ಜಿಲ್ಲೆಗಳು

ಪ್ರಗತಿ ಸಾಧಿಸದ ಚಾ.ನಗರ, ಚಿಕ್ಕಮಗಳೂರು ಅಧಿಕಾರಿಗಳಿಗೆ ಚಾಟಿ ಬೀಸಿದ ಡಾ.ಕೆ.ಸುಧಾಕರ್

ಮೈಸೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ನಮ್ಮ ಕ್ಲಿನಿಕ್ ಯೋಜನೆ ಮಂದಗತಿಯಲ್ಲಿ ಸಾಗುತ್ತಿರುವ ಬಗ್ಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ಇಲಾಖೆಯ ಕಾರ್ಯಕ್ರಮಗಳ ಪ್ರಗತಿಯಲ್ಲಿ ನಿರುತ್ಸಾಹ ತೋರಿರುವ ಅಧಿಕಾರಿಗಳಿಗೆ ಚಾಟಿ ಬೀಸಿದರು.

ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ವಿಭಾಗ ಮಟ್ಟದಲ್ಲಿ ನಮ್ಮ ಕ್ಲಿನಿಕ್ ಕುರಿತ ಪ್ರಗತಿಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು. ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಸಾಧಿಸದೆ ಇರುವ ಜಿಲ್ಲೆಗಳ ಡಿಎಚ್‌ಒ, ಆರ್‌ಸಿಎಚ್‌ಗಳಿಗೆ ಪ್ರತಿಯೊಂದು ಕಾರ್ಯಕ್ರಮಗಳ ಕುರಿತು ವಿವರಣೆ ಪಡೆಯುತ್ತಲೇ ತರಾಟೆಗೆ ತಗೆದುಕೊಂಡರು. ತಾಯಿ ಮತ್ತು ಮಗುವಿನ ಸಾವಿನ ಪ್ರಮಾಣ, ಗರ್ಭೀಣಿಯರ ತಪಾಸಣೆ ಮೊದಲಾದ ವಿಚಾರಗಳ ಮಾನದಂಡವನ್ನು ನೋಡಿದರೆ ತೀರಾ ಹಿಂದುಳಿಯಲಾಗಿದೆ. ಚಿಕ್ಕಮಗಳೂರು, ಚಾಮರಾಜನಗರ ಡಿಎಚ್‌ಒಗಳು ಯಾವ ಮಾನದಂಡಗಳಲ್ಲೂ ಪ್ರಗತಿ ಸಾಧಿಸಿಲ್ಲ. ನೀವು ಜಿಲ್ಲೆಯಲ್ಲಿ ಮುಂದುವರಿಯಬೇಕಾ ಅಥವಾ ಬೇಡವೇ ಎಂಬುದನ್ನು ಒಂದು ವಾರದಲ್ಲಿ ನೀವೇ ನಿರ್ಧರಿಸಿ ಎಂದು ಬಿಸಿಮುಟ್ಟಿಸಿದರು. ಈ ವೇಳೆ ದಕ್ಷಿಣಭಾರತದ ರಾಜ್ಯಗಳ ಪೈಕಿ ಮಹಾರಾಷ್ಟ್ರ,ಆಂಧ್ರಪ್ರದೇಶ,ತಮಿಳುನಾಡು,ಕೇರಳ ರಾಜ್ಯಗಳು ಮುಂಚೂಣಿಯಲ್ಲಿದ್ದರೆ, ಕರ್ನಾಟಕ ಕೊನೆಯಲ್ಲಿರುತ್ತದೆ. ಇದರಿಂದಾಗಿಯೇ ಪ್ರಧಾನಮಂತ್ರಿಗಳು ಪರಿಶೀಲನೆ ಮಾಡುವಾಗ ಕೆಲವನ್ನು ಗುರುತಿಸಿ ಬೇಸರಮಾಡಿಕೊಳ್ಳುತ್ತಾರೆ. ಹಾಗಾಗಿ, ನಾವು ಕೇರಳ ರಾಜ್ಯದ ಮಟ್ಟಿಗೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು ಎಂದು ತಾಕೀತು ಮಾಡಿದರು.

ಮೈಸೂರು ವಿಭಾಗದ ೮ ಜಿಲ್ಲೆಯಿಂದ ೪೩ ನಮ್ಮ ಕ್ಲಿನಿಕ್ ತೆರೆುಂಲು ಚಿಂತಿಸಲಾಗಿದ್ದು, ಈ ಪೈಕಿ ಮೈಸೂರು ಮತ್ತು ಕೊಡಗಿನಲ್ಲಿ ಮಾತ್ರ ತಲಾ ಒಂದೊಂದು ಕ್ಲಿನಿಕ್ ಉದ್ಘಾಟನೆಗೆ ಸಿದ್ಧವಾಗಿದೆ. ಉಳಿದ ಕಡೆ ಇನ್ನೂ ಪ್ರಗತಿಯಲ್ಲಿದೆ ಎಂದರು.

