ಎಚ್.ಡಿ.ಕೋಟೆ: ಅಧಿಕಾರಿಗಳ ನಡೆ ಖಂಡಿಸಿ ವಾಹನ ಚಾಲಕರು ಗೈರು
ಮಂಜು ಕೋಟೆ
ಎಚ್.ಡಿ.ಕೋಟೆ: ಮನೆ ಮನೆ ಕಸಗಳನ್ನು ಸಂಗ್ರಹಿಸಲು ಇರುವ ವಾಹನಗಳನ್ನು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸ್ವತಃ ಓಡಿಸಿ ಕಸ ಸಂಗ್ರಹಿಸಿದ ಘಟನೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಪುರಸಭೆಯ ಕೆಲ ಅಧಿಕಾರಿಗಳು ಮತ್ತು ಟೆಂಡರ್ ಮೂಲಕ ವಾಹನ ಓಡಿಸುವ ಚಾಲಕರ ನಡುವೆ ಕೆಲಸಗಳ ವಿಚಾರವಾಗಿ ಜಗಳವಾಗಿ, ಆರು ಮಂದಿ ಚಾಲಕರು ವಾಹನದ ಕೀಗಳನ್ನು ೩ ದಿನಗಳ ಹಿಂದೆ ಹಿಂತಿರುಗಿಸಿದ್ದರು.
ಹೀಗಾಗಿ ಪಟ್ಟಣದ ಅನೇಕ ವಾರ್ಡುಗಳ ಮನೆಗಳಲ್ಲಿ ಕಸಗಳು ವಿಲೇವರಿಯಾಗದೆ ದುರ್ನಾತ ಬೀರುತ್ತಿತ್ತು. ಜನರು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದರು.
ವಾಹನ ಚಾಲಕರಿಗೆ ಕೆಲ ಜನಪ್ರತಿನಿಧಿಗಳು ಎಷ್ಟೇ ಮನವೊಲಿಸಿದರೂ ಪ್ರಯೋಜನವಾಗದೆ ಇದ್ದುದರಿಂದ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಐಡಿಯಾ ವೆಂಕಟೇಶ್, ಪುರಸಭಾ ಸದಸ್ಯರಾದ ಮಿಲ್ ನಾಗರಾಜು, ಹೆಬ್ಬಾಳ ಲೋಕೇಶ್ ಅವರು ಕಸ ತುಂಬಿಕೊಂಡು ಹೋಗುವ ಮೂರು ವಾಹನಗಳ ಕೀಗಳನ್ನು ಪಡೆದು ಪೌರಕಾರ್ಮಿಕರನ್ನು ಕರೆದುಕೊಂಡು ತಾವೇ ವಾಹನ ಚಾಲನೆ ಮಾಡಿಕೊಂಡು ಅನೇಕ ವಾರ್ಡುಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಸಂಚರಿಸಿ ಮನೆಗಳಲ್ಲಿನ ಕಸವನ್ನು ಸಂಗ್ರಹಿಸಿದರು.
ಏನೇ ಸಮಸ್ಯೆಗಳು ಬಂದರೂ ವಾಹನ ಚಾಲಕರು ನಮ್ಮ ಗಮನಕ್ಕೆ ತಿಳಿಸಬೇಕು. ಏಕಾಏಕಿ ಇಂತಹ ಕ್ರಮ ಕೈಗೊಂಡರೆ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ. ಹೊಸ ಟೆಂಡರ್ದಾರರಿಗೆ ಈ ಕೆಲಸ ನಿರ್ವಹಿಸಲು ಜವಾಬ್ದಾರಿ ನೀಡಲಾಗುವುದು. ಜನ ಸೇವಕರಾಗಿ ಕೆಲಸ ಮಾಡುವುದೇ ನಮ್ಮ ಕರ್ತವ್ಯವಾಗಿದೆ
-ಐಡಿಯಾ ವೆಂಕಟೇಶ್, ಸ್ಥಾಯಿ ಸಮಿತಿ ಅಧ್ಯಕ್ಷ
ಮನೆ ಮನೆ ಕಸಗಳ ಸಂಗ್ರಹಿಸುವ ವಾಹನಗಳ ಓಡಿಸುವ ಚಾಲಕರಿಗೆ ಕೆಲ ಅಧಿಕಾರಿಗಳು ಬಾಯಿಗೆ ಬಂದಂತೆ ಬೈಯುತ್ತಾರೆ. ಇದರಿಂದ ಯಾರು ತಾನೆ ಕೆಲಸ ಮಾಡಲು ಸಾಧ್ಯ? ಪೌರಕಾರ್ಮಿಕರು ಮನುಷ್ಯರಲ್ಲವೇ?
-ಶ್ರೀರಂಗ, ಪೌರಕಾರ್ಮಿಕರ ಸಂಘದ ಅಧ್ಯಕ್ಷ.
ಅಧಿಕಾರಿಗಳು ಮತ್ತು ವಾಹನ ಚಾಲಕರು ನಡುವೆ ಏನೇ ಸಮಸ್ಯೆಗಳಿದ್ದರೂ ಗೊಂದಲಗಳಿದ್ದರೂ ಬಗೆಹರಿಸುತ್ತೇವೆ. ಅಧಿಕಾರಿಗಳು ಬಾಯಿಗೆ ಬಂದಂತೆ ಯಾರನ್ನೂ ನಿಂದಿಸಬಾರದು. ವಾಹನ ಚಾಲಕರು ನಮಗೆ ಮತ್ತು ಅಧ್ಯಕ್ಷರ ಗಮನಕ್ಕೆ ತಿಳಿಸದೆ ಗೈರುಹಾಜರಾಗಿರುವುದು ಸರಿಯಲ್ಲ.
-ಸುರೇಶ್, ಮುಖ್ಯಾಧಿಕಾರಿ, ಪುರಸಭೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…