ಜಿಲ್ಲೆಗಳು

‘ತಾಲ್ಲೂಕು ಕಚೇರಿಯಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡಬೇಡಿ’

ಪಿರಿಯಾಪಟ್ಟಣ: ʼಆಂದೋಲನʼದಲ್ಲಿ ಪ್ರಕಟವಾದ ವರದಿ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಎಚ್ಚರಿಕೆ ನೀಡಿದ ತಹಸಿಲ್ದಾರ್

ಪಿರಿಯಾಪಟ್ಟಣ: ತಾಲ್ಲೂಕು ಕಚೇರಿಯಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು ಎಂದು ಕಚೇರಿ ಸಿಬ್ಬಂದಿಗಳಿಗೆ ತಹಸಿಲ್ದಾರ್ ಚಂದ್ರಮೌಳಿ ಕಠಿಣ ಎಚ್ಚರಿಕೆ ನೀಡಿದ್ದಾರೆ.

ತಾಲ್ಲೂಕು ಕಚೇರಿಯಲ್ಲಿ ಜನರ ಕೆಲಸ ಕಾರ್ಯ ಮಾಡಿಕೊಡಲು ವಿಳಂಬ ಮಾಡುತ್ತಿರುವ ಮತ್ತು ಕೆಲ ಸಿಬ್ಬಂದಿ ಲಂಚ ಪಡೆಯುತ್ತಾರೆ ಎಂಬ ವಿಷಯದ ಕುರಿತು ಆಂದೋಲನ ದಿನಪತ್ರಿಕೆಯಲ್ಲಿ ವರದಿ ಪ್ರಕಟವಾದ ನಂತರ ಎಚ್ಚೆತ್ತುಕೊಂಡ ತಹಸಿಲ್ದಾರ್ ಚಂದ್ರಮೌಳಿ ಅವರು ಬುಧವಾರ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ತಾಲ್ಲೂಕು ಕಚೇರಿಯ ನೌಕರರು ಮತ್ತು ಸಿಬ್ಬಂದಿ ವರ್ಗದವರ ಸಭೆ ನಡೆಸಿ ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಈಗಾಗಲೇ ತಾಲ್ಲೂಕಿನ ಶಾಸಕರ ಮಾರ್ಗದರ್ಶನದಲ್ಲಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದಂತೆ ಪ್ರತಿ ಗ್ರಾಮಗಳಲ್ಲಿನ ವೃದ್ಧಾಪ್ಯರಿಗೆ ಆಯಾ ಹೋಬಳಿ ಮಟ್ಟದಲ್ಲಿ ೩೦೦ ರಿಂದ ೪೦೦ ವಿವಿಧ ವೇತನಗಳ ಆದೇಶ ಪ್ರತಿಗಳನ್ನು ನೀಡಲಾಗುತ್ತಿದೆ. ಈಗಾಗಲೇ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಆದೇಶದ ಪ್ರತಿಗಳನ್ನು ನೀಡಲಾಗಿದೆ. ಅಕ್ರಮ ಸಕ್ರಮಕ್ಕೆ ಸಂಬಂಧಿಸಿದಂತೆ ಶಾಸಕರ ನೇತೃತ್ವದಲ್ಲಿ ೧೫ ದಿನಗಳಿಗೆ ಒಮ್ಮೆ ಸಭೆಗಳನ್ನು ಮಾಡಿ ೧೧೫ ಜನರಿಗೆ ಹಕ್ಕು ಪತ್ರಗಳನ್ನು ನೀಡಲಾಗಿದೆ. ನನ್ನ ಗಮನಕ್ಕೆ ತಾರದೆ ಈ ವಿಚಾರದಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ಮಾಡಬಾರದೆಂದು ನೌಕರರು ಮತ್ತು ಸಿಬ್ಬಂದಿ ವರ್ಗದವರಿಗೆ ಎಚ್ಚರಿಕೆ ನೀಡಿದರು.

ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರಿಗೆ ಯಾವುದೇ ಹಣದ ಬೇಡಿಕೆ ಇಡಬಾರದು, ಮಧ್ಯವರ್ತಿಗಳ ಮುಖಾಂತರ ಯಾವುದೇ ವ್ಯವಹಾರಗಳನ್ನು ಮಾಡಕೂಡದು. ಇಂತಹ ಅಕ್ರಮಗಳು ಕಂಡುಬಂದಲ್ಲಿ ಅಥವಾ ನನ್ನ ಗಮನಕ್ಕೆ ಬಂದಲ್ಲಿ ಅಂತಹ ಸಿಬ್ಬಂದಿಗಳನ್ನು ವರ್ಗಾವಣೆ ಅಥವಾ ಕರ್ತವ್ಯದಿಂದ ತೆಗೆದು ಹಾಕಲು ಸಂಬಂಧಪಟ್ಟ ಮೇಲಧಿಕಾರಿಗಳಿಗೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಸಿದರು.

