ಜಿಲ್ಲೆಗಳು

ರಸ್ತೆ, ಚರಂಡಿ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ

ಕ್ರಮ ವಹಿಸದಿದ್ದರೆ ಚುನಾವಣೆಯಲ್ಲಿ ಬಹಿಷ್ಕಾರ ಎಚ್ಚರಿಕೆ

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದ ನಾಯಕರ ರಾಜಬೀದಿ ರಸ್ತೆಯನ್ನು ದುರಸ್ತಿ ಹಾಗೂ ಚರಂಡಿ ನಿರ್ಮಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದರು.
ರಸ್ತೆ ಬಳಿ ಸಮಾವೇಶಗೊಂಡ ಪ್ರತಿಭಟನಾನಿರತರು ಆಗಲಿ ಆಗಲಿ ರಸ್ತೆ, ಚರಂಡಿ ನಿರ್ಮಾಣವಾಗಲಿ ಎಂದು ಘೋಷಣೆ ಕೂಗಿದರು.
ಗ್ರಾ.ಪಂ.ಅಧ್ಯಕ್ಷ ಮಹೇಂದ್ರ ಮಾತನಾಡಿ, ಗ್ರಾಮದ ನಾಯಕರ ರಾಜಬೀದಿಯಲ್ಲಿ ರಸ್ತೆ, ಚರಂಡಿ ಹಾಳಾಗಿದ್ದು, ಗ್ರಾಮಸ್ಥರು ರಸ್ತೆಯಲ್ಲಿ ಓಡಾಡುವುದು ಕಷ್ಟವಾಗಿದೆ. ಇದು ಗ್ರಾಮದ ಪ್ರಮುಖ ರಸ್ತೆಯಾಗಿದ್ದು, ಈ ರಸ್ತೆಯನ್ನು ದುರಸ್ಥಿಪಡಿಸಿಕೊಡುವಂತೆ ಕ್ಷೇತ್ರದ ಶಾಸಕರಾದ ಸಿ.ಪುಟ್ಟರಂಗಶೆಟ್ಟರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಗಿದೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ಮಾಜಿ ಶಾಸಕರಾದ ವಾಟಾಳ್‌ನಾಗರಾಜ್ ಅವರ ಅವಧಿಯಲ್ಲಿ ಈ ರಸ್ತೆಯನ್ನು ಡಾಂಬರೀಕರಣ ಮಾಡಲಾಗಿತ್ತು. ಈಗ ಡಾಂಬರು ಕಿತ್ತುಹೋಗಿದ್ದು, ಜೆಲ್ಲಿಕಲ್ಲುಗಳು ಮೇಲಕ್ಕೆದ್ದು ಸಂಚಾರಕ್ಕೆ ತುಂಬಾ ತೊಂದರೆಯಾಗಿದೆ. ನಮ್ಮ ಬೀದಿಯ ಅಭಿವೃದ್ದಿಯನ್ನು ಕಡೆಗಣಿಸಲಾಗಿದೆ ಎಂದು ದೂರಿದರು.
ಕಾಂಗ್ರೆಸ್, ಬಿಜೆಪಿ ಪಕ್ಷಗಳು ನಮ್ಮನ್ನು ಮತ ಬ್ಯಾಂಕ್ ಮಾಡಿಕೊಂಡಿದ್ದಾರೇ ಹೊರತು ನಮ್ಮ ಬೀದಿಯ ರಸ್ತೆ, ಚರಂಡಿ ನಿರ್ಮಾಣಕ್ಕೆ ಯಾವುದೇ ಅನುದಾನ ನೀಡಿಲ್ಲ. ತಕ್ಷಣದಲ್ಲೇ ಈ ರಸ್ತೆ ಅಭಿವೃದ್ದಿ ಪಡಿಸದಿದ್ದರೆ ಮುಂಬರುವ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಗ್ರಾ.ಪಂ.ಸದಸ್ಯರಾದ ಬಿ.ಮಾದೇಶ್, ಪುಟ್ಟಸ್ವಾಮಿ, ಮಲ್ಲೇಶ್, ಯಜಮಾನರಾದ ಶೇಷನಾಯಕ, ಕತ್ತಿನಾಯಕ, ವೀರಣ್ಣನಾಯಕ, ರಾಜಣ್ಣನಾಯಕ, ಮುಖಂಡರಾದ ಕೆಂಪನಾಯಕ, ಡಿ.ಸ್ವಾಮಿ, ಶೋಭ, ಭಾಗ್ಯಮ್ಮ, ರಾಜೇಶ್ವರಿ, ಪುಟ್ಟಸಿದ್ದಮ್ಮ, ಚಿಕ್ಕಮ್ಮ, ಮಹದೇವಮ್ಮ ಇತರರಿದ್ದರು.

andolanait

Recent Posts

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

10 mins ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

17 mins ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

25 mins ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

59 mins ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

2 hours ago

ವ್ಯಕ್ತಿಯ ಭೀಕರ ಕೊಲೆ : ಹಳೇ ವೈಷಮ್ಯ ಹಿನ್ನೆಲೆ ಪತಿ,ಪತ್ನಿಯಿಂದ ಕೃತ್ಯ

ಕೊಳ್ಳೇಗಾಲ : ಹಳೇ ವೈಷಮ್ಯ ಹಿನ್ನೆಲೆ ವ್ಯಕ್ತಿಯೋರ್ವನನ್ನು ಪತಿ ಪತ್ನಿ ಇಬ್ಬರು ಮಾರಕಾಸ್ತ್ರದಿಂದ ಹೊಡೆದು ಭೀಕರವಾಗಿ ಹತ್ಯೆಗೈದಿರುವ ಘಟನೆ ತಾಲ್ಲೂಕಿನ…

2 hours ago