ಜಿಲ್ಲೆಗಳು

ಡಾ.ಡಿ.ಸಿ.ನಂಜುಂಡ ಅವರ ಮೂರು ಪುಸ್ತಕಗಳ ಬಿಡುಗಡೆ

ಮೈಸೂರು: ಕೊರೊನಾ ಕಾಲದಲ್ಲಿ ಸುಪ್ರೀಂ ಕೋರ್ಟ್ ಸರ್ಕಾರಗಳಿಗೆ ತರಾಟೆ ತೆಗೆದುಕೊಳ್ಳದೇ ಹೋಗಿದ್ದರೆ, ಇನ್ನು ಸಾಕಷ್ಟು ಅನಾಹುತಗಳನ್ನು ಆಗುತ್ತಿದ್ದವು ಎಂದು ಮೈಸೂರು ವಿಶ್ವವಿದ್ಯಾಲಯದ ಸಮಾಜ ವಿಜ್ಞಾನದ ಡೀನ್ ಪ್ರೊ.ಮುಜಾಫರ್ ಅಸ್ಸಾದಿ ಹೇಳಿದರು.

ಅಂತರ್ಗತ ಬೆಳವಣಿಗೆ ಮತ್ತು ಅಭಿವೃದ್ಧಿ ಸಂಶೋಧನಾ ಕೇಂದ್ರದ ವತಿಯಿಂದ ನಗರದ ಜಿಲ್ಲಾ ಪತ್ರಕರ್ತರ ಭವನದ ಸಭಾಂಗಣದಲ್ಲಿ ಬುಧವಾರ ಆಯೋಜಿಸದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾಲಯದ ಸಾಮಾಜಿಕ ಹೊರಗುಳಿಯುವಿಕೆ ಮತ್ತು ಒಳಗೊಳ್ಳುವಿಕೆ ನೀತಿ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಾಪಕ ಡಾ.ಡಿ.ಸಿ.ನಂಜುಂಡ ಅವರ ವರ್ತಮಾನದ ನಿಟ್ಟುಸಿರು, ಸ್ವಾದಸ್ತಿ, ಕೊರೊನಾ ಸೆರಗು ಹಿಡಿದು ಎಂಬ ಮೂರು ಪುಸ್ತಕಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಕೊರೊನಾ ಜನರನ್ನು ಸಾಕಷ್ಟು ಭಯಗೊಳಿಸಿತು. ಆರ್ಥಿಕತೆಯ ಮೇಲೆ ಸಾಕಷ್ಟು ನಕಾರಾತ್ಮಕ ಪರಿಣಾಮಗಳನ್ನು ಬೀರಿತು. ಆದರೆ, ಸರ್ಕಾರಗಳು ಮಾತ್ರ ಕೊರೊನಾ ಹಿಮ್ಮೆಟಿಸುವಲ್ಲಿ ವಿಫಲವಾದವು, ಇಂತಹ ಸಮಯದಲ್ಲಿ ಕೊರೊನಾ ಸೋಂಕಿತು ಮತ್ತು ಮೃತಪಟ್ಟವರ ಸಂಖ್ಯೆಯ ಅಂಕಿ-ಅಂಶಗಳನ್ನು ಸರಿಯಾಗಿ ನೀಡದೆ ಮುಚ್ಚಿಡಲಾಯಿತು. ಆಸ್ಪತ್ರೆ, ಬೆಡ್, ಔಷಧ ಇತ್ಯಾದಿಗಳಲ್ಲೂ ಭ್ರಷ್ಟಚಾರ ಮಾಡಲಾಯಿತು ಎಂದರು.

