ಜಿಲ್ಲೆಗಳು

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್ಸು

ವಿರಾಜಪೇಟೆ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ಸು ಒಂದು ಕಂದಕಕ್ಕೆ ಉರುಳಿದ ಘಟನೆ ವಿರಾಜಪೇಟೆ ಅಮ್ಮತಿ ಕಾವಾಡಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.


ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಹಾಸನ ಜಿಲ್ಲೆ ಡಿಫ್ಫೋ ವ್ಯಾಪ್ತಿಯ ಸರ್ಕಾರಿ ಬಸ್ಸು ಸಂಖ್ಯೆ ಕೆಎ-೧೩ಎಫ್-೨೩೪೭ ಬಸ್ಸು ಒಂದು ಇಂದು ಮುಂಜಾನೆ ವಿರಾಜಪೇಟೆ ಅಮ್ಮತಿ ಕಾವಾಡಿ ಗ್ರಾಮದ ತಿರುವು ಒಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.

ಸರ್ಕಾರಿ ಬಸ್ಸು ಕೇರಳ ರಾಜ್ಯದ ಎರ್ನಾಕುಲಂ ನಿಂದ ವಿರಾಜಪೇಟೆ ಮಾರ್ಗವಾಗಿ ಹಾಸನಕ್ಕೆ ತೆರಳುತಿದ್ದು ಇಂದು ಮುಂಜಾನೆ ಸುಮಾರು ನಾಲ್ಕರ ಸಮಯದಲ್ಲಿ ವಿರಾಜಪೇಟೆ ಸರ್ಕಾರಿ ಬಸ್ಸು ನಿಲ್ದಾಣ ದಿಂದ ತೆರಳಿದ್ದು. ನಾಲ್ಕು ೨೦ ರ ಸಮಯದಲ್ಲಿ ಕಾವಾಡಿ ಗ್ರಾಮದ ಕಂದಕಕ್ಕೆ ಮಗುಚಿಕೊಂಡಿದೆ. ರಸ್ತೆಯಲ್ಲಿ ದಟ್ಟವಾಗಿ ಮಂಜು ಇದ್ದುದು ಕಾರಣ ಎನ್ನಲಾಗುತ್ತಿದೆ. ರಸ್ತೆ ಬಲಭಾಗದಲ್ಲಿ ಕಿರಿದಾದ ಕೆರೆಯೊಂದಿದ್ದು ಮಂಜಿನಿಂದ ರಸ್ತೆಯು ತೇವಾಂಶದಿಂದ ಕೂಡಿತ್ತು ಎನ್ನಲಾಗಿದೆ. ಈ ವೇಳೆಯಲ್ಲಿ ವಾಹನವು ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿತು ಎಂದು ಗಾಯಳು ಒಬ್ಬರು ಮಾಹಿತಿ ನೀಡಿದರು.

ಬಸ್ಸಿನಲ್ಲಿ ಸುಮಾರು ೪೦ ಮಂದಿ ಪ್ರಯಾಣಿಕರು ಇದ್ದರು. ಅವಘಡ ದಿಂದ ಪ್ರಯಾಣಿಕರು ಸೇರಿದಂತೆ ಬಸ್ಸು ಚಾಲಕ ಮತ್ತು ನಿರ್ವಾಹಕರೀಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಗಾಯಳುಗಳನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ವಿರಾಜಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago