ಜಿಲ್ಲೆಗಳು

ಬಾಲ ಬಿಚ್ಚಬೇಡಿ … ಶಿಸ್ತಿನಿಂದ ಇರಿ…

ರೌಡಿ ಶೀಟರ್‌ಗಳಿಗೆ ಪೊಲೀಸ್ ಆಯುಕ್ತರ ಬುದ್ದಿಮಾತು

ಮೈಸೂರು: ‘ನಗರದಲ್ಲಿ ಗ್ಯಾಂಗ್ ಅನ್ನೋ ಪದ ಕೇಳಿ ಬರಬಾರದು. ಕೇಳಿ ಬಂದ್ರೆ, ಒದ್ದು ಒಳಗೆ ಕೂರಿಸಬೇಕಾಗುತ್ತದೆ. ನೀವು ಎಲ್ಲಿ, ಹೇಗೆ, ಏನು ಕೆಲಸ ಮಾಡ್ತಾ ಇದ್ದೀರಾ ಎನ್ನುವ ಬಗ್ಗೆ ನಮಗೆ ಮಾಹಿತಿ ಇದೆ. ಶಿಸ್ತಿನಿಂದ ಹೆಂಡತಿ ಮಕ್ಕಳ ಜೊತೆಗೆ ಜೀವನ ಮಾಡಿ. ಇಲ್ಲವಾದ್ರೆ, ಬಾಲ ಕತ್ತರಿಸಬೇಕಾಗುತ್ತೆ…’
ಇದು ನಗರದ ರೌಡಿಶೀಟರ್‌ಗಳಿಗೆ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಪಾಠ ಹೇಳಿದ ಪರಿ.
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ನಗರದ ಹೆಬ್ಬಾಳ್ ಪೊಲೀಸ್ ಠಾಣೆಯ ಆವರಣದಲ್ಲಿ ನಗರದ ೭೬ ಮಂದಿ ರೌಡಿಶೀಟರ್‌ಗಳನ್ನು ಕರೆ ತಂದು, ಅವರ ಮೇಲಿರುವ ಪ್ರಕರಣಗಳನ್ನು ಕೇಳಿದ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ರೌಡಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡರು.
ನಗರದ ಕಾನೂನು-ಸುವ್ಯವಸ್ಥೆಗೆ ಭಂಗ ತರಬಾರದು. ಬಾರು, ರೆಸ್ಟೋರೆಂಟ್ ಕುಡಿದು ನಾಟಕವಾಡೋದು, ಲೇಟ್ ನೈಟ್ ಓಡಾಡೋದು, ಗುಂಪು ಕಟ್ಟಿ ಹರಟೆ ಹೊಡಿಯೋದು ಮಾಡಿದ್ರೆ, ತಕ್ಷಣ ನಮ್ಮವರು ಎತ್ತಿಕೊಂಡು ಬಂದು ಒಳಗೆ ಕೂರಿಸಿಕೊಳ್ತಾರೆ. ನಿಮ್ಮ ಆಟಾಟೋಪಗಳ ಬಗ್ಗೆ ನನಗೆ ಮಾಹಿತಿ ಇದೆ ಎಂದರು.
ನಗರದ ಕಾನೂನು-ಸುವ್ಯವಸ್ಥೆಗೆ ಭಂಗ ತರಬಾರದು. ಬಾರು, ರೆಸ್ಟೋರೆಂಟ್ ಕುಡಿದು ನಾಟಕವಾಡೋದು, ಲೇಟ್ ನೈಟ್ ಓಡಾಡೋದು, ಗುಂಪು ಕಟ್ಟಿ ಹರಟೆ ಹೊಡಿಯೋದು ಮಾಡಿದ್ರೆ, ತಕ್ಷಣ ನಮ್ಮವರು ಎತ್ತಿಕೊಂಡು ಬಂದು ಒಳಗೆ ಕೂರಿಸಿಕೊಳ್ತಾರೆ. ನಿಮ್ಮ ಆಟಾಟೋಪಗಳ ಬಗ್ಗೆ ನನಗೆ ಮಾಹಿತಿ ಇದೆ. ಇಂತ ರೌಡಿ ಚಟುವಟಿಕೆಗಳನ್ನು ಬಿಟ್ಟು ಶಿಸ್ತಿನಿಂದ ಒಳ್ಳೆಯ ದಾರಿಯಲ್ಲಿ ಕುಟುಂಬದವರೊಂದಿಗೆ ಜೀವನ ಮಾಡಿ ಎಂದು ರಮೇಶ್ ಬಿ.ಬಾನೋತ್ ಬುದ್ಧಿ ಹೇಳಿದರು.