ಈ ಅಂಕಿ ಅಂಶಗಳನ್ನು ಗಮನಿಸಿದ ಸಚಿವರು, ಕೂಡಲೇ ನವೆಂಬರ್‌ನಲ್ಲಿ ನಮ್ಮ ಕ್ಲಿನಿಕ್ ತೆರೆಯಲು ಸಿದ್ಧತೆ ಮಾಡಿಕೊಳ್ಳಿ. ರಾಜ್ಯಮಟ್ಟದಲ್ಲಿ ಇದಕ್ಕೂ ಚಾಲನೆ ನೀಡಬೇಕು ಎಂದರು. ಇದಕ್ಕೆ ಇಲಾಖೆಯ ಹಿರಿಯ ಅಧಿಕಾರಿಗಳು ನವೆಂಬರ್ ಅಂತ್ಯಕ್ಕೆ ಎಲ್ಲಾವೂ ಪೂರ್ಣಗೊಳ್ಳುವ ಸಾಧ್ಯತೆ ಇರುವುದರಿಂದ ಡಿಸೆಂಬರ್‌ನಲ್ಲಿ ಉದ್ಘಾಟಿಸಿದರೆ ಒಳಿತು ಎಂದರು.

ಮೈಸೂರಿನ ಶ್ರೀರಾಂಪುರದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟನೆಗೆ ಸಿದ್ಧವಿದ್ದು, ತಾವು ಉದ್ಘಾಟಿಸಬುದು ಎಂದು ಡಿಎಚ್‌ಒ ಡಾ.ಕೆ.ಎಚ್. ಪ್ರಸಾದ್ ಮಾಹಿತಿ ನೀಡಿದರು. ಆದರೆ ಸಚಿವರು ರಾಜ್ಯ ಮಟ್ಟದ ಕಾರ್ಯಕ್ರಮದ ಬಳಿಕವಷ್ಟೇ ಎಲ್ಲವೂ ಆರಂಭವಾಗಲಿ. ಅಲ್ಲಿಯವರೆಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಚಾಮರಾಜನಗರಕ್ಕೆ ೩ ನಮ್ಮ ಕ್ಲಿನಿಕ್ ಮಂಜೂರಾಗಿದ್ದು, ಖಾಸಗಿ ಕಟ್ಟಡದಲ್ಲಿ ಸ್ಥಳ ಗುರುತಿಸಲಾಗಿದೆ. ಒಂದು ಕ್ಲಿನಿಕ್‌ಗೆ ಮಾತ್ರ ವೈದ್ಯರು ನೇಮಕವಾಗಿದ್ದು, ಮತ್ತೆರಡು ಕಡೆಗೆ ವೈದ್ಯರು ಬೇಕಿದ್ದಾರೆ, ಉಳಿದಂತೆ ಎಲ್ಲವೂ ಸಿದ್ಧವಾಗುತ್ತಿದೆ ಎಂದು ಡಿಎಚ್‌ಒ ತಿಳಿಸಿದರು. ವೈದ್ಯರೇ ಇಲ್ಲದೆ ಬೇರೆಲ್ಲವೂ ಇದ್ದರೆ ಏನು ಪ್ರಯೋಜನ ಎಂದು ಸಚಿವರು ಪ್ರಶ್ನಿಸಿದರು.

ಅಲ್ಲದೆ ಯಾವುದೇ ಕಾರಣಕ್ಕೂ ಮೊದಲ ಮಹಡಿಯಲ್ಲಿ ಕ್ಲಿನಿಕ್ ತೆರೆಯಬಾರದು. ನೆಲ ಮಹಡಿುಂಲ್ಲಿಯೇ ಕ್ಲಿನಿಕ್‌ಗಳು ಕಾರ್ಯ ನಿರ್ವಹಿಸಬೇಕು. ಕಟ್ಟಡದ ಒಳಾಂಗಣ ವಿನ್ಯಾಸವು ನಾವು ನೀಡಿದ ಮಾದರಿಯಲ್ಲಿಯೇ ರಚನೆ ಆಗಬೇಕು. ಅಲ್ಲದೆ ಈ ಯೋಜನೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸವನ್ನು ಡಿಎಚ್‌ಒಗಳು ಮಾಡಬೇಕು ಎಂದರು.

