ಜಿಲ್ಲೆಗಳು

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಚಿತ್ರದುರ್ಗ ಮುರುಘಾ ಶರಣರ ವಿರುದ್ಧ ದೂರು ದಾಖಲು

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ; ಮೈಸೂರಿನಲ್ಲಿ ಪ್ರಕರಣ ದಾಖಲು

ಮೈಸೂರು :  ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ ಆರೋಪದ ಮೇಲೆ, ಚಿತ್ರದುರ್ಗದ ಮುರುಘಾ ರಾಜೇಂದ್ರ ಬೃಹನ್ಮಠದ ಡಾ. ಶಿವರಾತ್ರಿ ಮುರುಘಾ ಶರಣರ ವಿರುದ್ಧ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ.

ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯವರು ಲೈಂಗಿಕವಾಗಿ ತೊಂದರೆ ನೀಡುತ್ತಿದ್ದಾರೆ. ಇದು ಬಹಳಷ್ಟು ದಿನಗಳಿಂದ ನಡೆಯುತ್ತಿದ್ದು, ಅಲ್ಲಿ ನ್ಯಾಯ ಸಿಗುವ ವಿಶ್ವಾಸ ಇಲ್ಲ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಗೆ ಮೊರೆ ಹೋಗಿದ್ದಾರೆ.

ಸಂಸ್ಥೆ ನೀಡಿದ ದೂರು ಆಧರಿಸಿ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಶುಕ್ರವಾರ ವಿಚಾರಣೆ ನಡೆಸಿತು. ಮಕ್ಕಳ ಹೇಳಿಕೆಯಲ್ಲಿ ಸತ್ಯ ಇರುವುದರಿಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿ ಆದೇಶ ನೀಡಿತು. ಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರು ಆದರಿಸಿ ನಜರಬಾದ್ ಠಾಣೆಯಲ್ಲಿ ದಾಖಲಿಸಲಾಗಿದೆ.

ಘಟನೆ ಚಿತ್ರದುರ್ಗದಲ್ಲಿ ನಡೆದಿರುವುದರಿಂದ ಪೊಲೀಸರು ಇಡೀ ಪ್ರಕರಣಗಳನ್ನು ಆ ಜಿಲ್ಲೆಗೆ ವರ್ಗಾಯಿಸುವ ಸಾಧ್ಯತೆ ಇದೆ.

ದೂರು ಏನು?

ಚಿತ್ರದುರ್ಗದ ಮುರುಘಾ ಮಠದ ವಿದ್ಯಾರ್ಥಿ ನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಎಸ್ ಎಸ್ ಎಲ್ ಸಿ ಓದುತ್ತಿರುವ ವಿದ್ಯಾರ್ಥಿನಿಯರು ದೂರು ನೀಡಿದ್ದರು. ಸ್ವಾಮೀಜಿಯವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡರ್ ಅವರೇ ನಮ್ಮನ್ನು ಕಳಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು.

ಇಂಥ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರು ದೂರು ನೀಡಲು ಹೆದರುತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಗೆ ದೂರು ನೀಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಒಡನಾಡಿ ಸಂಸ್ಥೆಯವರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಮಕ್ಕಳ ಹೇಳಿಕೆ ಆಧರಿಸಿ ದೂರು ನೀಡಿದ್ದರು. ವಿಚಾರಣೆ ನಡೆಸಿದಾಗ ಮಕ್ಕಳು ತಮಗಾದ ಅನುಭವವನ್ನು ಸಮಿತಿ ಮುಂದೆ ದಾಖಲಿಸಿದ್ದರು.

ವಿಸ್ತೃತ ವಿಚಾರಣೆ ನಂತರ ಸಮಿತಿಯು ಮೊಕದ್ದಮೆ ದಾಖಲಿಸಲು ಮಕ್ಕಳ ರಕ್ಷಣಾಧಿಕಾರಿಗೆ ಆದೇಶ ನೀಡಿತ್ತು. ಸಮಿತಿ ಅಧ್ಯಕ್ಷರಾದ ಎಚ್ ಟಿ ಕಮಲಾ ಅವರು ರಜೆ ಇದ್ದುದರಿಂದ ಹಿರಿಯ ಸದಸ್ಯ ಧನಂಜಯ ಎಲಿಯೂರು, ಸದಸ್ಯರಾದ ಅಶೋಕ್ ಹಾಗೂ ಸವಿತಾ ಕುಮಾರಿ ವಿಚಾರಣೆ ನಡೆಸಿದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago