ಜಿಲ್ಲೆಗಳು

ದುರಸ್ತಿಯಾಗದ ಕುಡಿಯುವ ನೀರಿನ ಘಟಕ

ಕೆಟ್ಟು ವಾರಗಳೇ ಕಳೆದರೂ ದುರಸ್ತಿ ಮಾಡಲು ಮುಂದಾಗದ ಅಧಿಕಾರಿಗಳ ವಿರುದ್ಧ ಆಕ್ರೋಶ

ಯೋಗಾನಂದ

ಹುಣಸೂರು: ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ವಾರಗಳೇ ಕಳೆದರೂ ದುರಸ್ತಿ ಮಾಡಿಸದೆ ಶುದ್ಧ ಕುಡಿಯುವ ನೀರನ್ನೇ ಅವಲಂಬಿಸಿ ಜನ ಪರಿತಪಿಸುವಂತಾಗಿದೆ.
ತಾಲ್ಲೂಕಿನ ಗಾವಡಗೆರೆ ಗ್ರಾಮದಲ್ಲಿ ೩ ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಹುಣಸೂರು-ಕೆ.ಆರ್.ನಗರ ಮುಖ್ಯ ರಸ್ತೆಯ ಪಕ್ಕದಲ್ಲಿರುವ ಘಟಕವು ನಿರ್ವಹಣೆ ಸರಿ ಇಲ್ಲದೆ ಪಾಚಿಕಟ್ಟಿದೆ. ಆದರೆ, ಜನರು ಅನಿವಾರ್ಯವಾಗಿ ಅಲ್ಲಿನ ನೀರನ್ನೇ ಬಳಸಬೇಕಿದೆ. ಮತ್ತೊಂದು ಪಂಚಾಯಿತಿ ಕಚೇರಿ ಪಕ್ಕದಲ್ಲೆ ಇರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಕೆಲವು ದಿನಗಳು ಕಳೆದರೂ ಸಂಬಂಧಿಸಿದ ಯಾವ ಅಧಿಕಾರಿಗಳಾಗಲಿ, ಯಾವ ಜನಪ್ರತಿನಿಧಿಗಳಾಗಲಿ ಗಮನ ಕೊಡದೆ ಇರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಈ ಘಟಕದಲ್ಲಿ ನೀರು ತೆಗೆದುಕೊಂಡು ಹೋಗುವ ಜನರು ಬೇರೆ ಘಟಕಗಳನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಪಂಚಾಯಿತಿ ಹತ್ತಿರ ಇರುವ ಘಟಕ ಗ್ರಾಮಕ್ಕೆ ಮಧ್ಯಭಾಗದಲ್ಲಿದ್ದು ಬೇಗ ರಿಪೇರಿ ಮಾಡಿಸಿದರೆ ಎಲ್ಲರಿಗೂ ಅನುಕೂಲವಾಗುತ್ತದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಹತ್ತಿರ ಇರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಪ್ರತಿ ದಿನ ೧೫೦-೨೦೦ ಕ್ಯಾನ್ ನೀರು ಹೋಗುತ್ತಿತ್ತು. ಆದರೆ ಅದು ಕೆಟ್ಟ ನಂತರ ಜನರಿಗೆ ಶುದ್ಧ ನೀರು ಸಿಗುವುದು ಕಷ್ಟವಾಗಿದೆ. ಪ್ರತಿಯೊಬ್ಬರೂ q ಶುದ್ದ ನೀರು ಕುಡಿಯಬೇಕು ಎಂಬುದು ಸರ್ಕಾರದ ಉದ್ದೇಶ. ಈ ಘಟಕದ ಜವಾಬ್ದಾರಿ ಹೊತ್ತ ಸಂಸ್ಥೆಯವರು ಸರಿಯಾಗಿ ನಿರ್ವಹಣೆ ಮಾಡಿ ಜನರಿಗೆ ನೀರಿಗೆ ನೀರು ಒದಗಿಸಬೇಕು ಎಂದು ಗ್ರಾಪಂ ಮಾಜಿ ಸದಸ್ಯ ಪ್ರಮೋದ್ ಘಾಟ್ಕೆ ತಿಳಿಸಿದ್ದಾರೆ.


