ಕೆಟ್ಟು ವಾರಗಳೇ ಕಳೆದರೂ ದುರಸ್ತಿ ಮಾಡಲು ಮುಂದಾಗದ ಅಧಿಕಾರಿಗಳ ವಿರುದ್ಧ ಆಕ್ರೋಶ
ಯೋಗಾನಂದ
ಹುಣಸೂರು: ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ವಾರಗಳೇ ಕಳೆದರೂ ದುರಸ್ತಿ ಮಾಡಿಸದೆ ಶುದ್ಧ ಕುಡಿಯುವ ನೀರನ್ನೇ ಅವಲಂಬಿಸಿ ಜನ ಪರಿತಪಿಸುವಂತಾಗಿದೆ.
ತಾಲ್ಲೂಕಿನ ಗಾವಡಗೆರೆ ಗ್ರಾಮದಲ್ಲಿ ೩ ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಹುಣಸೂರು-ಕೆ.ಆರ್.ನಗರ ಮುಖ್ಯ ರಸ್ತೆಯ ಪಕ್ಕದಲ್ಲಿರುವ ಘಟಕವು ನಿರ್ವಹಣೆ ಸರಿ ಇಲ್ಲದೆ ಪಾಚಿಕಟ್ಟಿದೆ. ಆದರೆ, ಜನರು ಅನಿವಾರ್ಯವಾಗಿ ಅಲ್ಲಿನ ನೀರನ್ನೇ ಬಳಸಬೇಕಿದೆ. ಮತ್ತೊಂದು ಪಂಚಾಯಿತಿ ಕಚೇರಿ ಪಕ್ಕದಲ್ಲೆ ಇರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಕೆಲವು ದಿನಗಳು ಕಳೆದರೂ ಸಂಬಂಧಿಸಿದ ಯಾವ ಅಧಿಕಾರಿಗಳಾಗಲಿ, ಯಾವ ಜನಪ್ರತಿನಿಧಿಗಳಾಗಲಿ ಗಮನ ಕೊಡದೆ ಇರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಈ ಘಟಕದಲ್ಲಿ ನೀರು ತೆಗೆದುಕೊಂಡು ಹೋಗುವ ಜನರು ಬೇರೆ ಘಟಕಗಳನ್ನು ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಪಂಚಾಯಿತಿ ಹತ್ತಿರ ಇರುವ ಘಟಕ ಗ್ರಾಮಕ್ಕೆ ಮಧ್ಯಭಾಗದಲ್ಲಿದ್ದು ಬೇಗ ರಿಪೇರಿ ಮಾಡಿಸಿದರೆ ಎಲ್ಲರಿಗೂ ಅನುಕೂಲವಾಗುತ್ತದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಹತ್ತಿರ ಇರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಪ್ರತಿ ದಿನ ೧೫೦-೨೦೦ ಕ್ಯಾನ್ ನೀರು ಹೋಗುತ್ತಿತ್ತು. ಆದರೆ ಅದು ಕೆಟ್ಟ ನಂತರ ಜನರಿಗೆ ಶುದ್ಧ ನೀರು ಸಿಗುವುದು ಕಷ್ಟವಾಗಿದೆ. ಪ್ರತಿಯೊಬ್ಬರೂ q ಶುದ್ದ ನೀರು ಕುಡಿಯಬೇಕು ಎಂಬುದು ಸರ್ಕಾರದ ಉದ್ದೇಶ. ಈ ಘಟಕದ ಜವಾಬ್ದಾರಿ ಹೊತ್ತ ಸಂಸ್ಥೆಯವರು ಸರಿಯಾಗಿ ನಿರ್ವಹಣೆ ಮಾಡಿ ಜನರಿಗೆ ನೀರಿಗೆ ನೀರು ಒದಗಿಸಬೇಕು ಎಂದು ಗ್ರಾಪಂ ಮಾಜಿ ಸದಸ್ಯ ಪ್ರಮೋದ್ ಘಾಟ್ಕೆ ತಿಳಿಸಿದ್ದಾರೆ.
ಈ ಇಲಾಖೆಯವರು ನಮಗೆ ಜವಾಬ್ದಾರಿ ಕೊಟ್ಟಿಲ್ಲ. ಆದರೆ ಜನರ ಹಿತದೃಷ್ಟಿಯಿಂದ ರಿಪೇರಿ ಮಾಡಿಸುತ್ತಿದ್ದೇವೆ. ಇತ್ತೀಚೆಗೆ ೨ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟಿದ್ದು, ಡಬಲ್ ಟ್ಯಾಂಕ್ ಹತ್ತಿರ ದುರಸ್ತಿ ಮಾಡಿಸಲಾಗಿದೆ. ಈ ಘಟಕವನ್ನೂ ಮೆಕಾನಿಕ್ಗೆ ರಿಪೇರಿ ಮಾಡಲು ತಿಳಿಸಿದ್ದೇನೆ.
–ಮಂಜಳ , ಪಿಡಿಒ
ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆಗೆ ಟೆಂಡರ್ ಆಗಿದ್ದು, ಅವರು ಬೇರೆ ಏಜೆನ್ಸಿಗೆ ನೀಡುತ್ತಾರೆ. ಆದರೆ ಈ ಘಟಕಗಳ ಜವಾಬ್ದಾರಿ ನಮ್ಮ ಇಲಾಖೆೆಯು ನೋಡಿಕೊಳ್ಳುತ್ತಿದ್ದು, ರಿಪೇರಿ ಮಾಡಿಸಲು ಕ್ರಮ ಕೈಗೊಳ್ಳುತ್ತೇನೆ.
–ಮಹೇಶ್, ಎಇಇ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗ.
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…
ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದ್ದು, ರೈತರಲ್ಲಿ ಆತಂಕ ಮನೆಮಾಡಿದೆ.…
ಟೆಹರಾನ್: ಇರಾನ್, ಅಮೇರಿಕಾ ಮತ್ತು ಇಸ್ರೇಲ್ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮತ್ತೆ…
ನೇರಳೆ ಹಣ್ಣಿನ ಬೀಜಗಳ ಔಷಧಿಯ ಗುಣಗಳನ್ನು ಪರಿಗಣಿಸಿ ಸರ್ಕಾರವು ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ತೋಟಗಾರಿಕಾ…
ಮೈಸೂರಿನ ರಿಂಗ್ ರಸ್ತೆ ಪರಸಯ್ಯನ ಹುಂಡಿ ಸರ್ಕಲ್ನಲ್ಲಿ ಪ್ರತಿನಿತ್ಯ ಸಾರಿಗೆ ನಿಗಮದ ಬಸ್ಗಳನ್ನು ನಿಲುಗಡೆ ಮಾಡುವುದರಿಂದ ಪ್ರತಿನಿತ್ಯ ಟ್ರಾಫಿಕ್ ಜಾಮ್…