ಜಿಲ್ಲೆಗಳು

ಡಾ. ಬಿ ಆರ್ ಅಂಬೇಡ್ಕರ್ ಹಾಗೂ ಡಾ ಬಾಬು ಜಗಜೀವನ್ ರಾಮ್ ಸಮುದಾಯ ಭವನ ಉದ್ಘಾಟನೆ

ಹನೂರು: ಸಮುದಾಯ ಭವನಗಳು ಸದಾ ಚಟುವಟಿಕೆ ಕೇಂದ್ರಗಳಾಗಬೇಕು, ಮಹಿಳಾ ಸ್ವಸಹಾಯ ಸಂಘದವರು ಭವನದಲ್ಲೇ ತಮ್ಮ ಕಾರ್ಯಚಟುವಟಿಕೆ ನಡೆಸಿ ಸದ್ಬಳಕೆ ಮಾಡಿಕೊಳ್ಳಿ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು.

ತಾಲ್ಲೂಕಿನ ಪಿಜಿಪಾಳ್ಯ, ಹುಣಸೇಪಾಳ್ಯ, ಬೈಲೂರು ಗ್ರಾಮಗಳಲ್ಲಿ ನಿರ್ಮಾಣ ಮಾಡಲಾಗಿರುವ ಡಾ. ಬಿ ಆರ್ ಅಂಬೇಡ್ಕರ್ ಭವನ ಹಾಗೂ ಡಾ ಬಾಬು ಜಗಜೀವನ್ ರಾಮ್ ಸಮುದಾಯ ಭವನಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಿದ್ಧರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 137 ಸಮುದಾಯ ಭವನಗಳನ್ನು ನಿರ್ಮಾಣ ಮಾಡಿದ್ದೇನೆ. ಸರ್ಕಾರದಿಂದ ಅನುದಾನ ತಂದು ಕಷ್ಟಪಟ್ಟು ಭವನಗಳನ್ನು ನಿರ್ಮಾಣ ಮಾಡುತ್ತಿದ್ದೇವೆ. ಕೆಲವು ಸಮಾಜದವರು ಸಮುದಾಯ ಭವನವನ್ನು ಸದ್ಬಳಕೆ ಮಾಡಿಕೊಂಡಿದ್ದಾರೆ. ಇನ್ನು ಕೆಲವರು ಕಟ್ಟಡ ನಿರ್ಮಾಣ ಮಾಡಿ ಪಾಳುಬಿಟ್ಟಿರುವುದರಿಂದ ಕಟ್ಟಡಗಳು ಶಿಥಿಲಾವಸ್ಥೆ ತಲುಪಿದೆ. ಆದ್ದರಿಂದ ಪ್ರತಿಯೊಬ್ಬರು ಸಮುದಾಯ ಭವನಗಳಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಚಟುವಟಿಕೆಗಳಿಗೆ,ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೆ,ಸಭೆ ಸಮಾರಂಭಗಳಿಗೆ, ಸರಳ ವಿವಾಹಗಳಿಗೆ ಸಮುದಾಯ ಭವನಗಳ ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಿದರು .

ಅಂಗನವಾಡಿ ಕೇಂದ್ರ ಉದ್ಘಾಟನೆ : ಪಿ ಜಿ ಪಾಳ್ಯ ಕೇಂದ್ರಸ್ಥಾನದಲ್ಲಿ ತಲಾ ಹತ್ತು ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಎರಡು ಅಂಗನವಾಡಿ ಕೇಂದ್ರವನ್ನು ಶಾಸಕ ಆರ್ ನರೇಂದ್ರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ,ಸಿಡಿಪಿಒ ನಾಗೇಶ್, ಪಿಡಿಒಗಳಾದ ಸಿದ್ದಪ್ಪ, ರಾಜು ಮುಖಂಡರುಗಳಾದ ಪಾಪಣ್ಣ,ಜಗದೀಶ್, ಸತೀಶ್,ವೇಲುಸ್ವಾಮಿ, ಶಿವಮಲ್ಲಪ್ಪ ,ಮಹದೇವಸ್ವಾಮಿ,ನಿರ್ಮಿತಿ ಕೇಂದ್ರದ ಅಭಿಯಂತರ ರವಿಕುಮಾರ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

andolanait

Recent Posts

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

33 mins ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

46 mins ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

52 mins ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

60 mins ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…

1 hour ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…

1 hour ago