ಅಲ್ಲದೆ ಇಲಾಖೆ ಅಧಿಕಾರಿಗಳನ್ನು ನಂಬಿಕೊಂಡರೆ ಸರ್ಕಾರದ ಯೋಜನೆ ಜನರಿಗೆ ತಲುಪುವುದಿಲ್ಲ. ಆದ್ದರಿಂದ ಖಾಸಗಿ ಏಜೆನ್ಸಿಯೊಂದನ್ನು ನೇಮಿಸಿ ಪ್ರಚಾರ ಮಾಡಿ ಎಂದು ಸೂಚಿಸಿದರು. ಆಯುಷ್ಮಾನ್ ಭಾರತ್ ಸೇರಿದಂತೆ ವಿವಿಧ ಯೋಜನೆಯ ಸವಲತ್ತು ತಲುಪಿಸಬೇಕು. ತಾಂತ್ರಿಕ ಸಮಸ್ಯೆಯ ನೆಪ ಹೇಳಿಕೊಂಡು ಕೂರಬಾರದು. ಮೈಸೂರಿನಲ್ಲಿ ಇಂಟರ್‌ನೆಟ್‌ನ ಅಂತಹ ಸಮಸ್ಯೆ ತಲೆದೋರುತ್ತದೆ ಎನಿಸುವುದಿಲ್ಲ ಎಂದು ಅವರು ಹೇಳಿದರು.

ಚಾಮರಾಜನಗರ ಜಿಲ್ಲೆಯಲ್ಲಿ ಗರ್ಭೀಣಿಯರ ನೋಂದಣಿ ಮತ್ತು ತಪಾಸಣೆಗೆ ಅಜಗಜಾಂತರ ವ್ಯತ್ಯಾಸ, ತಾಯಿ ಮತ್ತು ಮಗುವಿನ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ ಇರುವ ಕುರಿತು ಪ್ರಶ್ನೆ ಮಾಡಿದಾಗ ಬುಡಕಟ್ಟು ಜನರು ಹೆಚ್ಚಿರುವ ಕಾರಣ ವ್ಯತ್ಯಾಸವಿದೆ ಎಂದು ಸಬೂಬು ಹೇಳಿದರು.

ಇದಕ್ಕೆ ತೃಪ್ತರಾಗದ ಸಚಿವರು ನೀವು ಸರಿಯಾಗಿ ಕೆಲಸ ಮಾಡಬೇಕು. ನೋಂದಣಿ ಮಾಡಿಸಿದ ಮೇಲೆ ತಪಾಸಣೆಗೆ ಒಳಗಾಗುವಂತೆ ಮಾಡಬೇಕು. ಎಎನ್‌ಸಿಗಳು ಮತ್ತು ಆಶಾ ಕಾರ್ಯಕರ್ತೆಯರನ್ನು ಬಳಸಿಕೊಳ್ಳಬೇಕು.ಆರ್‌ಸಿಎಚ್‌ಗಳು ಶಿಫಾರಸ್ಸು ಮಾಡಿಸಿ ಬರುತ್ತಾರೆ. ಆದರೆ, ಕೆಲಸದಲ್ಲಿ ಮಾತ್ರ ಆಸಕ್ತಿ ತೋರಲ್ಲ ಎಂದು ಕಿಡಿಕಾರಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಆಯುಕ್ತ ಡಿ.ರಂದೀಪ್,ಎನ್‌ಎಚ್‌ಎಂ ಅಭಿಯಾನ ನಿರ್ದೇಶಕಿ ಡಾ.ಆರುಂಧತಿ ಚಂದ್ರಶೇಖರ್, ನಿರ್ದೇಶಕಿ ಡಾ.ಇಂದುಮತಿ,ವಿಭಾಗೀಯ ಸಹ ನಿರ್ದೇಶಕಿ ಡಾ.ರಾಜೇಶ್ವರಿದೇವಿ, ವಿಭಾಗೀಯ ಜಂಟಿ ನಿರ್ದೇಶಕಿ ಡಾ.ರಾಜೇಶ್ವರಿ ಇನ್ನಿತರರು ಹಾಜರಿದ್ದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರು, ಮೆಡಿಕಲ್ ಕಾಲೇಜಿನ ಡೀನ್‌ಗಳು, ಆರ್‌ಸಿಎಚ್‌ಗಳು ಸಭೆಯಲ್ಲಿ ಪಾಲ್ಗೊಂಡಿದ್ದರು

ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಡಾ.ಕೆ.ಸುಧಾಕರ್,ಅಪರ ಮುಖ್ಯ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಆಯುಕ್ತ ಡಿ.ರಂದೀಪ್,ಎನ್‌ಎಚ್‌ಎಂ ಅಭಿಯಾನ ನಿರ್ದೇಶಕಿ ಡಾ.ಆರುಂಧತಿ ಚಂದ್ರಶೇಖರ್, ನಿರ್ದೇಶಕಿ ಡಾ.ಇಂದುಮತಿ, ವಿಭಾಗೀಯ ಸಹ ನಿರ್ದೇಶಕಿ ಡಾ.ರಾಜೇಶ್ವರಿದೇವಿ ಇನ್ನಿತರರು ಹಾಜರಿದ್ದರು.

