ಜಿಲ್ಲೆಗಳು

ದೊಡ್ಡಹೆಜ್ಜೂರು: ವಿದ್ಯಾರ್ಥಿಗಳಿಗೆ ಸಮವಸ್ತ್ರ, ಕ್ರೀಡಾ ಸಾಮಗ್ರಿ ವಿತರಣೆ

ಹುಣಸೂರು:  ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಲಾ ಗೈಡ್ ಕಾನೂನು ಮಾಸ ಪತ್ರಿಕೆಯ ಸಂಪಾದಕ ವಕೀಲ ವೆಂಕಟೇಶ್ ಅವರು ಉಚಿತವಾಗಿ ಸಮವಸ್ತ್ರ ಮತ್ತು ಕ್ರೀಡಾ ಸಾಮಗ್ರಿಗಳನ್ನು ಇಂದು ವಿತರಿಸಿದರು.

ವಿದ್ಯಾರ್ಥಿಗಳಿಗೆ ನಗದು ಬಹುಮಾನ

ಕ್ರೀಡಾಪಟುಗಳು ಇತ್ತೀಚಿನ ದಿನಗಳಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಮುಂದೆ ಬರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ವಿದ್ಯಾರ್ಥಿಗಳಿಗೆ ನಗದು ಬಹುಮಾನ

ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಅವರು ಮಾತನಾಡಿ ಕ್ರೀಡಾ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸುವುದು ಬಹು ಮುಖ್ಯ. ಸೋಲು ಗೆಲುವುಗಳನ್ನು ಕ್ರೀಡಾಪಟುಗಳು ಸಮಾನವಾಗಿ ಸ್ವೀಕರಿಸುವುದರೊಂದಿಗೆ ಕ್ರೀಡಾಭಿಮಾನವನ್ನು ಮೆರೆಯಬೇಕು ಎಂದರು.

ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ದಾರಾ ಮಹೇಶ್ ಅವರು ಮಾತನಾಡಿ ವೆಂಕಟೇಶ್ ಅವರ ತಂದೆ ದಿವಂಗತ ನಿಂಗೆ ಗೌಡ ಅವರು ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದಾರೆ ಅಂತವರ ಮಕ್ಕಳು ಇದೇ ಹಾದಿಯಲ್ಲಿ ಸಾಗುವ ಮೂಲಕ ಶಾಲೆಗೆ  ಸೇವೆ ಮಾಡಲು ಪ್ರಾರಂಭಿಸಿರುವುದು ಸಂಗತಿ ಎಂದರು.

ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಇದೇ ವೇಳೆ 10ನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ನೀಡಲಾಯಿತು. ಮೊದಲ ಬಹುಮಾನ 5,000, ಎರಡನೇ ಬಹುಮಾನ 3000, ಮೂರನೇ ಬಹುಮಾನ 25000ಗಳನ್ನು ನೀಡಲಾಯಿತು. ಜೊತೆಗೆ ಪ್ರತಿವರ್ಷ 10ನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಮೂರು ವಿದ್ಯಾರ್ಥಿಗಳಿಗೆ ಶ್ರೀಮತಿ ಎಂ ಬಿ ಲಲಿತಮ್ಮ ಹಾಗೂ ನಿಂಗೇಗೌಡ ಅವರ ನೆನಪಿನಾರ್ಥವಾಗಿ ಬಹುಮಾನ ನೀಡಲಾಗುವುದು ಎಂದು ಲಾ ಗೈಡ್ ಕಾನೂನು ಮಾಸಪತ್ರಿಕೆ ಸಂಪಾದಕರಾದ ವೆಂಕಟೇಶ್ ಅವರು ತಿಳಿಸಿದರು.

ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಕಾರ್ಯಕ್ರಮದಲ್ಲಿ ಮಾಜಿ ಚೇರ್ಮನ್ ಮರಿಲಿಂಗೇಗೌಡ, ರಮೇಶ್ ವೀರಣ್ಣ ಕರಡಿ, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಉಪಸ್ಥಿತರಿದ್ದರು.

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

6 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

6 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

7 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

7 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

17 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

17 hours ago