ಜಿಲ್ಲೆಗಳು

ನಾಳೆ ಡಾ.ವಿಷ್ಣು ಸ್ಮಾರಕ ಲೋಕಾರ್ಪಣೆ

ಜಿಲ್ಲಾಧಿಕಾರಿಗಳಿಂದ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ

ಮೈಸೂರು: ಹದಿಮೂರು ವರ್ಷಗಳ ನಿರಂತರ ಹೋರಾಟದ ಫಲವಾಗಿ ಅಭಿನಯ ಭಾರ್ಗವ, ಸಾಹಸ ಸಿಂಹ ‘ಡಾ.ವಿಷ್ಣುವರ್ಧನ್’ ಸ್ಮಾರಕ ನಿರ್ಮಾಣವಾಗಿದ್ದು, ಜ.29ರಂದು (ಭಾನುವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಈ ದಿನವನ್ನು ನಗರದಲ್ಲಿ ಹಬ್ಬದ ವಾತಾವರಣವನ್ನು ನಿರ್ಮಾಣ ಮಾಡಲು ಅಭಿಮಾನಿಗಳು ಮುಂದಾಗಿದ್ದಾರೆ.

ಅನೇಕ ಎಡರು-ತೊಡರುಗಳ ನಡುವೆ ಅಂತಿಮವಾಗಿ ಮೈಸೂರಿನ ಉದ್ದೂರು ಗೇಟ್ ಬಳಿಯ ಹಾಲಾಳು ಗ್ರಾಮದಲ್ಲಿ 5 ಎಕರೆ ಜಾಗದಲ್ಲಿ 11 ಕೋಟಿ ರೂ. ವೆಚ್ಚದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗಿದೆ.

ಲೋಕಾರ್ಪಣೆಗೆ ಸಿದ್ಧವಾಗಿರುವ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಸ್ಥಳಕ್ಕೆ ಶುಕ್ರವಾರ ಡಾ.ಕೆ.ವಿ.ರಾಜೇಂದ್ರ ಭೇಟಿ ನೀಡಿ ಅಗತ್ಯ ಸಿದ್ದತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಯಾವುದೇ ಲೋಪವಾಗದಂತೆ ಕಾರ್ಯಕ್ರಮದ ಸಿದ್ಧತೆಯನ್ನು ವ್ಯವಸ್ಥಿತವಾಗಿ ಮಾಡಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಬರುವ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಧೆ ಮಾಡುವಂತೆ ಹಾಗೂ ಸೂಕ್ತ ಸ್ಧಳದಲ್ಲಿ ಊಟದ ವ್ಯವಸ್ಧೆ ಮಾಡಲು ಅಗತ್ಯ ವ್ಯವಸ್ಧೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಪರ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಡಾ ವಿಷ್ಣು ವರ್ಧನ್ ಸ್ಮಾರಕ ಪ್ರತಿಷ್ಠಾನದ ಕಾರ್ಯದರ್ಶಿ ವಿಜಯಾನಂದ್ ಹಾಜರಿದ್ದರು.

 

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

8 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

9 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

10 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

15 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

15 hours ago