ನಗರದ ಕಾನೂನು-ಸುವ್ಯವಸ್ಥೆ ವಿಭಾಗದ ಡಿಸಿಪಿ ಎಂ.ಮುತ್ತುರಾಜ್ ಮಾತನಾಡಿ, ರೌಡಿಸಂ ಮಾಡೋದು ಮಾತ್ರವಲ್ಲ, ರೌಡಿಯ ರೀತಿಯೂ ಕಾಣಿಸಿಕೊಳ್ಳಬಾರದು. ನೀಟಾಗಿ ಹೇರ್ ಕಟ್ ಮಾಡಿಸಿ, ಶೇವ್ ಮಾಡ್ಸಿ. ಜನರು ಹೆದರಿಕೊಳ್ಳುವ ರೀತಿ ಕಾಣಬೇಡಿ ಎಂದು ತಿಳಿಸಿದರು.
‘ನಾನೂ ರೌಡಿ ನನಗೂ ಟಿಕೆಟ್ ಕೊಡಿ’ ಎಂದು ಈ ಹಿಂದೆ ಬೋರ್ಡ್ ಹಿಡಿದುಕೊಂಡು ಬಿಜೆಪಿಯ ಟಿಕೆಟ್ ಕೇಳಿದ್ದ ಮಂಜು ಅಲಿಯಾಸ್ ಪಾನಿಪುರಿ ಮಂಜನಿಗೆ ‘ಜಾಸ್ತಿ ಬಾಲ ಬಿಚ್ಚಿದ್ರೆ ಏನ್ ಮಾಡ್ಬೇಕು ಅಂತಾ ಗೊತ್ತಿದೆ’ ಎಂದು ರಮೇಶ್ ಬಾನೋತ್ ಎಚ್ಚರಿಕೆ ನೀಡಿದರು.
ಈ ವೇಳೆ ಸುದ್ದಿಗಾರರ ಜತೆ ಮಾತನಾಡಿದ ರಮೇಶ್ ಬಾನೋತ್ ಅವರು, ಬೆಳಿಗ್ಗೆಯೇ ಮನೆಗಳನ್ನು ಸರ್ಚ್ ಮಾಡಿ ರೌಡಿಶೀಟರ್‌ಗಳನ್ನು ಕರೆತಂದು ಪರೇಡ್ ಮಾಡಲಾಗಿದೆ. ಮನೆಗಳಲ್ಲಿ ಯಾವುದೇ ವೆಪನ್‌ಗಳು ಸಿಕ್ಕಿಲ್ಲ. ಇವರು ಈಗ ಏನ್ ಮಾಡ್ತಾ ಇದ್ದಾರೆ ಎಂದು ಮಾಹಿತಿ ಕಲೆ ಹಾಕಲಾಗಿದೆ. ಇವರಲ್ಲಿ ಕೆಲವರು ಇನ್ನು ಕಾನೂನು ಬಾಹಿರ ಚಟುವಟಿಕೆಗಳಲ್ಲಿದ್ದಾರೆ. ಅವರಿಗೆ ಕಾನೂನು-ಸುವ್ಯವಸ್ಥಗೆ ಭಂಗ ಮಾಡದಂತೆ ಸೂಚನೆ ನೀಡಲಾಗಿದೆ. ಈಗಾಗಲೇ ೭ ಮಂದಿ ರೌಡಿಗಳನ್ನು ಗಡಿಪಾರು ಮಾಡಲಾಗಿದೆ. ಇನ್ನು ೧೮ ಮಂದಿಯನ್ನು ಮಾಡುವುದು ಬಾಕಿ ಇದೆ. ಕಳೆದ ಪರೇಡ್‌ನಲ್ಲಿ ೪೬ ಮಂದಿಯನ್ನು ಪರೇಡ್‌ಗೆ ಕರೆ ತರಲಾಗಿತ್ತು. ಈ ಬಾರಿ ೭೬ ಮಂದಿಯನ್ನು ಕರೆ ತರಲಾಗಿದೆ ಎಂದು ತಿಳಿಸಿದರು.
ಸಂಚಾರ ಮತ್ತು ಅಪರಾಧ ವಿಭಾಗದ ಡಿಸಿಪಿ ಜಾಹ್ನವಿ, ಎಸಿಪಿಗಳಾದ ಅಶ್ವಥ್ ನಾರಾಯಣ್, ಗಂಗಾಧರ ಸ್ವಾಮಿ, ಗಜೇಂದ್ರ ಪ್ರಸಾದ್, ಸಂದೇಶ್ ಕುಮಾರ್ ಸೇರಿದಂತೆ ನಗರದ ಎಲ್ಲ ಠಾಣೆಗಳ ಪೊಲೀಸ್ ಇನ್‌ಸ್ಪೆಕ್ಟರ್‌ಗಳು ಮತ್ತು ಸಬ್ ಇನ್‌ಸ್ಪೆಕ್ಟರ್‌ಗಳು ಹಾಜರಿದ್ದರು.

