ಸೋಮವಾರಪೇಟೆ: ಸರ್ಕಾರಿ ಶಾಲೆಗಳನ್ನು ಕಾಪಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಹೇಳಿದರು.
ಚೌಡ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ 74 ವಿದ್ಯಾರ್ಥಿಗಳಿಗೆ ಸ್ವಂತ ಖರ್ಚಿನಲ್ಲಿ ಸಮವಸ್ತ್ರಗಳನ್ನು ವಿತರಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ನುರಿತ ಶಿಕ್ಷಕರಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಓದಿದವರು ಉನ್ನತ ಹುದ್ದೆಯಲ್ಲಿದ್ದಾರೆ. ಆದ್ದರಿಂದ ಸರ್ಕಾರಿ ಶಾಲೆ ಎಂಬ ಕೀಳರಿಮೆ ಬೇಡ ಎಂದರು.
ಎಸ್ಡಿಎಂಸಿ ಅಧ್ಯಕ್ಷ ರಾಜೇಶ್, ಗ್ರಾ.ಪಂ ಸದಸ್ಯರಾದ ಪ್ರವೀಣ್, ಸುರೇಶ್ಶೆಟ್ಟಿ, ಗಣಪತಿ, ವಿಶ್ವ, ಮುಖ್ಯಶಿಕ್ಷಕಿ ಸುಶೀಲಾ, ಸಹಶಿಕ್ಷಕಿಯರಾದ ಚಿತ್ರಕಲಾ, ಪದ್ಮಾವತಿ ಹಾಜರಿದ್ದರು.
ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಇಂದು…
ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…
ಡಾ.ಎಂ.ಡಿ.ಉಮೇಶ್, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…
ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…
ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…