ಜಿಲ್ಲೆಗಳು

ಡಾ.ಡಿ.ಸಿ.ನಂಜುಂಡ ಅವರ ಮೂರು ಪುಸ್ತಕಗಳ ಬಿಡುಗಡೆ

ಮೈಸೂರು: ಕೊರೊನಾ ಕಾಲದಲ್ಲಿ ಸುಪ್ರೀಂ ಕೋರ್ಟ್ ಸರ್ಕಾರಗಳಿಗೆ ತರಾಟೆ ತೆಗೆದುಕೊಳ್ಳದೇ ಹೋಗಿದ್ದರೆ, ಇನ್ನು ಸಾಕಷ್ಟು ಅನಾಹುತಗಳನ್ನು ಆಗುತ್ತಿದ್ದವು ಎಂದು ಮೈಸೂರು ವಿಶ್ವವಿದ್ಯಾಲಯದ ಸಮಾಜ ವಿಜ್ಞಾನದ ಡೀನ್ ಪ್ರೊ.ಮುಜಾಫರ್ ಅಸ್ಸಾದಿ ಹೇಳಿದರು.

ಅಂತರ್ಗತ ಬೆಳವಣಿಗೆ ಮತ್ತು ಅಭಿವೃದ್ಧಿ ಸಂಶೋಧನಾ ಕೇಂದ್ರದ ವತಿಯಿಂದ ನಗರದ ಜಿಲ್ಲಾ ಪತ್ರಕರ್ತರ ಭವನದ ಸಭಾಂಗಣದಲ್ಲಿ ಬುಧವಾರ ಆಯೋಜಿಸದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾಲಯದ ಸಾಮಾಜಿಕ ಹೊರಗುಳಿಯುವಿಕೆ ಮತ್ತು ಒಳಗೊಳ್ಳುವಿಕೆ ನೀತಿ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಾಪಕ ಡಾ.ಡಿ.ಸಿ.ನಂಜುಂಡ ಅವರ ವರ್ತಮಾನದ ನಿಟ್ಟುಸಿರು, ಸ್ವಾದಸ್ತಿ, ಕೊರೊನಾ ಸೆರಗು ಹಿಡಿದು ಎಂಬ ಮೂರು ಪುಸ್ತಕಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಕೊರೊನಾ ಜನರನ್ನು ಸಾಕಷ್ಟು ಭಯಗೊಳಿಸಿತು. ಆರ್ಥಿಕತೆಯ ಮೇಲೆ ಸಾಕಷ್ಟು ನಕಾರಾತ್ಮಕ ಪರಿಣಾಮಗಳನ್ನು ಬೀರಿತು. ಆದರೆ, ಸರ್ಕಾರಗಳು ಮಾತ್ರ ಕೊರೊನಾ ಹಿಮ್ಮೆಟಿಸುವಲ್ಲಿ ವಿಫಲವಾದವು, ಇಂತಹ ಸಮಯದಲ್ಲಿ ಕೊರೊನಾ ಸೋಂಕಿತು ಮತ್ತು ಮೃತಪಟ್ಟವರ ಸಂಖ್ಯೆಯ ಅಂಕಿ-ಅಂಶಗಳನ್ನು ಸರಿಯಾಗಿ ನೀಡದೆ ಮುಚ್ಚಿಡಲಾಯಿತು. ಆಸ್ಪತ್ರೆ, ಬೆಡ್, ಔಷಧ ಇತ್ಯಾದಿಗಳಲ್ಲೂ ಭ್ರಷ್ಟಚಾರ ಮಾಡಲಾಯಿತು ಎಂದರು.

