ಜಿಲ್ಲೆಗಳು

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ದೂರು ದಾಖಲು

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ; ಮೈಸೂರಿನಲ್ಲಿ ಪ್ರಕರಣ ದಾಖಲು

ಮೈಸೂರು :  ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ ಆರೋಪದ ಮೇಲೆ, ಚಿತ್ರದುರ್ಗದ ಮುರುಘಾ ರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯವರು ಲೈಂಗಿಕವಾಗಿ ತೊಂದರೆ ನೀಡುತ್ತಿದ್ದಾರೆ. ಇದು ಬಹಳಷ್ಟು ದಿನಗಳಿಂದ ನಡೆಯುತ್ತಿದ್ದು, ಅಲ್ಲಿ ನ್ಯಾಯ ಸಿಗುವ ವಿಶ್ವಾಸ ಇಲ್ಲ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಗೆ ಮೊರೆ ಹೋಗಿದ್ದಾರೆ.

ಸಂಸ್ಥೆ ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಶುಕ್ರವಾರ ವಿಚಾರಣೆ ನಡೆಸಿತು. ಮಕ್ಕಳ ಹೇಳಿಕೆಯಲ್ಲಿ ಸತ್ಯ ಇರುವುದರಿಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿ ಆದೇಶ ನೀಡಿತು. ಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರು ಆದರಿಸಿ ನಜರಬಾದ್ ಠಾಣೆಯಲ್ಲಿ ದಾಖಲಿಸಲಾಗಿದೆ.

ಘಟನೆ ಚಿತ್ರದುರ್ಗದಲ್ಲಿ ನಡೆದಿರುವುದರಿಂದ ಪೊಲೀಸರು ಇಡೀ ಪ್ರಕರಣಗಳನ್ನು ಆ ಜಿಲ್ಲೆಗೆ ವರ್ಗಾಯಿಸುವ ಸಾಧ್ಯತೆ ಇದೆ.

ದೂರು ಏನು?

ಚಿತ್ರದುರ್ಗದ ಮುರುಘಾ ಮಠದ ವಿದ್ಯಾರ್ಥಿ ನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎಸ್ ಎಸ್ ಎಲ್ ಸಿ ಓದುತ್ತಿರುವ ವಿದ್ಯಾರ್ಥಿನಿಯರು ದೂರು ನೀಡಿದ್ದರು. ಸ್ವಾಮೀಜಿಯವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡರ್ ಅವರೇ ನಮ್ಮನ್ನು ಕಳಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು.

ಇಂಥ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರು ದೂರು ನೀಡಲು ಹೆದರುತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಗೆ ದೂರು ನೀಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಒಡನಾಡಿ ಸಂಸ್ಥೆಯವರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ಹೇಳಿಕೆ ಆಧರಿಸಿ ದೂರು ನೀಡಿದ್ದರು. ವಿಚಾರಣೆ ನಡೆಸಿದಾಗ ಮಕ್ಕಳು ತಮಗಾದ ಅನುಭವವನ್ನು ಸಮಿತಿ ಮುಂದೆ ದಾಖಲಿಸಿದ್ದರು.

ವಿಸ್ತೃತ ವಿಚಾರಣೆ ನಂತರ ಸಮಿತಿಯು ಮೊಕದ್ದಮೆ ದಾಖಲಿಸಲು ಮಕ್ಕಳ ರಕ್ಷಣಾಧಿಕಾರಿಗೆ ಆದೇಶ ನೀಡಿತ್ತು. ಸಮಿತಿ ಅಧ್ಯಕ್ಷರಾದ ಎಚ್ ಟಿ ಕಮಲಾ ಅವರು ರಜೆ ಇದ್ದುದರಿಂದ ಹಿರಿಯ ಸದಸ್ಯ ಧನಂಜಯ ಎಲಿಯೂರು, ಸದಸ್ಯರಾದ ಅಶೋಕ್ ಹಾಗೂ ಸವಿತಾ ಕುಮಾರಿ ವಿಚಾರಣೆ ನಡೆಸಿದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago