ಜಿಲ್ಲೆಗಳು

ಡಾ.ರಾಧಾಕೃಷ್ಣನ್ ಅವರು ಕೂರುತ್ತಿದ್ದ ಕೊಠಡಿ ಹಾಳಾಗಿರುವುದಕ್ಕೆ ಅಸಮಾಧಾನ

ಮೈಸೂರು: ಅಧ್ಯಾಪಕ ವೃತ್ತಿ ನಂತರ ರಾಷ್ಟ್ರಪತಿ ಹುದ್ದೆಗೇರಿದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಕುಳಿತು ಪಾಠ ಮಾಡುತ್ತಿದ್ದ ಮಹಾರಾಜ ಕಾಲೇಜಿನ ತತ್ವಶಾಸ್ತ್ರ ವಿಭಾಗದ ಕೊಠಡಿ ಸಂಪೂರ್ಣ ಹಾಳಾಗಿರುವ ಬಗ್ಗೆ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.
ನಗರದ ಪಾರಂಪರಿಕ ಕಟ್ಟಡಗಳ ಸಮೀಕ್ಷೆ ಮುಂದುವರಿಸಿರುವ ಸಮಿತಿ, ಶನಿವಾರ ಮಹಾರಾಜ ಕಾಲೇಜಿಗೆ ಭೇಟಿ ನೀಡಿತ್ತು. ಆದರೆ, ಸಮೀಕ್ಷೆ ಪೂರ್ಣಗೊಂಡಿರಲಿಲ್ಲ. ಸೋಮವಾರವೂ ಮಹಾರಾಜ ಕಾಲೇಜಿಗೆ ಭೇಟಿ ನೀಡಿದ ಸಮಿತಿ ಸದಸ್ಯರು ಸಮೀಕ್ಷೆ ಪೂರ್ಣಗೊಳಿಸಿದರು.
೧೮೮೯ರಲ್ಲಿ ನಿರ್ಮಿಸಲಾಗಿರುವ ಮಹಾರಾಜ ಕಾಲೇಜು ಕಟ್ಟಡದ ನಿರ್ವಹಣೆ ಸರಿ ಇಲ್ಲ. ಮಳೆ ನೀರು ಸೋರಿಕೆಯಿಂದ ಗೋಡೆಗಳು ವಸ್ತಿ ಹಿಡಿಯುತ್ತಿವೆ. ಮುಖ್ಯವಾಗಿ ಡಾ.ರಾಧಾಕೃಷ್ಣನ್ ಅವರು ಕುಳಿತು ಪಾಠ ಮಾಡುತ್ತಿದ್ದ ತತ್ವಶಾಸ್ತ್ರ ಅಧ್ಯಯನ ವಿಭಾಗದ ಕೊಠಡಿ ಗೋಡೆಗಳು ಶಿಥಿಲಾವಸ್ಥೆ ತಲುಪಿದ್ದು, ಆ ಕೊಠಡಿಯ ಪೀಠೋಪಕರಣಗಳೆಲ್ಲ ಹಾಳಾಗಿವೆ. ಡಾ.ರಾಧಾಕೃಷ್ಣನ್ ಅವರ ಮನೆಯನ್ನು ಸಂರಕ್ಷಣೆ ಮಾಡಿದಂತೆ, ಅವರು ಪಾಠ ಮಾಡುತ್ತಿದ್ದ ಕಾಲೇಜಿನ ಕೊಠಡಿಯನ್ನೂ ಸಂರಕ್ಷಣೆ ಮಾಡಬೇಕಾದದ್ದು ಕರ್ತವ್ಯ ಎನ್ನುತ್ತಾರೆ ಸಮಿತಿ ಸದಸ್ಯರಾದ ಪ್ರೊ.ಎಸ್.ಎನ್.ರಂಗರಾಜು ಅವರು.
ಪುರಾತತ್ವ ಇಲಾಖೆ ಉಪ ನಿರ್ದೇಶಕಿ ಮಂಜುಳಾ, ಮೈಸೂರು ಮಹಾನಗರಪಾಲಿಕೆ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕರಾದ ಎಸ್.ರಮ್ಯಾ, ಸಹಾಯಕ ಇಂಜಿನಿಯರ್ ಆರ್.ಪವಿತ್ರ ಹಾಜರಿದ್ದರು.

andolanait

Recent Posts

ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಬಿಗ್‌ ರಿಲೀಫ್!

ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ರೇವಣ್ಣ…

12 mins ago

ಹುಣಸೂರು ಚಿನ್ನಾಭರಣ ದರೋಡೆ ಪ್ರಕರಣ : ತನಿಖೆ ಕುರಿತು ಎಸ್ಪಿ ವಿಷ್ಣುವರ್ಧನ್ ಹೇಳಿದ್ದೇನು?

ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್‌ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ…

31 mins ago

ಮುಡುಕುತೊರೆ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಡಾ.ಹೆಚ್.ಸಿ.ಮಹದೇವಪ್ಪ

ತಿ.ನರಸೀಪುರ : ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು…

1 hour ago

ಬಹುರೂಪಿ ಬಾಬಾ ಸಾಹೇಬ್‌ | ಜ.11 ರಿಂದ 18ರವರೆಗೆ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ

ಮೈಸೂರು : ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು‌…

2 hours ago

ಹೊಸ ವರ್ಷಾಚರಣೆ ಸಂಭ್ರಮ : ಅಹಿತಕರ ಘಟನೆ ತಡೆಗೆ ಸಿಎಂ ಸೂಚನೆ

ಬೆಂಗಳೂರು : ಹೊಸ ವರ್ಷಾಚರಣೆ ವೇಳೆ ಬೆಂಗಳೂರು ನಗರದಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಸ್ಥಾನದಿಂದಲೇ ಅನರ್ಹಗೊಂಡು ನ್ಯಾಯಾಲಯದ ತಡೆಯಾಜ್ಞೆಯಿಂದ ಬಚಾವ್ ಆಗಿದ್ದ ಮಾಜಿ ಸಚಿವ ಹಾಗೂ ಶಾಸಕ…

5 hours ago