ವಿರಾಜಪೇಟೆ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸು ಒಂದು ಕಂದಕಕ್ಕೆ ಉರುಳಿದ ಘಟನೆ ವಿರಾಜಪೇಟೆ ಅಮ್ಮತಿ ಕಾವಾಡಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಹಾಸನ ಜಿಲ್ಲೆ ಡಿಫ್ಫೋ ವ್ಯಾಪ್ತಿಯ ಸರ್ಕಾರಿ ಬಸ್ಸು ಸಂಖ್ಯೆ ಕೆಎ-೧೩ಎಫ್-೨೩೪೭ ಬಸ್ಸು ಒಂದು ಇಂದು ಮುಂಜಾನೆ ವಿರಾಜಪೇಟೆ ಅಮ್ಮತಿ ಕಾವಾಡಿ ಗ್ರಾಮದ ತಿರುವು ಒಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.
ಸರ್ಕಾರಿ ಬಸ್ಸು ಕೇರಳ ರಾಜ್ಯದ ಎರ್ನಾಕುಲಂ ನಿಂದ ವಿರಾಜಪೇಟೆ ಮಾರ್ಗವಾಗಿ ಹಾಸನಕ್ಕೆ ತೆರಳುತಿದ್ದು ಇಂದು ಮುಂಜಾನೆ ಸುಮಾರು ನಾಲ್ಕರ ಸಮಯದಲ್ಲಿ ವಿರಾಜಪೇಟೆ ಸರ್ಕಾರಿ ಬಸ್ಸು ನಿಲ್ದಾಣ ದಿಂದ ತೆರಳಿದ್ದು. ನಾಲ್ಕು ೨೦ ರ ಸಮಯದಲ್ಲಿ ಕಾವಾಡಿ ಗ್ರಾಮದ ಕಂದಕಕ್ಕೆ ಮಗುಚಿಕೊಂಡಿದೆ. ರಸ್ತೆಯಲ್ಲಿ ದಟ್ಟವಾಗಿ ಮಂಜು ಇದ್ದುದು ಕಾರಣ ಎನ್ನಲಾಗುತ್ತಿದೆ. ರಸ್ತೆ ಬಲಭಾಗದಲ್ಲಿ ಕಿರಿದಾದ ಕೆರೆಯೊಂದಿದ್ದು ಮಂಜಿನಿಂದ ರಸ್ತೆಯು ತೇವಾಂಶದಿಂದ ಕೂಡಿತ್ತು ಎನ್ನಲಾಗಿದೆ. ಈ ವೇಳೆಯಲ್ಲಿ ವಾಹನವು ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿತು ಎಂದು ಗಾಯಳು ಒಬ್ಬರು ಮಾಹಿತಿ ನೀಡಿದರು.
ಬಸ್ಸಿನಲ್ಲಿ ಸುಮಾರು ೪೦ ಮಂದಿ ಪ್ರಯಾಣಿಕರು ಇದ್ದರು. ಅವಘಡ ದಿಂದ ಪ್ರಯಾಣಿಕರು ಸೇರಿದಂತೆ ಬಸ್ಸು ಚಾಲಕ ಮತ್ತು ನಿರ್ವಾಹಕರೀಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಗಾಯಳುಗಳನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ವಿರಾಜಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…
ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…
ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…
ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…
ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…
ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…