ಜಿಲ್ಲೆಗಳು

‘ಮಾನಸ ಪ್ರಶಸ್ತಿಗೆ ಡಾ.ಗೊ.ರು.ಚನ್ನಬಸಪ್ಪ ಭಾಜನ’

ಕೊಳ್ಳೇಗಾಲ: ಮಾನಸೋತ್ಸವದ ಅಂಗವಾಗಿ ೨೦೨೨ ಸಾಲಿನ ಮಾನಸ ಪ್ರಶಸ್ತಿಗೆ ನಾಡೋಜ ಡಾ. ಗೊ.ರು.ಚನ್ನಬಸಪ್ಪ ಅವರು ಭಾಜನರಾಗಿದ್ದಾರೆ ಎಂದು ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಎಸ್.ದತ್ತೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಪ್ರಶಸ್ತಿಯನ್ನು ಡಿ.೩೦ರಂದು ಕಾಲೇಜು ಆವರಣದಲ್ಲಿ ನಡೆಯುವ ಮಾನಸೋತ್ಸವ ಸಮಾರಂಭದಲ್ಲಿ ಚಾ.ನಗರ ಉಸ್ತುವಾರಿ ಸಚಿವ ವಿ.ಸೋಮಣ್ಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಚಾ.ನಗರ ದೀನಬಂಧು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಜಿ.ಎಸ್.ಜಯದೇವ ವಹಿಸದ್ದಾರೆ. ಮುಖ್ಯ ಅತಿಥಿಗಳಾಗಿ ಚಾ.ನಗರ ಸೇವಾ ಭಾರತಿ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ವೆಂಕಟರಾಮ್‌ಜಿ, ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚ್ಯ ವಿದ್ಯಾಸಂಶೋಧನಾಲಯದ ವಿಶ್ರಾಂತ ನಿರ್ದೇಶಕ ಪ್ರೊ.ಶಿವರಾಜಪ್ಪ ವಹಿಸಲಿದ್ದಾರೆ.
ಮಧ್ಯಾಹ್ನ1 ಗಂಟೆ ನಂತರ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಲಿದೆ. ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಡಿ.31ರಂದು ಶನಿವಾರ ಬೆಳಿಗ್ಗೆ ೯ ಗಂಟೆಗೆ ಗುರುವಂದನಾ ಕಾರ್ಯಕ್ರಮ ನಡೆಯಲಿದ್ದು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾಲೂರು ಮಠದ ಶ್ರೀ ಶಾಂತಮಲ್ಲಿಕಾರ್ಜುನಸ್ವಾಮಿ, ಗುಂಡ್ಲುಪೇಟೆ ಶಾಸಕ ನಿರಂಜನ್ ಕುಮಾರ್ ಭಾಗವಹಿಸುವರು. ಜಿಲ್ಲಾಧಿಕಾರಿ ರಮೇಶ್, ಎಎಸ್ಪಿ ಸುಂದರರಾಜು ಭಾಗವಹಿಸಲಿದ್ದಾರೆ. ಮಧ್ಯಾಹ್ನ ೧ಕ್ಕೆ ಮಿಮಿಕ್ರಿ ಗೋಪಿಯಿಂದ ನಗೆಹಬ್ಬ, ೨.೩೦ಕ್ಕೆ ಗೀತ ರಚನೆಕಾರ ನಾಗೇಂದ್ರ ಪ್ರಸಾದ್ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ.

ಜ.೧ರಂದು ಬೆಳಿಗ್ಗೆ ೯ಕ್ಕೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ವಾಟಾಳು ಮಠದ ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸಮರೋಪ ಸವಾರಂಭ ಹಾಗೂ ಸಾಧಕರಿಗೆ ಸನ್ಮಾನ ಏರ್ಪಡಿಸಲಾಗಿದೆ. ಅಧ್ಯಕ್ಷತೆಯನ್ನು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ವಹಿಸಲಿದ್ದು, ಸಮಾರೋಪ ಭಾಷಣವನ್ನು ಚಾ.ನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಮಾಡಲಿದ್ದಾರೆ ಎಂದು ತಿಳಿಸಿದರು.

andolanait

Recent Posts

ಅಯೋಧ್ಯೆ ರಾಮಮಂದಿರ ಅರ್ಚಕರಿಗೆ ಹೊಸ ಡ್ರೆಸ್ ಕೋಡ್‌

ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್‌ ಕೋಡ್‌ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…

54 seconds ago

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

10 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

14 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

15 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

16 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

16 hours ago