ಜಿಲ್ಲೆಗಳು

ದೊಡ್ಡಹೆಜ್ಜೂರು: ವಿದ್ಯಾರ್ಥಿಗಳಿಗೆ ಸಮವಸ್ತ್ರ, ಕ್ರೀಡಾ ಸಾಮಗ್ರಿ ವಿತರಣೆ

ಹುಣಸೂರು:  ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಲಾ ಗೈಡ್ ಕಾನೂನು ಮಾಸ ಪತ್ರಿಕೆಯ ಸಂಪಾದಕ ವಕೀಲ ವೆಂಕಟೇಶ್ ಅವರು ಉಚಿತವಾಗಿ ಸಮವಸ್ತ್ರ ಮತ್ತು ಕ್ರೀಡಾ ಸಾಮಗ್ರಿಗಳನ್ನು ಇಂದು ವಿತರಿಸಿದರು.

ವಿದ್ಯಾರ್ಥಿಗಳಿಗೆ ನಗದು ಬಹುಮಾನ

ಕ್ರೀಡಾಪಟುಗಳು ಇತ್ತೀಚಿನ ದಿನಗಳಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಮುಂದೆ ಬರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ವಿದ್ಯಾರ್ಥಿಗಳಿಗೆ ನಗದು ಬಹುಮಾನ

ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಅವರು ಮಾತನಾಡಿ ಕ್ರೀಡಾ ಚಟುವಟಿಕೆಗಳಲ್ಲಿ ಮಕ್ಕಳು ಭಾಗವಹಿಸುವುದು ಬಹು ಮುಖ್ಯ. ಸೋಲು ಗೆಲುವುಗಳನ್ನು ಕ್ರೀಡಾಪಟುಗಳು ಸಮಾನವಾಗಿ ಸ್ವೀಕರಿಸುವುದರೊಂದಿಗೆ ಕ್ರೀಡಾಭಿಮಾನವನ್ನು ಮೆರೆಯಬೇಕು ಎಂದರು.

ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ದಾರಾ ಮಹೇಶ್ ಅವರು ಮಾತನಾಡಿ ವೆಂಕಟೇಶ್ ಅವರ ತಂದೆ ದಿವಂಗತ ನಿಂಗೆ ಗೌಡ ಅವರು ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದಾರೆ ಅಂತವರ ಮಕ್ಕಳು ಇದೇ ಹಾದಿಯಲ್ಲಿ ಸಾಗುವ ಮೂಲಕ ಶಾಲೆಗೆ  ಸೇವೆ ಮಾಡಲು ಪ್ರಾರಂಭಿಸಿರುವುದು ಸಂಗತಿ ಎಂದರು.

ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಇದೇ ವೇಳೆ 10ನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ನೀಡಲಾಯಿತು. ಮೊದಲ ಬಹುಮಾನ 5,000, ಎರಡನೇ ಬಹುಮಾನ 3000, ಮೂರನೇ ಬಹುಮಾನ 25000ಗಳನ್ನು ನೀಡಲಾಯಿತು. ಜೊತೆಗೆ ಪ್ರತಿವರ್ಷ 10ನೇ ತರಗತಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಮೂರು ವಿದ್ಯಾರ್ಥಿಗಳಿಗೆ ಶ್ರೀಮತಿ ಎಂ ಬಿ ಲಲಿತಮ್ಮ ಹಾಗೂ ನಿಂಗೇಗೌಡ ಅವರ ನೆನಪಿನಾರ್ಥವಾಗಿ ಬಹುಮಾನ ನೀಡಲಾಗುವುದು ಎಂದು ಲಾ ಗೈಡ್ ಕಾನೂನು ಮಾಸಪತ್ರಿಕೆ ಸಂಪಾದಕರಾದ ವೆಂಕಟೇಶ್ ಅವರು ತಿಳಿಸಿದರು.

ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

ಕಾರ್ಯಕ್ರಮದಲ್ಲಿ ಮಾಜಿ ಚೇರ್ಮನ್ ಮರಿಲಿಂಗೇಗೌಡ, ರಮೇಶ್ ವೀರಣ್ಣ ಕರಡಿ, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಉಪಸ್ಥಿತರಿದ್ದರು.

andolanait

Recent Posts

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

39 mins ago

ಓದುಗರ ಪತ್ರ: ಡಿಕೆಶಿ ಸೂಚನೆ ಸ್ವಾಗತಾರ್ಹ

ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…

3 hours ago

ಓದುಗರ ಪತ್ರ: ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೇ ದಾಖಲಿಸಲಿ

ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…

4 hours ago

ಓದುಗರ ಪತ್ರ: ಮಲತಾಯಿ ಧೋರಣೆ ಏಕೆ?

ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ:  ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…

4 hours ago

ಗಾಂಧಿ ಅನುಸಂಧಾನದ ವೈರುಧ್ಯಗಳು

ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…

4 hours ago