andolana

Recent Posts

ಓದುಗರ ಪತ್ರ: ಪ್ರತಿಯೊಬ್ಬರಿಗೂ ನಾಗರಿಕ ಪ್ರಜ್ಞೆ ಅಗತ್ಯ

ಕೆಲವು ಜನರು ತಮ್ಮ ಮನೆಯ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳ, ರಸ್ತೆ ಬದಿಯಲ್ಲಿ ಸುರಿಯುವ ಮೂಲಕ ವಿರೂಪಗೊಳಿಸಿ ಸ್ವಚ್ಛ ಭಾರತದ ನಿಯಮವನ್ನು…

6 mins ago

ಓದುಗರ ಪತ್ರ: ಸಾರ್ವಜನಿಕವಾಗಿ ಶುಚಿ ಪ್ಯಾಡ್ ದೊರೆಯಲಿ

ಇಂದು ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಪುರುಷರಿಗೆ ಸರಿಸಮನಾಗಿ ದುಡಿಯುತ್ತಿದ್ದು, ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಮಹಿಳೆಯರು ಒಂದು…

8 mins ago

ಓದುಗರ ಪತ್ರ: ವಿದೇಶಿ ಸಂಗ್ರಹಾಲಯದಿಂದ ನಾಡಿನ ಶಿಲ್ಪಗಳನ್ನು ಹಿಂಪಡೆಯಿರಿ

ಕರ್ನಾಟಕದ ಸಂಸ್ಕೃತಿ ಮತ್ತು ಐತಿಹಾಸಿಕ ಪರಂಪರೆಯ ಭಾಗವಾಗಿರುವ ಅನೇಕ ಅಮೂಲ್ಯವಾದ ಶಿಲ್ಪಗಳು ಬ್ರಿಟಿಷ್ ಮ್ಯೂಜಿಯಂ (ಲಂಡನ್), ಲೂವ್ರೇ ಮ್ಯೂಜಿಯಂ (ಪ್ಯಾರಿಸ್),…

10 mins ago

ಓದುಗರ ಪತ್ರ: ಬದನವಾಳು ಗ್ರಾಮ ಸ್ವರಾಜ್ಯದ ಕನಸನ್ನು ನೆನಪಿಸಿದ ಆಂದೋಲನ

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಪುಟ್ಟ ಗ್ರಾಮ ಬದನವಾಳುಗೆ ೧೯೨೭ಹಾಗೂ ೧೯೩೪ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭೇಟಿ ನೀಡಿ ಕೈಮಗ್ಗ…

12 mins ago

ಪ್ರೊ.ಆರ್.ಎಂ.ಚಿಂತಾಮಣಿ ಅವರ ವಾರದ ಅಂಕಣ: ಬ್ಯಾಂಕ್ ಠೇವಣಿಗಳಿಗಿಂತ ವೇಗವಾಗಿ ಸಾಲಗಳು ಬೆಳೆಯುತ್ತಿವೆ

ಪ್ರೊ.ಆರ್.ಎಂ.ಚಿಂತಾಮಣಿ ೨೦೨೫-೨೬ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದ ಕೊನೆಯ ವೇಳೆಗೆ (ಡಿಸೆಂಬರ್೨೦೨೫) ದೇಶದಲ್ಲಿ ಉಪಭೋಗ (Consumption) ಮುಂದಾಗಿರುವ ಆರ್ಥಿಕ ಚಟುವಟಿಕೆಗಳು…

16 mins ago

ರಾಜ್ಯದ ಇತಿಹಾಸದ ಪುಟಗಳಲ್ಲಿ ಮೈಸೂರಿನ ದಾಖಲೆ

ಕೆ.ಬಿ.ರಮೇಶನಾಯಕ ದೇಶದಲ್ಲೇ ಹಲವು ಏಳು-ಬೀಳುಗಳು, ಸ್ಥಿತ್ಯಂತರವನ್ನು ಕಂಡ ನಾಡಿನ ಸಾಂಸ್ಕೃತಿಕ ರಾಜಧಾನಿ ಮೈಸೂರು ಜಿಲ್ಲೆಯು ಇತಿಹಾಸದ ಪುಟಗಳಲ್ಲಿ ದಾಖಲಾಗಲಿದೆ. ಮುಖ್ಯಮಂತ್ರಿಯಾಗಿ…

23 mins ago