ಜಿಲ್ಲೆಗಳು

ಪುರಸಭೆ ಸದಸ್ಯರಿಂದ ಕಸದ ವಾಹನ ಚಾಲನೆ

ಎಚ್.ಡಿ.ಕೋಟೆ: ಅಧಿಕಾರಿಗಳ ನಡೆ ಖಂಡಿಸಿ ವಾಹನ ಚಾಲಕರು ಗೈರು

ಮಂಜು ಕೋಟೆ
ಎಚ್.ಡಿ.ಕೋಟೆ: ಮನೆ ಮನೆ ಕಸಗಳನ್ನು ಸಂಗ್ರಹಿಸಲು ಇರುವ ವಾಹನಗಳನ್ನು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸ್ವತಃ ಓಡಿಸಿ ಕಸ ಸಂಗ್ರಹಿಸಿದ ಘಟನೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಪುರಸಭೆಯ ಕೆಲ ಅಧಿಕಾರಿಗಳು ಮತ್ತು ಟೆಂಡರ್ ಮೂಲಕ ವಾಹನ ಓಡಿಸುವ ಚಾಲಕರ ನಡುವೆ ಕೆಲಸಗಳ ವಿಚಾರವಾಗಿ ಜಗಳವಾಗಿ, ಆರು ಮಂದಿ ಚಾಲಕರು ವಾಹನದ ಕೀಗಳನ್ನು ೩ ದಿನಗಳ ಹಿಂದೆ ಹಿಂತಿರುಗಿಸಿದ್ದರು.
ಹೀಗಾಗಿ ಪಟ್ಟಣದ ಅನೇಕ ವಾರ್ಡುಗಳ ಮನೆಗಳಲ್ಲಿ ಕಸಗಳು ವಿಲೇವರಿಯಾಗದೆ ದುರ್ನಾತ ಬೀರುತ್ತಿತ್ತು. ಜನರು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದರು.
ವಾಹನ ಚಾಲಕರಿಗೆ ಕೆಲ ಜನಪ್ರತಿನಿಧಿಗಳು ಎಷ್ಟೇ ಮನವೊಲಿಸಿದರೂ ಪ್ರಯೋಜನವಾಗದೆ ಇದ್ದುದರಿಂದ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಐಡಿಯಾ ವೆಂಕಟೇಶ್, ಪುರಸಭಾ ಸದಸ್ಯರಾದ ಮಿಲ್ ನಾಗರಾಜು, ಹೆಬ್ಬಾಳ ಲೋಕೇಶ್ ಅವರು ಕಸ ತುಂಬಿಕೊಂಡು ಹೋಗುವ ಮೂರು ವಾಹನಗಳ ಕೀಗಳನ್ನು ಪಡೆದು ಪೌರಕಾರ್ಮಿಕರನ್ನು ಕರೆದುಕೊಂಡು ತಾವೇ ವಾಹನ ಚಾಲನೆ ಮಾಡಿಕೊಂಡು ಅನೇಕ ವಾರ್ಡುಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಸಂಚರಿಸಿ ಮನೆಗಳಲ್ಲಿನ ಕಸವನ್ನು ಸಂಗ್ರಹಿಸಿದರು.


ಏನೇ ಸಮಸ್ಯೆಗಳು ಬಂದರೂ ವಾಹನ ಚಾಲಕರು ನಮ್ಮ ಗಮನಕ್ಕೆ ತಿಳಿಸಬೇಕು. ಏಕಾಏಕಿ ಇಂತಹ ಕ್ರಮ ಕೈಗೊಂಡರೆ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ. ಹೊಸ ಟೆಂಡರ್‌ದಾರರಿಗೆ ಈ ಕೆಲಸ ನಿರ್ವಹಿಸಲು ಜವಾಬ್ದಾರಿ ನೀಡಲಾಗುವುದು. ಜನ ಸೇವಕರಾಗಿ ಕೆಲಸ ಮಾಡುವುದೇ ನಮ್ಮ ಕರ್ತವ್ಯವಾಗಿದೆ
-ಐಡಿಯಾ ವೆಂಕಟೇಶ್, ಸ್ಥಾಯಿ ಸಮಿತಿ ಅಧ್ಯಕ್ಷ

ಮನೆ ಮನೆ ಕಸಗಳ ಸಂಗ್ರಹಿಸುವ ವಾಹನಗಳ ಓಡಿಸುವ ಚಾಲಕರಿಗೆ ಕೆಲ ಅಧಿಕಾರಿಗಳು ಬಾಯಿಗೆ ಬಂದಂತೆ ಬೈಯುತ್ತಾರೆ. ಇದರಿಂದ ಯಾರು ತಾನೆ ಕೆಲಸ ಮಾಡಲು ಸಾಧ್ಯ? ಪೌರಕಾರ್ಮಿಕರು ಮನುಷ್ಯರಲ್ಲವೇ?
-ಶ್ರೀರಂಗ, ಪೌರಕಾರ್ಮಿಕರ ಸಂಘದ ಅಧ್ಯಕ್ಷ.


ಅಧಿಕಾರಿಗಳು ಮತ್ತು ವಾಹನ ಚಾಲಕರು ನಡುವೆ ಏನೇ ಸಮಸ್ಯೆಗಳಿದ್ದರೂ ಗೊಂದಲಗಳಿದ್ದರೂ ಬಗೆಹರಿಸುತ್ತೇವೆ. ಅಧಿಕಾರಿಗಳು ಬಾಯಿಗೆ ಬಂದಂತೆ ಯಾರನ್ನೂ ನಿಂದಿಸಬಾರದು. ವಾಹನ ಚಾಲಕರು ನಮಗೆ ಮತ್ತು ಅಧ್ಯಕ್ಷರ ಗಮನಕ್ಕೆ ತಿಳಿಸದೆ ಗೈರುಹಾಜರಾಗಿರುವುದು ಸರಿಯಲ್ಲ.
-ಸುರೇಶ್, ಮುಖ್ಯಾಧಿಕಾರಿ, ಪುರಸಭೆ.

andolanait

Recent Posts

ಬೆಂಗಳೂರಿನಲ್ಲಿ ಮತ್ತೆ ಹೆಚ್ಚಿದ ಚಳಿಯ ಅಬ್ಬರ: ತಾಪಮಾನ ಎಷ್ಟಿದೆ ಗೊತ್ತಾ?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕೆಲ…

10 mins ago

ಮೆಟ್ರೋ ದರ ಹೆಚ್ಚಳ ವಿಚಾರ: ಚೇರ್ಮನ್‌ ಜೊತೆ ಮಾತುಕತೆ ನಡೆಸುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ಮೆಟ್ರೋ ದರ ಶೇಕಡಾ.5ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್‌ ಜೊತೆ ಮಾತನಾಡುವೆ ಎಂದು ಡಿಸಿಎಂ…

25 mins ago

ಮೈಸೂರು: 140 ಕೋಟಿ ಮೌಲ್ಯದ ಜಾಗ ಅತಿಕ್ರಮಣ ತೆರವು ಕಾರ್ಯಾಚರಣೆ

ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.…

50 mins ago

ದ್ವಿಚಕ್ರ ವಾಹನ ಮತ್ತು ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

1 hour ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

5 hours ago

ಓದುಗರ ಪತ್ರ: ಜನರ ನಿರೀಕ್ಷೆಗಳಿಂದ ದೂರವಾಗುತ್ತಿರುವ ಶಾಸನಸಭೆಗಳು

ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…

5 hours ago