ಜಿಲ್ಲೆಗಳು

ಡಾ.ರಾಧಾಕೃಷ್ಣನ್ ಅವರು ಕೂರುತ್ತಿದ್ದ ಕೊಠಡಿ ಹಾಳಾಗಿರುವುದಕ್ಕೆ ಅಸಮಾಧಾನ

ಮೈಸೂರು: ಅಧ್ಯಾಪಕ ವೃತ್ತಿ ನಂತರ ರಾಷ್ಟ್ರಪತಿ ಹುದ್ದೆಗೇರಿದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಕುಳಿತು ಪಾಠ ಮಾಡುತ್ತಿದ್ದ ಮಹಾರಾಜ ಕಾಲೇಜಿನ ತತ್ವಶಾಸ್ತ್ರ ವಿಭಾಗದ ಕೊಠಡಿ ಸಂಪೂರ್ಣ ಹಾಳಾಗಿರುವ ಬಗ್ಗೆ ಪಾರಂಪರಿಕ ಕಟ್ಟಡಗಳ ಸಂರಕ್ಷಣಾ ಸಮಿತಿ ಅಸಮಾಧಾನ ವ್ಯಕ್ತಪಡಿಸಿದೆ.
ನಗರದ ಪಾರಂಪರಿಕ ಕಟ್ಟಡಗಳ ಸಮೀಕ್ಷೆ ಮುಂದುವರಿಸಿರುವ ಸಮಿತಿ, ಶನಿವಾರ ಮಹಾರಾಜ ಕಾಲೇಜಿಗೆ ಭೇಟಿ ನೀಡಿತ್ತು. ಆದರೆ, ಸಮೀಕ್ಷೆ ಪೂರ್ಣಗೊಂಡಿರಲಿಲ್ಲ. ಸೋಮವಾರವೂ ಮಹಾರಾಜ ಕಾಲೇಜಿಗೆ ಭೇಟಿ ನೀಡಿದ ಸಮಿತಿ ಸದಸ್ಯರು ಸಮೀಕ್ಷೆ ಪೂರ್ಣಗೊಳಿಸಿದರು.
೧೮೮೯ರಲ್ಲಿ ನಿರ್ಮಿಸಲಾಗಿರುವ ಮಹಾರಾಜ ಕಾಲೇಜು ಕಟ್ಟಡದ ನಿರ್ವಹಣೆ ಸರಿ ಇಲ್ಲ. ಮಳೆ ನೀರು ಸೋರಿಕೆಯಿಂದ ಗೋಡೆಗಳು ವಸ್ತಿ ಹಿಡಿಯುತ್ತಿವೆ. ಮುಖ್ಯವಾಗಿ ಡಾ.ರಾಧಾಕೃಷ್ಣನ್ ಅವರು ಕುಳಿತು ಪಾಠ ಮಾಡುತ್ತಿದ್ದ ತತ್ವಶಾಸ್ತ್ರ ಅಧ್ಯಯನ ವಿಭಾಗದ ಕೊಠಡಿ ಗೋಡೆಗಳು ಶಿಥಿಲಾವಸ್ಥೆ ತಲುಪಿದ್ದು, ಆ ಕೊಠಡಿಯ ಪೀಠೋಪಕರಣಗಳೆಲ್ಲ ಹಾಳಾಗಿವೆ. ಡಾ.ರಾಧಾಕೃಷ್ಣನ್ ಅವರ ಮನೆಯನ್ನು ಸಂರಕ್ಷಣೆ ಮಾಡಿದಂತೆ, ಅವರು ಪಾಠ ಮಾಡುತ್ತಿದ್ದ ಕಾಲೇಜಿನ ಕೊಠಡಿಯನ್ನೂ ಸಂರಕ್ಷಣೆ ಮಾಡಬೇಕಾದದ್ದು ಕರ್ತವ್ಯ ಎನ್ನುತ್ತಾರೆ ಸಮಿತಿ ಸದಸ್ಯರಾದ ಪ್ರೊ.ಎಸ್.ಎನ್.ರಂಗರಾಜು ಅವರು.
ಪುರಾತತ್ವ ಇಲಾಖೆ ಉಪ ನಿರ್ದೇಶಕಿ ಮಂಜುಳಾ, ಮೈಸೂರು ಮಹಾನಗರಪಾಲಿಕೆ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕರಾದ ಎಸ್.ರಮ್ಯಾ, ಸಹಾಯಕ ಇಂಜಿನಿಯರ್ ಆರ್.ಪವಿತ್ರ ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

20 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

20 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

20 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

20 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

20 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

20 hours ago