ಕೋಟ್
ಶೇ.೫೦ರಷ್ಟು ರಿಯಾಯಿತಿ ದಂಡ ಪಾವತಿ ವಿಸ್ತರಣೆಗೆ ಸಂಬಂಧಪಟ್ಟಂತೆ ನಮಗೆ ಆದೇಶ ಬಂದಿಲ್ಲ. ಮೈಸೂರು ನಗರದಲ್ಲಿ ದಂಡ ಹಾಕಿರುವುದು ೧೨೨ ಕೋಟಿ ರೂ., ಇದರಲ್ಲಿ ಪ್ರವಾಸಿಗರ ವಾಹನಗಳು ಸೇರಿವೆ. ಶೇ.೫೦ ಅಂದರೆ ೬೩ ಕೋಟಿ ರೂ. ಬರಬೇಕು. ಈಗ ಫೆ.೧೧ರವರೆಗೂ ೧೨ ಕೋಟಿ ರೂ. ಸಂಗ್ರಹವಾಗಿದೆ. ಅವಧಿ ವಿಸ್ತರಣೆಯಾದರೆ, ಒಳ್ಳೆಯ ರಿಕವರಿಯಾಗಲಿದೆ.
-ರಮೇಶ್ ಬಿ.ಬಾನೋತ್, ನಗರ ಪೊಲೀಸ್ ಆಯುಕ್ತರು.

andolanait

Recent Posts

ವೀರನಪುರ ಬಳಿ ಟಿಪ್ಪರ್ ಪಲ್ಟಿ: ಚಾಲಕ ಸಾವು

ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…

10 hours ago

ಮುಂದಿನ ದಿನಗಳಲ್ಲಿಯೂ ಬಂಜಾರ ಸಮುದಾಯದವರ ಜೊತೆಗೆ ಸದಾ ಬೆಂಬಲವಾಗಿರುತ್ತೇನೆ: ಬಿಜೆಪಿ ಒ.ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನಧ್ವನಿ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…

10 hours ago

ಕರ್ನಾಟಕ ಸೋಲಿಸಿ ಮೊದಲ ಬಾರಿಗೆ ರಣಜಿ ಟ್ರೋಫಿ ಎತ್ತಿ ಹಿಡಿದ ಜಮ್ಮು-ಕಾಶ್ಮೀರ

ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್‌ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…

14 hours ago

ಹನೂರಿನಲ್ಲಿ ವಿಜೃಂಭಣೆಯಿಂದ ನಡೆದ ಸೇವಾಲಾಲ್‌ ಜಯಂತಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…

14 hours ago

ಹಣೆಯಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ: ಡಿ.ಕೆ.ಸುರೇಶ್‌

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ…

14 hours ago

ಸದ್ದಿಲ್ಲದೆ ಸಮಾಜಸೇವೆಗೆ ನಿಂತ ಎಂಬಿಶ್ರೀ ಪ್ರತಿಷ್ಠಾನ ತಂಡ

ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…

14 hours ago