ಇಂತಹ ಸಂದರ್ಭದಲ್ಲಿ ನ್ಯಾಯಾಂಗ ವ್ಯವಸ್ಥೆ ಸರ್ಕಾರಗಳಿಗೆ ಚಾಟಿ ಬೀಸುವ ಮೂಲಕ ಸರ್ಕಾರಗಳನ್ನು ಸೂಕ್ತ ರೀತಿಯಲ್ಲಿ ನಡೆಯುವಂತೆ ಎಚ್ಚರಿಸಿತು. ಕೆಲವು ಕ್ರಿಟಿಕ್ ಮಾಧ್ಯಮಗಳು ಸರ್ಕಾರದ ಜೊತೆಗೆ ಯಾವುದೇ ಕಾರಣಕ್ಕೂ ರಾಜಿಯಾಗದೆ ತಮ್ಮ ಕೆಲಸಗಳನ್ನು ಮಾಡಿವು. ಈ ಅಂಶಗಳನ್ನು ವಿಮರ್ಶಾತ್ಮಕವಾಗಿ, ವಿಶ್ಲೇಷಣೆ ಮಾಡಿ ಕೊರೊನಾ ಸೆರಗು ಹಿಡಿದು ಎಂಬ ಅದ್ಬುತ ಪುಸ್ತಕವನ್ನು ಬರೆದಿದ್ದಾರೆ. ಇದನ್ನು ವಿದ್ಯಾರ್ಥಿಗಳು ಓದಬೇಕು ಎಂದರು. ಪತ್ರಕರ್ತ ವೀರಭದ್ರಪ್ಪ ಬಿಸ್ಲಳ್ಳಿ ಅವರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ವಿಶ್ವ ವಿದ್ಯಾಲಯಗಳು ಕಾನಕೂನರನ್ನು ಸೃಷ್ಟಿಸುವ ಕೇಂದ್ರಗಳಾಗಿವೆ. ಅನೇಕ ಪ್ರಾಧ್ಯಾಪಕರು ಪಾಠವನ್ನೂ ಮಾಡದೆ, ಸಂಶೋಧಿಸಿ, ಪುಸ್ತಕಗಳನ್ನು ಬರೆಯದೇ ನಿವೃತ್ತರಾಗಿದ್ದಾರೆ. ಇದು ವಿವಿಗಳ ವ್ಯವಸ್ಥೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂತಹವರ ನಡುವೆ ಸಹ ಪ್ರಾಧ್ಯಾಪಕ ಡಾ.ಡಿ.ಸಿ.ನಂಜುಂಡ ಕಾರ್ಯ ಮಾದರಿಯಾಗಿದೆ. ಸತ್ಯವನ್ನು ಶೋಧಿಸಿ, ವಿಶ್ಲೇಷಿಸಿ ಪುಸ್ತಕಗಳನ್ನು ಬರೆದಿದ್ದಾರೆ ಎಂದರು. ಮಂಡ್ಯ ಸ್ನಾತಕೋತ್ತರ ಕೇಂದ್ರದ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ.ಜಿ.ಪ್ರೇಮ್ ಕುಮಾರ್, ಕರಾಮುವಿ ವಿಭಾಗದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಶಿವಕುಮಾರಸ್ವಾಮಿ ಮಾತನಾಡಿದರು. ಲೇಖಕರಾದ ಡಾ.ಡಿ.ಸಿ.ನಂಜುಂಡ ಇದ್ದರು.

ಪೋಟೋ: ಜಿಲ್ಲಾ ಪತ್ರಕರ್ತರ ಭವನದ ಸಭಾಂಗಣದಲ್ಲಿ ಬುಧವಾರ ಆಯೋಜಿಸದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಹ ಪ್ರಾಧ್ಯಾಪಕ ಡಾ.ಡಿ.ಸಿ.ನಂಜುಂಡ ಅವರ ವರ್ತಮಾನದ ನಿಟ್ಟುಸಿರು, ಸ್ವಾದಸ್ತಿ, ಕೊರೊನಾ ಸೆರಗು ಹಿಡಿದು ಎಂಬ ಮೂರು ಪುಸ್ತಕಗಳನ್ನು ಗಣ್ಯರು ಬಿಡುಗಡೆಗೊಳಿಸಿದರು.

 

andolanait

Recent Posts

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : ಸಿಎಂ ಖಂಡನೆ, ಶಾಂತಿ-ಸೌಹಾರ್ದತೆಗೆ ಮನವಿ

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…

37 mins ago

ಮಡಿಕೇರಿ | ಟ್ರಾಕ್ಟರ್ ಮಗುಚಿ ಕಾರ್ಮಿಕ ಸಾವು

ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…

50 mins ago

ಬುದನೂರು ಉತ್ಸವ | ಹೆಲಿಕಾಪ್ಟರ್‌ ಜಾಯ್‌ ರೈಡ್‌ಗೆ ಚಾಲನೆ

ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…

1 hour ago

ಟಾಕ್ಸಿಕ್ ಟೀಸರ್ ಬಿಡುಗಡೆ : ಡಬಲ್‌ ಲುಕ್‌ನಲ್ಲಿ ಅಬ್ಬರಿಸಿದ ರಾಕಿಂಗ್‌ ಸ್ಟಾರ್ ರಾಯ‌

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…

1 hour ago

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

6 hours ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

6 hours ago