ಜಿಲ್ಲೆಗಳು

ಡಾ.ರಾಧಾಕೃಷ್ಣನ್ ಅವರು ಕೂರುತ್ತಿದ್ದ ಕೊಠಡಿ ಹಾಳಾಗಿರುವುದಕ್ಕೆ ಅಸಮಾಧಾನ

ಮೈಸೂರು: ಅಧ್ಯಾಪಕ ವೃತ್ತಿ ನಂತರ ರಾಷ್ಟ್ರಪತಿ ಹುದ್ದೆಗೇರಿದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಕುಳಿತು ಪಾಠ ಮಾಡುತ್ತಿದ್ದ ಮಹಾರಾಜ ಕಾಲೇಜಿನ ತತ್ವಶಾಸ್ತ್ರ ವಿಭಾಗದ ಕೊಠಡಿ ಸಂಪೂರ್ಣ ಹಾಳಾಗಿರುವ ಬಗ್ಗೆ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.
ನಗರದ ಪಾರಂಪರಿಕ ಕಟ್ಟಡಗಳ ಸಮೀಕ್ಷೆ ಮುಂದುವರಿಸಿರುವ ಸಮಿತಿ, ಶನಿವಾರ ಮಹಾರಾಜ ಕಾಲೇಜಿಗೆ ಭೇಟಿ ನೀಡಿತ್ತು. ಆದರೆ, ಸಮೀಕ್ಷೆ ಪೂರ್ಣಗೊಂಡಿರಲಿಲ್ಲ. ಸೋಮವಾರವೂ ಮಹಾರಾಜ ಕಾಲೇಜಿಗೆ ಭೇಟಿ ನೀಡಿದ ಸಮಿತಿ ಸದಸ್ಯರು ಸಮೀಕ್ಷೆ ಪೂರ್ಣಗೊಳಿಸಿದರು.
೧೮೮೯ರಲ್ಲಿ ನಿರ್ಮಿಸಲಾಗಿರುವ ಮಹಾರಾಜ ಕಾಲೇಜು ಕಟ್ಟಡದ ನಿರ್ವಹಣೆ ಸರಿ ಇಲ್ಲ. ಮಳೆ ನೀರು ಸೋರಿಕೆಯಿಂದ ಗೋಡೆಗಳು ವಸ್ತಿ ಹಿಡಿಯುತ್ತಿವೆ. ಮುಖ್ಯವಾಗಿ ಡಾ.ರಾಧಾಕೃಷ್ಣನ್ ಅವರು ಕುಳಿತು ಪಾಠ ಮಾಡುತ್ತಿದ್ದ ತತ್ವಶಾಸ್ತ್ರ ಅಧ್ಯಯನ ವಿಭಾಗದ ಕೊಠಡಿ ಗೋಡೆಗಳು ಶಿಥಿಲಾವಸ್ಥೆ ತಲುಪಿದ್ದು, ಆ ಕೊಠಡಿಯ ಪೀಠೋಪಕರಣಗಳೆಲ್ಲ ಹಾಳಾಗಿವೆ. ಡಾ.ರಾಧಾಕೃಷ್ಣನ್ ಅವರ ಮನೆಯನ್ನು ಸಂರಕ್ಷಣೆ ಮಾಡಿದಂತೆ, ಅವರು ಪಾಠ ಮಾಡುತ್ತಿದ್ದ ಕಾಲೇಜಿನ ಕೊಠಡಿಯನ್ನೂ ಸಂರಕ್ಷಣೆ ಮಾಡಬೇಕಾದದ್ದು ಕರ್ತವ್ಯ ಎನ್ನುತ್ತಾರೆ ಸಮಿತಿ ಸದಸ್ಯರಾದ ಪ್ರೊ.ಎಸ್.ಎನ್.ರಂಗರಾಜು ಅವರು.
ಪುರಾತತ್ವ ಇಲಾಖೆ ಉಪ ನಿರ್ದೇಶಕಿ ಮಂಜುಳಾ, ಮೈಸೂರು ಮಹಾನಗರಪಾಲಿಕೆ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕರಾದ ಎಸ್.ರಮ್ಯಾ, ಸಹಾಯಕ ಇಂಜಿನಿಯರ್ ಆರ್.ಪವಿತ್ರ ಹಾಜರಿದ್ದರು.

andolanait

Recent Posts

ಟರ್ಕಿ ಶಾಲೆಯಲ್ಲಿ ಗುಂಡಿನ ದಾಳಿ ; ಪೊಲೀಸ್‌ ಅಧಿಕಾರಿ ಮಗನಿಂದ ನರಮೇಧ!

ಟರ್ಕಿ : ಟರ್ಕಿಯ ಕಹ್ರಮನ್ಮರಾಸ್ ಪ್ರಾಂತ್ಯದ ಶಾಲೆಯಲ್ಲಿ 14 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ತಂದೆಯ (ಮಾಜಿ ಪೊಲೀಸ್ ಅಧಿಕಾರಿ) ಬಂದೂಕನ್ನು…

18 mins ago

ದರ್ಶನ್ ಮೇಲಿನ ಗೌರವಕ್ಕೆ ಊರು ಬಿಟ್ಟಿದ್ದೆ : ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಶಾಕಿಂಗ್ ಹೇಳಿಕೆ

ಬೆಂಗಳೂರು : ಇಷ್ಟು ವರ್ಷ ನಾಪತ್ತೆ ಆಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ ಅವರು ಈಗ ಮರಳಿ ಬಂದಿದ್ದಾರೆ.…

1 hour ago

ಯಳಂದೂರು | ಕೆರೆಗಳಿಂದ ಅಕ್ರಮ ಮಣ್ಣು ಸಾಗಾಟ ; ಅಧಿಕಾರಿಗಳ ಜಾಣಮೌನ

ಯಳಂದೂರು : ತಾಲ್ಲೂಕಿನ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತುಂಬಲಾಗುತ್ತಿದೆ. ಅಕ್ರಮಕ್ಕೆ ಕಡಿವಾಣ ಹಾಕಿಬೇಕಿದ್ದ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಮಣ್ಣು ಮಾಫಿಯಾ…

2 hours ago

ಮಹಿಳಾ ಮೀಸಲಾತಿ ಕಾನೂನು : ಶುಕ್ರವಾರ ಸಂಜೆ 4 ಗಂಟೆಗೆ ಮತದಾನ

ನವದೆಹಲಿ : ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ.33ರಷ್ಟು ಮೀಸಲಾತಿ ನೀಡುವ ʼನಾರಿ ಶಕ್ತಿ ವಂದನ್ ಅಧಿನಿಯಮʼ ಮಸೂದೆ…

3 hours ago

ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ : ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು : ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್‌ ರಚನೆ ಆಗಲಿ ಎಂದು ಸಚಿವ ದಿನೇಶ್‌ ಗುಂಡೂರಾವ್‌…

4 hours ago

ನಾಳೆ ದಿಲ್ಲಿಗೆ ಸಿಎಂ, ಡಿಸಿಎಂ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಳೆ(ಏ.16) ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಕಾಂಗ್ರೆಸ್‍ನಲ್ಲಿ ಚಟುವಟಿಕೆಗಳು ಮತ್ತಷ್ಟು…

4 hours ago