ಜಿಲ್ಲೆಗಳು

ರಸ್ತೆ, ಚರಂಡಿ ನಿರ್ಮಾಣಕ್ಕೆ ಒತ್ತಾಯಿಸಿ ಪ್ರತಿಭಟನೆ

ಕ್ರಮ ವಹಿಸದಿದ್ದರೆ ಚುನಾವಣೆಯಲ್ಲಿ ಬಹಿಷ್ಕಾರ ಎಚ್ಚರಿಕೆ

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದ ನಾಯಕರ ರಾಜಬೀದಿ ರಸ್ತೆಯನ್ನು ದುರಸ್ತಿ ಹಾಗೂ ಚರಂಡಿ ನಿರ್ಮಿಸಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಶುಕ್ರವಾರ ಪ್ರತಿಭಟನೆ ನಡೆಸಿದರು.
ರಸ್ತೆ ಬಳಿ ಸಮಾವೇಶಗೊಂಡ ಪ್ರತಿಭಟನಾನಿರತರು ಆಗಲಿ ಆಗಲಿ ರಸ್ತೆ, ಚರಂಡಿ ನಿರ್ಮಾಣವಾಗಲಿ ಎಂದು ಘೋಷಣೆ ಕೂಗಿದರು.
ಗ್ರಾ.ಪಂ.ಅಧ್ಯಕ್ಷ ಮಹೇಂದ್ರ ಮಾತನಾಡಿ, ಗ್ರಾಮದ ನಾಯಕರ ರಾಜಬೀದಿಯಲ್ಲಿ ರಸ್ತೆ, ಚರಂಡಿ ಹಾಳಾಗಿದ್ದು, ಗ್ರಾಮಸ್ಥರು ರಸ್ತೆಯಲ್ಲಿ ಓಡಾಡುವುದು ಕಷ್ಟವಾಗಿದೆ. ಇದು ಗ್ರಾಮದ ಪ್ರಮುಖ ರಸ್ತೆಯಾಗಿದ್ದು, ಈ ರಸ್ತೆಯನ್ನು ದುರಸ್ಥಿಪಡಿಸಿಕೊಡುವಂತೆ ಕ್ಷೇತ್ರದ ಶಾಸಕರಾದ ಸಿ.ಪುಟ್ಟರಂಗಶೆಟ್ಟರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಗಿದೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ಮಾಜಿ ಶಾಸಕರಾದ ವಾಟಾಳ್‌ನಾಗರಾಜ್ ಅವರ ಅವಧಿಯಲ್ಲಿ ಈ ರಸ್ತೆಯನ್ನು ಡಾಂಬರೀಕರಣ ಮಾಡಲಾಗಿತ್ತು. ಈಗ ಡಾಂಬರು ಕಿತ್ತುಹೋಗಿದ್ದು, ಜೆಲ್ಲಿಕಲ್ಲುಗಳು ಮೇಲಕ್ಕೆದ್ದು ಸಂಚಾರಕ್ಕೆ ತುಂಬಾ ತೊಂದರೆಯಾಗಿದೆ. ನಮ್ಮ ಬೀದಿಯ ಅಭಿವೃದ್ದಿಯನ್ನು ಕಡೆಗಣಿಸಲಾಗಿದೆ ಎಂದು ದೂರಿದರು.
ಕಾಂಗ್ರೆಸ್, ಬಿಜೆಪಿ ಪಕ್ಷಗಳು ನಮ್ಮನ್ನು ಮತ ಬ್ಯಾಂಕ್ ಮಾಡಿಕೊಂಡಿದ್ದಾರೇ ಹೊರತು ನಮ್ಮ ಬೀದಿಯ ರಸ್ತೆ, ಚರಂಡಿ ನಿರ್ಮಾಣಕ್ಕೆ ಯಾವುದೇ ಅನುದಾನ ನೀಡಿಲ್ಲ. ತಕ್ಷಣದಲ್ಲೇ ಈ ರಸ್ತೆ ಅಭಿವೃದ್ದಿ ಪಡಿಸದಿದ್ದರೆ ಮುಂಬರುವ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಗ್ರಾ.ಪಂ.ಸದಸ್ಯರಾದ ಬಿ.ಮಾದೇಶ್, ಪುಟ್ಟಸ್ವಾಮಿ, ಮಲ್ಲೇಶ್, ಯಜಮಾನರಾದ ಶೇಷನಾಯಕ, ಕತ್ತಿನಾಯಕ, ವೀರಣ್ಣನಾಯಕ, ರಾಜಣ್ಣನಾಯಕ, ಮುಖಂಡರಾದ ಕೆಂಪನಾಯಕ, ಡಿ.ಸ್ವಾಮಿ, ಶೋಭ, ಭಾಗ್ಯಮ್ಮ, ರಾಜೇಶ್ವರಿ, ಪುಟ್ಟಸಿದ್ದಮ್ಮ, ಚಿಕ್ಕಮ್ಮ, ಮಹದೇವಮ್ಮ ಇತರರಿದ್ದರು.

andolanait

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

2 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

3 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

5 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

6 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

9 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

9 hours ago