ಇಂತಹ ಸಂದರ್ಭದಲ್ಲಿ ನ್ಯಾಯಾಂಗ ವ್ಯವಸ್ಥೆ ಸರ್ಕಾರಗಳಿಗೆ ಚಾಟಿ ಬೀಸುವ ಮೂಲಕ ಸರ್ಕಾರಗಳನ್ನು ಸೂಕ್ತ ರೀತಿಯಲ್ಲಿ ನಡೆಯುವಂತೆ ಎಚ್ಚರಿಸಿತು. ಕೆಲವು ಕ್ರಿಟಿಕ್ ಮಾಧ್ಯಮಗಳು ಸರ್ಕಾರದ ಜೊತೆಗೆ ಯಾವುದೇ ಕಾರಣಕ್ಕೂ ರಾಜಿಯಾಗದೆ ತಮ್ಮ ಕೆಲಸಗಳನ್ನು ಮಾಡಿವು. ಈ ಅಂಶಗಳನ್ನು ವಿಮರ್ಶಾತ್ಮಕವಾಗಿ, ವಿಶ್ಲೇಷಣೆ ಮಾಡಿ ಕೊರೊನಾ ಸೆರಗು ಹಿಡಿದು ಎಂಬ ಅದ್ಬುತ ಪುಸ್ತಕವನ್ನು ಬರೆದಿದ್ದಾರೆ. ಇದನ್ನು ವಿದ್ಯಾರ್ಥಿಗಳು ಓದಬೇಕು ಎಂದರು. ಪತ್ರಕರ್ತ ವೀರಭದ್ರಪ್ಪ ಬಿಸ್ಲಳ್ಳಿ ಅವರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ವಿಶ್ವ ವಿದ್ಯಾಲಯಗಳು ಕಾನಕೂನರನ್ನು ಸೃಷ್ಟಿಸುವ ಕೇಂದ್ರಗಳಾಗಿವೆ. ಅನೇಕ ಪ್ರಾಧ್ಯಾಪಕರು ಪಾಠವನ್ನೂ ಮಾಡದೆ, ಸಂಶೋಧಿಸಿ, ಪುಸ್ತಕಗಳನ್ನು ಬರೆಯದೇ ನಿವೃತ್ತರಾಗಿದ್ದಾರೆ. ಇದು ವಿವಿಗಳ ವ್ಯವಸ್ಥೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂತಹವರ ನಡುವೆ ಸಹ ಪ್ರಾಧ್ಯಾಪಕ ಡಾ.ಡಿ.ಸಿ.ನಂಜುಂಡ ಕಾರ್ಯ ಮಾದರಿಯಾಗಿದೆ. ಸತ್ಯವನ್ನು ಶೋಧಿಸಿ, ವಿಶ್ಲೇಷಿಸಿ ಪುಸ್ತಕಗಳನ್ನು ಬರೆದಿದ್ದಾರೆ ಎಂದರು. ಮಂಡ್ಯ ಸ್ನಾತಕೋತ್ತರ ಕೇಂದ್ರದ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ.ಜಿ.ಪ್ರೇಮ್ ಕುಮಾರ್, ಕರಾಮುವಿ ವಿಭಾಗದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಶಿವಕುಮಾರಸ್ವಾಮಿ ಮಾತನಾಡಿದರು. ಲೇಖಕರಾದ ಡಾ.ಡಿ.ಸಿ.ನಂಜುಂಡ ಇದ್ದರು.

ಪೋಟೋ: ಜಿಲ್ಲಾ ಪತ್ರಕರ್ತರ ಭವನದ ಸಭಾಂಗಣದಲ್ಲಿ ಬುಧವಾರ ಆಯೋಜಿಸದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಹ ಪ್ರಾಧ್ಯಾಪಕ ಡಾ.ಡಿ.ಸಿ.ನಂಜುಂಡ ಅವರ ವರ್ತಮಾನದ ನಿಟ್ಟುಸಿರು, ಸ್ವಾದಸ್ತಿ, ಕೊರೊನಾ ಸೆರಗು ಹಿಡಿದು ಎಂಬ ಮೂರು ಪುಸ್ತಕಗಳನ್ನು ಗಣ್ಯರು ಬಿಡುಗಡೆಗೊಳಿಸಿದರು.

 

andolanait

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

46 mins ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

49 mins ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

52 mins ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

54 mins ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

1 hour ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

1 hour ago