ಜಿಲ್ಲೆಗಳು

ದುರಸ್ತಿಯಾಗದ ಕುಡಿಯುವ ನೀರಿನ ಘಟಕ

ಕೆಟ್ಟು ವಾರಗಳೇ ಕಳೆದರೂ ದುರಸ್ತಿ ಮಾಡಲು ಮುಂದಾಗದ ಅಧಿಕಾರಿಗಳ ವಿರುದ್ಧ ಆಕ್ರೋಶ

ಯೋಗಾನಂದ

ಹುಣಸೂರು: ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ವಾರಗಳೇ ಕಳೆದರೂ ದುರಸ್ತಿ ಮಾಡಿಸದೆ ಶುದ್ಧ ಕುಡಿಯುವ ನೀರನ್ನೇ ಅವಲಂಬಿಸಿ ಜನ ಪರಿತಪಿಸುವಂತಾಗಿದೆ.
ತಾಲ್ಲೂಕಿನ ಗಾವಡಗೆರೆ ಗ್ರಾಮದಲ್ಲಿ ೩ ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಹುಣಸೂರು-ಕೆ.ಆರ್.ನಗರ ಮುಖ್ಯ ರಸ್ತೆಯ ಪಕ್ಕದಲ್ಲಿರುವ ಘಟಕವು ನಿರ್ವಹಣೆ ಸರಿ ಇಲ್ಲದೆ ಪಾಚಿಕಟ್ಟಿದೆ. ಆದರೆ, ಜನರು ಅನಿವಾರ್ಯವಾಗಿ ಅಲ್ಲಿನ ನೀರನ್ನೇ ಬಳಸಬೇಕಿದೆ. ಮತ್ತೊಂದು ಪಂಚಾಯಿತಿ ಕಚೇರಿ ಪಕ್ಕದಲ್ಲೆ ಇರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಕೆಲವು ದಿನಗಳು ಕಳೆದರೂ ಸಂಬಂಧಿಸಿದ ಯಾವ ಅಧಿಕಾರಿಗಳಾಗಲಿ, ಯಾವ ಜನಪ್ರತಿನಿಧಿಗಳಾಗಲಿ ಗಮನ ಕೊಡದೆ ಇರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಈ ಘಟಕದಲ್ಲಿ ನೀರು ತೆಗೆದುಕೊಂಡು ಹೋಗುವ ಜನರು ಬೇರೆ ಘಟಕಗಳನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಪಂಚಾಯಿತಿ ಹತ್ತಿರ ಇರುವ ಘಟಕ ಗ್ರಾಮಕ್ಕೆ ಮಧ್ಯಭಾಗದಲ್ಲಿದ್ದು ಬೇಗ ರಿಪೇರಿ ಮಾಡಿಸಿದರೆ ಎಲ್ಲರಿಗೂ ಅನುಕೂಲವಾಗುತ್ತದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಹತ್ತಿರ ಇರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಪ್ರತಿ ದಿನ ೧೫೦-೨೦೦ ಕ್ಯಾನ್ ನೀರು ಹೋಗುತ್ತಿತ್ತು. ಆದರೆ ಅದು ಕೆಟ್ಟ ನಂತರ ಜನರಿಗೆ ಶುದ್ಧ ನೀರು ಸಿಗುವುದು ಕಷ್ಟವಾಗಿದೆ. ಪ್ರತಿಯೊಬ್ಬರೂ q ಶುದ್ದ ನೀರು ಕುಡಿಯಬೇಕು ಎಂಬುದು ಸರ್ಕಾರದ ಉದ್ದೇಶ. ಈ ಘಟಕದ ಜವಾಬ್ದಾರಿ ಹೊತ್ತ ಸಂಸ್ಥೆಯವರು ಸರಿಯಾಗಿ ನಿರ್ವಹಣೆ ಮಾಡಿ ಜನರಿಗೆ ನೀರಿಗೆ ನೀರು ಒದಗಿಸಬೇಕು ಎಂದು ಗ್ರಾಪಂ ಮಾಜಿ ಸದಸ್ಯ ಪ್ರಮೋದ್ ಘಾಟ್ಕೆ ತಿಳಿಸಿದ್ದಾರೆ.


ಈ ಇಲಾಖೆಯವರು ನಮಗೆ ಜವಾಬ್ದಾರಿ ಕೊಟ್ಟಿಲ್ಲ. ಆದರೆ ಜನರ ಹಿತದೃಷ್ಟಿಯಿಂದ ರಿಪೇರಿ ಮಾಡಿಸುತ್ತಿದ್ದೇವೆ. ಇತ್ತೀಚೆಗೆ ೨ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟಿದ್ದು, ಡಬಲ್ ಟ್ಯಾಂಕ್ ಹತ್ತಿರ ದುರಸ್ತಿ ಮಾಡಿಸಲಾಗಿದೆ. ಈ ಘಟಕವನ್ನೂ ಮೆಕಾನಿಕ್‌ಗೆ ರಿಪೇರಿ ಮಾಡಲು ತಿಳಿಸಿದ್ದೇನೆ.

ಮಂಜಳ , ಪಿಡಿಒ


ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆಗೆ ಟೆಂಡರ್ ಆಗಿದ್ದು, ಅವರು ಬೇರೆ ಏಜೆನ್ಸಿಗೆ ನೀಡುತ್ತಾರೆ. ಆದರೆ ಈ ಘಟಕಗಳ ಜವಾಬ್ದಾರಿ ನಮ್ಮ ಇಲಾಖೆೆಯು ನೋಡಿಕೊಳ್ಳುತ್ತಿದ್ದು, ರಿಪೇರಿ ಮಾಡಿಸಲು ಕ್ರಮ ಕೈಗೊಳ್ಳುತ್ತೇನೆ.

ಮಹೇಶ್, ಎಇಇ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗ.

andolanait

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

4 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

6 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

6 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

6 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

6 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

6 hours ago