ಜಿಲ್ಲೆಗಳು

ಡಾ.ರಾಧಾಕೃಷ್ಣನ್ ಅವರು ಕೂರುತ್ತಿದ್ದ ಕೊಠಡಿ ಹಾಳಾಗಿರುವುದಕ್ಕೆ ಅಸಮಾಧಾನ

ಮೈಸೂರು: ಅಧ್ಯಾಪಕ ವೃತ್ತಿ ನಂತರ ರಾಷ್ಟ್ರಪತಿ ಹುದ್ದೆಗೇರಿದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಕುಳಿತು ಪಾಠ ಮಾಡುತ್ತಿದ್ದ ಮಹಾರಾಜ ಕಾಲೇಜಿನ ತತ್ವಶಾಸ್ತ್ರ ವಿಭಾಗದ ಕೊಠಡಿ ಸಂಪೂರ್ಣ ಹಾಳಾಗಿರುವ ಬಗ್ಗೆ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.
ನಗರದ ಪಾರಂಪರಿಕ ಕಟ್ಟಡಗಳ ಸಮೀಕ್ಷೆ ಮುಂದುವರಿಸಿರುವ ಸಮಿತಿ, ಶನಿವಾರ ಮಹಾರಾಜ ಕಾಲೇಜಿಗೆ ಭೇಟಿ ನೀಡಿತ್ತು. ಆದರೆ, ಸಮೀಕ್ಷೆ ಪೂರ್ಣಗೊಂಡಿರಲಿಲ್ಲ. ಸೋಮವಾರವೂ ಮಹಾರಾಜ ಕಾಲೇಜಿಗೆ ಭೇಟಿ ನೀಡಿದ ಸಮಿತಿ ಸದಸ್ಯರು ಸಮೀಕ್ಷೆ ಪೂರ್ಣಗೊಳಿಸಿದರು.
೧೮೮೯ರಲ್ಲಿ ನಿರ್ಮಿಸಲಾಗಿರುವ ಮಹಾರಾಜ ಕಾಲೇಜು ಕಟ್ಟಡದ ನಿರ್ವಹಣೆ ಸರಿ ಇಲ್ಲ. ಮಳೆ ನೀರು ಸೋರಿಕೆಯಿಂದ ಗೋಡೆಗಳು ವಸ್ತಿ ಹಿಡಿಯುತ್ತಿವೆ. ಮುಖ್ಯವಾಗಿ ಡಾ.ರಾಧಾಕೃಷ್ಣನ್ ಅವರು ಕುಳಿತು ಪಾಠ ಮಾಡುತ್ತಿದ್ದ ತತ್ವಶಾಸ್ತ್ರ ಅಧ್ಯಯನ ವಿಭಾಗದ ಕೊಠಡಿ ಗೋಡೆಗಳು ಶಿಥಿಲಾವಸ್ಥೆ ತಲುಪಿದ್ದು, ಆ ಕೊಠಡಿಯ ಪೀಠೋಪಕರಣಗಳೆಲ್ಲ ಹಾಳಾಗಿವೆ. ಡಾ.ರಾಧಾಕೃಷ್ಣನ್ ಅವರ ಮನೆಯನ್ನು ಸಂರಕ್ಷಣೆ ಮಾಡಿದಂತೆ, ಅವರು ಪಾಠ ಮಾಡುತ್ತಿದ್ದ ಕಾಲೇಜಿನ ಕೊಠಡಿಯನ್ನೂ ಸಂರಕ್ಷಣೆ ಮಾಡಬೇಕಾದದ್ದು ಕರ್ತವ್ಯ ಎನ್ನುತ್ತಾರೆ ಸಮಿತಿ ಸದಸ್ಯರಾದ ಪ್ರೊ.ಎಸ್.ಎನ್.ರಂಗರಾಜು ಅವರು.
ಪುರಾತತ್ವ ಇಲಾಖೆ ಉಪ ನಿರ್ದೇಶಕಿ ಮಂಜುಳಾ, ಮೈಸೂರು ಮಹಾನಗರಪಾಲಿಕೆ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕರಾದ ಎಸ್.ರಮ್ಯಾ, ಸಹಾಯಕ ಇಂಜಿನಿಯರ್ ಆರ್.ಪವಿತ್ರ ಹಾಜರಿದ್ದರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

10 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

10 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

11 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

13 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

16 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

16 hours ago