ಕಚೇರಿ ಸಿಬ್ಬಂದಿಗಳು ಗ್ರಾಮಾಂತರ ಪ್ರದೇಶದಿಂದ ಬರುವ ರೈತರನ್ನಾಗಲಿ ಅಥವಾ ವಯೋವೃದ್ಧರನ್ನಾಗಲಿ ಅಥವಾ ಸಾರ್ವಜನಿಕರನ್ನಾಗಲಿ ಅಲೆದಾಡಿಸದೆ ಸಂಬಂಧಪಟ್ಟಂತಹ ವ್ಯಕ್ತಿಗಳಿಗೆ ಸರಿಯಾದ ವಾಹಿತಿಯನ್ನು ನೀಡಿ ಕಳುಹಿಸಬೇಕು. ತುರ್ತಾಗಿ ಕೆಲಸಗಳನ್ನ ಮಾಡಿಕೊಡಬೇಕೆಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದರು. ಯಾವುದೇ ಒಬ್ಬ ನೌಕರ ಮಾಡಿದ ಅವ್ಯವಹಾರಕ್ಕೆ ಇಡೀ ಕಚೇರಿಯು ಸಿಬ್ಬಂದಿಗಳು ಮತ್ತು ನೌಕರರು ತಲೆತಗ್ಗಿಸುವಂತಾಗಬಾರದು ಎಂದು ಕಚೇರಿಯು ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡರು.

ಯಾವುದೇ ರಾಜಸ್ವ ನಿರೀಕ್ಷಕರು ಗ್ರಾಮ ಸಹಾಯಕರನ್ನು ಅತಿ ಹೆಚ್ಚಾಗಿ ನಂಬದೆ ತಾವೇ ಖುದ್ದಾಗಿ ಕೆಲಸವನ್ನು ನಿರ್ವಹಿಸಬೇಕು ಹಾಗೂ ಕೆಲವು ಗ್ರಾಮ ಸಹಾಯಕರು ಗ್ರಾಮಾಂತರ ಪ್ರದೇಶಗಳಲ್ಲಿ ಜನರಿಗೆ ತಪ್ಪು ಮಾಹಿತಿ ನೀಡುತ್ತಿರುವುದು ತಿಳಿದು ಬಂದಿದೆ. ಹಾಗೇನಾದರೂ ಕಂಡು ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಶಿರಸ್ತೇದಾರ್‌ಗಳಾದ ನಂದಕುಮಾರ್‌, ಟ್ರೀಜಾ , ದಾಕ್ಷಾಯಿಣಿ, ಕರ್ನಾಟಕ ರಾಜ್ಯ ನೌಕರರ ಸಂಘದ ಮೈಸೂರು ವಿಭಾಗದ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್, ರಾಜಸ್ವ ನಿರೀಕ್ಷಕ ಪಾಂಡುರಂಗ ಮತ್ತು ಸಿಬ್ಬಂದಿ ಹಾಜರಿದ್ದರು.

ನೌಕರರು ಕೆಲಸದ ಅವಧಿಯಲ್ಲಿ ಕಚೇರಿಯಲ್ಲೇ ಇರಬೇಕು. ಸಾರ್ವಜನಿಕರಿಗೆ ಶೀಘ್ರದಲ್ಲೇ ನೀವು ದೊರೆಯುವಂತಿರಬೇಕು. ಕಚೇರಿಯ ಕೆಲಸದ ಸಮುಂದಲ್ಲಿ ವೈಯಕ್ತಿಕ ಕೆಲಸಗಳಿಗೆ ಕಚೇರಿಯಿಂದ ಹೊರಗೆ ಹೋಗಿದ್ದು ಕಂಡು ಬಂದಲ್ಲಿ ಶಿಸ್ತು ಕ್ರಮ ಕೈಗೊಂಡು ಅವರನ್ನು ಕೆಲಸದಿಂದ ತೆಗೆದು ಹಾಕಲು ಶಿಫಾರಸು ಮಾಡಲಾಗುವುದು. -ಚಂದ್ರಮೌಳಿ, ತಹಸಿಲ್ದಾರ್

ಈಗಾಗಲೇ ‘ಆಂದೋಲನ’ ದಿನಪತ್ರಿಕೆಯಲ್ಲಿ ಬಂದಂತಹ ವರದಿಯನ್ನು ಗಮನಿಸಿ ತಾಲ್ಲೂಕು ಕಚೇರಿಯ ಅಧಿಕಾರಿಗಳ ಸಭೆಯನ್ನು ಕರೆದು ಭ್ರಷ್ಟಾಚಾರವನ್ನು ನಡೆಸುತ್ತಿರುವಂತಹ ನೌಕರರು ಯಾರಾದರೂ ಕಂಡುಬಂದಲ್ಲಿ ಅವರನ್ನು ಕೆಲಸದಿಂದ ತೆಗೆಯುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಭ್ರಷ್ಟರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಬ್ಬಂದಿಗೆ ಮತ್ತು ಅಧಿಕಾರಿಗಳಿಗೆ ತಿಳಿಸಲಾಗಿದೆ. -ಕೆ.ಮಹದೇವ್, ಶಾಸಕ

andolana

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

2 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

5 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

6 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

7 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

8 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

12 hours ago