ಮೈಸೂರು: ಹದಿಮೂರು ವರ್ಷಗಳ ನಿರಂತರ ಹೋರಾಟದ ಫಲವಾಗಿ ಅಭಿನಯ ಭಾರ್ಗವ, ಸಾಹಸ ಸಿಂಹ ‘ಡಾ.ವಿಷ್ಣುವರ್ಧನ್’ ಸ್ಮಾರಕ ನಿರ್ಮಾಣವಾಗಿದ್ದು, ಜ.29ರಂದು (ಭಾನುವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಈ ದಿನವನ್ನು ನಗರದಲ್ಲಿ ಹಬ್ಬದ ವಾತಾವರಣವನ್ನು ನಿರ್ಮಾಣ ಮಾಡಲು ಅಭಿಮಾನಿಗಳು ಮುಂದಾಗಿದ್ದಾರೆ.
ಅನೇಕ ಎಡರು-ತೊಡರುಗಳ ನಡುವೆ ಅಂತಿಮವಾಗಿ ಮೈಸೂರಿನ ಉದ್ದೂರು ಗೇಟ್ ಬಳಿಯ ಹಾಲಾಳು ಗ್ರಾಮದಲ್ಲಿ 5 ಎಕರೆ ಜಾಗದಲ್ಲಿ 11 ಕೋಟಿ ರೂ. ವೆಚ್ಚದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗಿದೆ.
ಲೋಕಾರ್ಪಣೆಗೆ ಸಿದ್ಧವಾಗಿರುವ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಸ್ಥಳಕ್ಕೆ ಶುಕ್ರವಾರ ಡಾ.ಕೆ.ವಿ.ರಾಜೇಂದ್ರ ಭೇಟಿ ನೀಡಿ ಅಗತ್ಯ ಸಿದ್ದತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಯಾವುದೇ ಲೋಪವಾಗದಂತೆ ಕಾರ್ಯಕ್ರಮದ ಸಿದ್ಧತೆಯನ್ನು ವ್ಯವಸ್ಥಿತವಾಗಿ ಮಾಡಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಬರುವ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಧೆ ಮಾಡುವಂತೆ ಹಾಗೂ ಸೂಕ್ತ ಸ್ಧಳದಲ್ಲಿ ಊಟದ ವ್ಯವಸ್ಧೆ ಮಾಡಲು ಅಗತ್ಯ ವ್ಯವಸ್ಧೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಪರ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಡಾ ವಿಷ್ಣು ವರ್ಧನ್ ಸ್ಮಾರಕ ಪ್ರತಿಷ್ಠಾನದ ಕಾರ್ಯದರ್ಶಿ ವಿಜಯಾನಂದ್ ಹಾಜರಿದ್ದರು.
ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು 2ನೇ ಹಂತದ…
ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…
ಉನ್ನಾವೋ: ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿದ ಪರಿಣಾಮ 65 ವರ್ಷದ ಅಂಪೈರ್ ಸಾವನ್ನಪ್ಪಿದ್ದು, ಹಲವಾರು ಆಟಗಾರರು…
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್ ಸೀಜ್ ಮಾಡಲಾಗಿದೆ. ಎನ್ಸಿಬಿ ಅಧಿಕಾರಿಗಳು…
ಬೆಂಗಳೂರು: ಕೆಜಿಎಫ್-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್ ಸ್ಟಾರ್ ಯಶ್ ಅಭಿನಯದ…