮಾಡಿಕೊಳ್ಳಲು ಬೇಕಿರುವುದು ಅಂತರಂಗ. ಆಗ ಶೂನ್ಯ ಭಾಷೆ ಕಲಿಯಲು ಏನು ಬೇಕೆಂದು ಪ್ರಶ್ನೆ ಕೇಳುತ್ತಾನೆ ಆಗ ಜ್ಞಾನ ಮತ್ತು ಮೌನದ ಮೂಲಕ ಶೂನ್ಯ ಭಾಷೆಯನ್ನು ಅರ್ಥ ಮಾಡಿಕೊಳ್ಳಬಹುದು’ ಸಂದೇಶವನ್ನು ಕಥೆಯ ಮೂಲಕ ಡಾ.ಗೊ.ರು.ಚನ್ನಬಸಪ್ಪ ಬಿಡಿಸಿ ಹೇಳಿದರು.

andolanait

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

1 hour ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

2 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

2 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

2 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

4 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

4 hours ago