ಜಿಲ್ಲೆಗಳು

ನಾಳೆ ಡಾ.ವಿಷ್ಣು ಸ್ಮಾರಕ ಲೋಕಾರ್ಪಣೆ

ಜಿಲ್ಲಾಧಿಕಾರಿಗಳಿಂದ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ

ಮೈಸೂರು: ಹದಿಮೂರು ವರ್ಷಗಳ ನಿರಂತರ ಹೋರಾಟದ ಫಲವಾಗಿ ಅಭಿನಯ ಭಾರ್ಗವ, ಸಾಹಸ ಸಿಂಹ ‘ಡಾ.ವಿಷ್ಣುವರ್ಧನ್’ ಸ್ಮಾರಕ ನಿರ್ಮಾಣವಾಗಿದ್ದು, ಜ.29ರಂದು (ಭಾನುವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಈ ದಿನವನ್ನು ನಗರದಲ್ಲಿ ಹಬ್ಬದ ವಾತಾವರಣವನ್ನು ನಿರ್ಮಾಣ ಮಾಡಲು ಅಭಿಮಾನಿಗಳು ಮುಂದಾಗಿದ್ದಾರೆ.

ಅನೇಕ ಎಡರು-ತೊಡರುಗಳ ನಡುವೆ ಅಂತಿಮವಾಗಿ ಮೈಸೂರಿನ ಉದ್ದೂರು ಗೇಟ್ ಬಳಿಯ ಹಾಲಾಳು ಗ್ರಾಮದಲ್ಲಿ 5 ಎಕರೆ ಜಾಗದಲ್ಲಿ 11 ಕೋಟಿ ರೂ. ವೆಚ್ಚದಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣವಾಗಿದೆ.

ಲೋಕಾರ್ಪಣೆಗೆ ಸಿದ್ಧವಾಗಿರುವ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಸ್ಥಳಕ್ಕೆ ಶುಕ್ರವಾರ ಡಾ.ಕೆ.ವಿ.ರಾಜೇಂದ್ರ ಭೇಟಿ ನೀಡಿ ಅಗತ್ಯ ಸಿದ್ದತೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಯಾವುದೇ ಲೋಪವಾಗದಂತೆ ಕಾರ್ಯಕ್ರಮದ ಸಿದ್ಧತೆಯನ್ನು ವ್ಯವಸ್ಥಿತವಾಗಿ ಮಾಡಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಬರುವ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಧೆ ಮಾಡುವಂತೆ ಹಾಗೂ ಸೂಕ್ತ ಸ್ಧಳದಲ್ಲಿ ಊಟದ ವ್ಯವಸ್ಧೆ ಮಾಡಲು ಅಗತ್ಯ ವ್ಯವಸ್ಧೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಪರ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಡಾ ವಿಷ್ಣು ವರ್ಧನ್ ಸ್ಮಾರಕ ಪ್ರತಿಷ್ಠಾನದ ಕಾರ್ಯದರ್ಶಿ ವಿಜಯಾನಂದ್ ಹಾಜರಿದ್ದರು.

 

andolanait

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

6 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

6 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

6 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

9 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

9 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

9 hours ago