ಈ ಇಲಾಖೆಯವರು ನಮಗೆ ಜವಾಬ್ದಾರಿ ಕೊಟ್ಟಿಲ್ಲ. ಆದರೆ ಜನರ ಹಿತದೃಷ್ಟಿಯಿಂದ ರಿಪೇರಿ ಮಾಡಿಸುತ್ತಿದ್ದೇವೆ. ಇತ್ತೀಚೆಗೆ ೨ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟಿದ್ದು, ಡಬಲ್ ಟ್ಯಾಂಕ್ ಹತ್ತಿರ ದುರಸ್ತಿ ಮಾಡಿಸಲಾಗಿದೆ. ಈ ಘಟಕವನ್ನೂ ಮೆಕಾನಿಕ್‌ಗೆ ರಿಪೇರಿ ಮಾಡಲು ತಿಳಿಸಿದ್ದೇನೆ.

ಮಂಜಳ , ಪಿಡಿಒ


ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆಗೆ ಟೆಂಡರ್ ಆಗಿದ್ದು, ಅವರು ಬೇರೆ ಏಜೆನ್ಸಿಗೆ ನೀಡುತ್ತಾರೆ. ಆದರೆ ಈ ಘಟಕಗಳ ಜವಾಬ್ದಾರಿ ನಮ್ಮ ಇಲಾಖೆೆಯು ನೋಡಿಕೊಳ್ಳುತ್ತಿದ್ದು, ರಿಪೇರಿ ಮಾಡಿಸಲು ಕ್ರಮ ಕೈಗೊಳ್ಳುತ್ತೇನೆ.

ಮಹೇಶ್, ಎಇಇ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗ.

andolanait

Recent Posts

ಓದುಗರ ಪತ್ರ: ಈಡೇರಿದ ಭಾರತ್ ಜೋಡೋ ಪಾದಯಾತ್ರೆ ಆಶ್ವಾಸನೆ

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…

14 mins ago

ಓದುಗರ ಪತ್ರ: ಅರ್ಥಪೂರ್ಣ ಲೇಖನ

‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…

16 mins ago

ಓದುಗರ ಪತ್ರ: ಹಾರ್ಡಿಂಜ್ ವೃತ್ತದಲ್ಲಿರುವ ನಿಲ್ದಾಣದಲ್ಲೇ ಬಸ್ ನಿಲುಗಡೆಯಾಗಲಿ

ಮೈಸೂರಿನ ಹಾರ್ಡಿಂಜ್ ವೃತ್ತದ ಮೂಲಕ ಮೈಸೂರಿನಿಂದ- ಚಾಮರಾಜ ನಗರ, ಗುಂಡ್ಲುಪೇಟೆ, ಹಾಸನ, ಮಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಹಾಗೂ ಇನ್ನಿತರ ಸ್ಥಳಗಳ…

18 mins ago

ಕರ್ನಾಟಕ ಸಂಘದ 2 ಪ್ರತಿಷ್ಠಿತ ಪ್ರಶಸ್ತಿಗಳ ಪ್ರದಾನಕ್ಕೆ ಸಜ್ಜು

ಪ್ರೊ.ಬಿ.ಜಯಪ್ರಕಾಶ್‌ಗೌಡ  ಡಾ.ರಾಮೇಗೌಡ, ದಿ.ಸಿಂಗಾರಿಗೌಡ ಹೆಸರಲ್ಲಿ ಗೌರವ  ವಿಮರ್ಶಕ, ಜಾನಪದ ತಜ್ಞ ಡಾ.ರಾಮೇಗೌಡ ಮತ್ತು ಸರಳ ಸಜ್ಜನ ರಾಜಕಾರಣಿ ದಿ. ಸಿಂಗಾರಿಗೌಡ…

21 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡಿಗರ ಕಣ್ಮಣಿ ಡಾ.ರಾಜಕುಮಾರ್ ನೆನಪಿನಂಗಳದಲ್ಲಿ ಗಾಜನೂರು

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ  ಏಪ್ರಿಲ್ ೧೨, ೨೦೦೬. ಶಿವರಾಜಕುಮಾರ್ ಅಭಿನಯದ ‘ಕುಮಾರ ರಾಮ; ಚಿತ್ರದ ಚಿತ್ರೀಕರಣ. ಭಾರ್ಗವ ನಿರ್ದೇಶಕರು. ಹಂಪಿಯಲ್ಲಿ…

29 mins ago

ಎಸ್‌ಎಸ್‌ಎಲ್‌ಸಿ ಫಲಿತಾಂಶ; ಕೊಡಗಿಗೆ 8ನೇ ಸ್ಥಾನ

ನವೀನ್ ಡಿಸೋಜ ಮಡಿಕೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿ ನಾಲ್ಕನೇ ಸ್ಥಾನದಲ್ಲಿದ್ದ ಕೊಡಗು ಈ ಬಾರಿ ೮ನೇ…

35 mins ago