ಜಿಲ್ಲೆಗಳು

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ಸು

ವಿರಾಜಪೇಟೆ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸು ಒಂದು ಕಂದಕಕ್ಕೆ ಉರುಳಿದ ಘಟನೆ ವಿರಾಜಪೇಟೆ ಅಮ್ಮತಿ ಕಾವಾಡಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.


ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಹಾಸನ ಜಿಲ್ಲೆ ಡಿಫ್ಫೋ ವ್ಯಾಪ್ತಿಯ ಸರ್ಕಾರಿ ಬಸ್ಸು ಸಂಖ್ಯೆ ಕೆಎ-೧೩ಎಫ್-೨೩೪೭ ಬಸ್ಸು ಒಂದು ಇಂದು ಮುಂಜಾನೆ ವಿರಾಜಪೇಟೆ ಅಮ್ಮತಿ ಕಾವಾಡಿ ಗ್ರಾಮದ ತಿರುವು ಒಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.

ಸರ್ಕಾರಿ ಬಸ್ಸು ಕೇರಳ ರಾಜ್ಯದ ಎರ್ನಾಕುಲಂ ನಿಂದ ವಿರಾಜಪೇಟೆ ಮಾರ್ಗವಾಗಿ ಹಾಸನಕ್ಕೆ ತೆರಳುತಿದ್ದು ಇಂದು ಮುಂಜಾನೆ ಸುಮಾರು ನಾಲ್ಕರ ಸಮಯದಲ್ಲಿ ವಿರಾಜಪೇಟೆ ಸರ್ಕಾರಿ ಬಸ್ಸು ನಿಲ್ದಾಣ ದಿಂದ ತೆರಳಿದ್ದು. ನಾಲ್ಕು ೨೦ ರ ಸಮಯದಲ್ಲಿ ಕಾವಾಡಿ ಗ್ರಾಮದ ಕಂದಕಕ್ಕೆ ಮಗುಚಿಕೊಂಡಿದೆ. ರಸ್ತೆಯಲ್ಲಿ ದಟ್ಟವಾಗಿ ಮಂಜು ಇದ್ದುದು ಕಾರಣ ಎನ್ನಲಾಗುತ್ತಿದೆ. ರಸ್ತೆ ಬಲಭಾಗದಲ್ಲಿ ಕಿರಿದಾದ ಕೆರೆಯೊಂದಿದ್ದು ಮಂಜಿನಿಂದ ರಸ್ತೆಯು ತೇವಾಂಶದಿಂದ ಕೂಡಿತ್ತು ಎನ್ನಲಾಗಿದೆ. ಈ ವೇಳೆಯಲ್ಲಿ ವಾಹನವು ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿತು ಎಂದು ಗಾಯಳು ಒಬ್ಬರು ಮಾಹಿತಿ ನೀಡಿದರು.

ಬಸ್ಸಿನಲ್ಲಿ ಸುಮಾರು ೪೦ ಮಂದಿ ಪ್ರಯಾಣಿಕರು ಇದ್ದರು. ಅವಘಡ ದಿಂದ ಪ್ರಯಾಣಿಕರು ಸೇರಿದಂತೆ ಬಸ್ಸು ಚಾಲಕ ಮತ್ತು ನಿರ್ವಾಹಕರೀಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಗಾಯಳುಗಳನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ವಿರಾಜಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

11 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

11 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

12 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

12 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

13 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

14 hours ago