ಜಿಲ್ಲೆಗಳು

ಡಾ.ಡಿ.ಸಿ.ನಂಜುಂಡ ಅವರ ಮೂರು ಪುಸ್ತಕಗಳ ಬಿಡುಗಡೆ

ಮೈಸೂರು: ಕೊರೊನಾ ಕಾಲದಲ್ಲಿ ಸುಪ್ರೀಂ ಕೋರ್ಟ್ ಸರ್ಕಾರಗಳಿಗೆ ತರಾಟೆ ತೆಗೆದುಕೊಳ್ಳದೇ ಹೋಗಿದ್ದರೆ, ಇನ್ನು ಸಾಕಷ್ಟು ಅನಾಹುತಗಳನ್ನು ಆಗುತ್ತಿದ್ದವು ಎಂದು ಮೈಸೂರು ವಿಶ್ವವಿದ್ಯಾಲಯದ ಸಮಾಜ ವಿಜ್ಞಾನದ ಡೀನ್ ಪ್ರೊ.ಮುಜಾಫರ್ ಅಸ್ಸಾದಿ ಹೇಳಿದರು.

ಅಂತರ್ಗತ ಬೆಳವಣಿಗೆ ಮತ್ತು ಅಭಿವೃದ್ಧಿ ಸಂಶೋಧನಾ ಕೇಂದ್ರದ ವತಿಯಿಂದ ನಗರದ ಜಿಲ್ಲಾ ಪತ್ರಕರ್ತರ ಭವನದ ಸಭಾಂಗಣದಲ್ಲಿ ಬುಧವಾರ ಆಯೋಜಿಸದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾಲಯದ ಸಾಮಾಜಿಕ ಹೊರಗುಳಿಯುವಿಕೆ ಮತ್ತು ಒಳಗೊಳ್ಳುವಿಕೆ ನೀತಿ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಾಪಕ ಡಾ.ಡಿ.ಸಿ.ನಂಜುಂಡ ಅವರ ವರ್ತಮಾನದ ನಿಟ್ಟುಸಿರು, ಸ್ವಾದಸ್ತಿ, ಕೊರೊನಾ ಸೆರಗು ಹಿಡಿದು ಎಂಬ ಮೂರು ಪುಸ್ತಕಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಕೊರೊನಾ ಜನರನ್ನು ಸಾಕಷ್ಟು ಭಯಗೊಳಿಸಿತು. ಆರ್ಥಿಕತೆಯ ಮೇಲೆ ಸಾಕಷ್ಟು ನಕಾರಾತ್ಮಕ ಪರಿಣಾಮಗಳನ್ನು ಬೀರಿತು. ಆದರೆ, ಸರ್ಕಾರಗಳು ಮಾತ್ರ ಕೊರೊನಾ ಹಿಮ್ಮೆಟಿಸುವಲ್ಲಿ ವಿಫಲವಾದವು, ಇಂತಹ ಸಮಯದಲ್ಲಿ ಕೊರೊನಾ ಸೋಂಕಿತು ಮತ್ತು ಮೃತಪಟ್ಟವರ ಸಂಖ್ಯೆಯ ಅಂಕಿ-ಅಂಶಗಳನ್ನು ಸರಿಯಾಗಿ ನೀಡದೆ ಮುಚ್ಚಿಡಲಾಯಿತು. ಆಸ್ಪತ್ರೆ, ಬೆಡ್, ಔಷಧ ಇತ್ಯಾದಿಗಳಲ್ಲೂ ಭ್ರಷ್ಟಚಾರ ಮಾಡಲಾಯಿತು ಎಂದರು.

ಇಂತಹ ಸಂದರ್ಭದಲ್ಲಿ ನ್ಯಾಯಾಂಗ ವ್ಯವಸ್ಥೆ ಸರ್ಕಾರಗಳಿಗೆ ಚಾಟಿ ಬೀಸುವ ಮೂಲಕ ಸರ್ಕಾರಗಳನ್ನು ಸೂಕ್ತ ರೀತಿಯಲ್ಲಿ ನಡೆಯುವಂತೆ ಎಚ್ಚರಿಸಿತು. ಕೆಲವು ಕ್ರಿಟಿಕ್ ಮಾಧ್ಯಮಗಳು ಸರ್ಕಾರದ ಜೊತೆಗೆ ಯಾವುದೇ ಕಾರಣಕ್ಕೂ ರಾಜಿಯಾಗದೆ ತಮ್ಮ ಕೆಲಸಗಳನ್ನು ಮಾಡಿವು. ಈ ಅಂಶಗಳನ್ನು ವಿಮರ್ಶಾತ್ಮಕವಾಗಿ, ವಿಶ್ಲೇಷಣೆ ಮಾಡಿ ಕೊರೊನಾ ಸೆರಗು ಹಿಡಿದು ಎಂಬ ಅದ್ಬುತ ಪುಸ್ತಕವನ್ನು ಬರೆದಿದ್ದಾರೆ. ಇದನ್ನು ವಿದ್ಯಾರ್ಥಿಗಳು ಓದಬೇಕು ಎಂದರು. ಪತ್ರಕರ್ತ ವೀರಭದ್ರಪ್ಪ ಬಿಸ್ಲಳ್ಳಿ ಅವರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ವಿಶ್ವ ವಿದ್ಯಾಲಯಗಳು ಕಾನಕೂನರನ್ನು ಸೃಷ್ಟಿಸುವ ಕೇಂದ್ರಗಳಾಗಿವೆ. ಅನೇಕ ಪ್ರಾಧ್ಯಾಪಕರು ಪಾಠವನ್ನೂ ಮಾಡದೆ, ಸಂಶೋಧಿಸಿ, ಪುಸ್ತಕಗಳನ್ನು ಬರೆಯದೇ ನಿವೃತ್ತರಾಗಿದ್ದಾರೆ. ಇದು ವಿವಿಗಳ ವ್ಯವಸ್ಥೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇಂತಹವರ ನಡುವೆ ಸಹ ಪ್ರಾಧ್ಯಾಪಕ ಡಾ.ಡಿ.ಸಿ.ನಂಜುಂಡ ಕಾರ್ಯ ಮಾದರಿಯಾಗಿದೆ. ಸತ್ಯವನ್ನು ಶೋಧಿಸಿ, ವಿಶ್ಲೇಷಿಸಿ ಪುಸ್ತಕಗಳನ್ನು ಬರೆದಿದ್ದಾರೆ ಎಂದರು. ಮಂಡ್ಯ ಸ್ನಾತಕೋತ್ತರ ಕೇಂದ್ರದ ಅರ್ಥಶಾಸ್ತ್ರ ಪ್ರಾಧ್ಯಾಪಕ ಪ್ರೊ.ಜಿ.ಪ್ರೇಮ್ ಕುಮಾರ್, ಕರಾಮುವಿ ವಿಭಾಗದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಶಿವಕುಮಾರಸ್ವಾಮಿ ಮಾತನಾಡಿದರು. ಲೇಖಕರಾದ ಡಾ.ಡಿ.ಸಿ.ನಂಜುಂಡ ಇದ್ದರು.

ಪೋಟೋ: ಜಿಲ್ಲಾ ಪತ್ರಕರ್ತರ ಭವನದ ಸಭಾಂಗಣದಲ್ಲಿ ಬುಧವಾರ ಆಯೋಜಿಸದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಹ ಪ್ರಾಧ್ಯಾಪಕ ಡಾ.ಡಿ.ಸಿ.ನಂಜುಂಡ ಅವರ ವರ್ತಮಾನದ ನಿಟ್ಟುಸಿರು, ಸ್ವಾದಸ್ತಿ, ಕೊರೊನಾ ಸೆರಗು ಹಿಡಿದು ಎಂಬ ಮೂರು ಪುಸ್ತಕಗಳನ್ನು ಗಣ್ಯರು ಬಿಡುಗಡೆಗೊಳಿಸಿದರು.

 

andolanait

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

9 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

9 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

11 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

11 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

12 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

13 hours ago