ಜಿಲ್ಲೆಗಳು

ಪುರಸಭೆ ಸದಸ್ಯರಿಂದ ಕಸದ ವಾಹನ ಚಾಲನೆ

ಎಚ್.ಡಿ.ಕೋಟೆ: ಅಧಿಕಾರಿಗಳ ನಡೆ ಖಂಡಿಸಿ ವಾಹನ ಚಾಲಕರು ಗೈರು

ಮಂಜು ಕೋಟೆ
ಎಚ್.ಡಿ.ಕೋಟೆ: ಮನೆ ಮನೆ ಕಸಗಳನ್ನು ಸಂಗ್ರಹಿಸಲು ಇರುವ ವಾಹನಗಳನ್ನು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸ್ವತಃ ಓಡಿಸಿ ಕಸ ಸಂಗ್ರಹಿಸಿದ ಘಟನೆ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಪುರಸಭೆಯ ಕೆಲ ಅಧಿಕಾರಿಗಳು ಮತ್ತು ಟೆಂಡರ್ ಮೂಲಕ ವಾಹನ ಓಡಿಸುವ ಚಾಲಕರ ನಡುವೆ ಕೆಲಸಗಳ ವಿಚಾರವಾಗಿ ಜಗಳವಾಗಿ, ಆರು ಮಂದಿ ಚಾಲಕರು ವಾಹನದ ಕೀಗಳನ್ನು ೩ ದಿನಗಳ ಹಿಂದೆ ಹಿಂತಿರುಗಿಸಿದ್ದರು.
ಹೀಗಾಗಿ ಪಟ್ಟಣದ ಅನೇಕ ವಾರ್ಡುಗಳ ಮನೆಗಳಲ್ಲಿ ಕಸಗಳು ವಿಲೇವರಿಯಾಗದೆ ದುರ್ನಾತ ಬೀರುತ್ತಿತ್ತು. ಜನರು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದರು.
ವಾಹನ ಚಾಲಕರಿಗೆ ಕೆಲ ಜನಪ್ರತಿನಿಧಿಗಳು ಎಷ್ಟೇ ಮನವೊಲಿಸಿದರೂ ಪ್ರಯೋಜನವಾಗದೆ ಇದ್ದುದರಿಂದ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಐಡಿಯಾ ವೆಂಕಟೇಶ್, ಪುರಸಭಾ ಸದಸ್ಯರಾದ ಮಿಲ್ ನಾಗರಾಜು, ಹೆಬ್ಬಾಳ ಲೋಕೇಶ್ ಅವರು ಕಸ ತುಂಬಿಕೊಂಡು ಹೋಗುವ ಮೂರು ವಾಹನಗಳ ಕೀಗಳನ್ನು ಪಡೆದು ಪೌರಕಾರ್ಮಿಕರನ್ನು ಕರೆದುಕೊಂಡು ತಾವೇ ವಾಹನ ಚಾಲನೆ ಮಾಡಿಕೊಂಡು ಅನೇಕ ವಾರ್ಡುಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಸಂಚರಿಸಿ ಮನೆಗಳಲ್ಲಿನ ಕಸವನ್ನು ಸಂಗ್ರಹಿಸಿದರು.


ಏನೇ ಸಮಸ್ಯೆಗಳು ಬಂದರೂ ವಾಹನ ಚಾಲಕರು ನಮ್ಮ ಗಮನಕ್ಕೆ ತಿಳಿಸಬೇಕು. ಏಕಾಏಕಿ ಇಂತಹ ಕ್ರಮ ಕೈಗೊಂಡರೆ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ. ಹೊಸ ಟೆಂಡರ್‌ದಾರರಿಗೆ ಈ ಕೆಲಸ ನಿರ್ವಹಿಸಲು ಜವಾಬ್ದಾರಿ ನೀಡಲಾಗುವುದು. ಜನ ಸೇವಕರಾಗಿ ಕೆಲಸ ಮಾಡುವುದೇ ನಮ್ಮ ಕರ್ತವ್ಯವಾಗಿದೆ
-ಐಡಿಯಾ ವೆಂಕಟೇಶ್, ಸ್ಥಾಯಿ ಸಮಿತಿ ಅಧ್ಯಕ್ಷ

ಮನೆ ಮನೆ ಕಸಗಳ ಸಂಗ್ರಹಿಸುವ ವಾಹನಗಳ ಓಡಿಸುವ ಚಾಲಕರಿಗೆ ಕೆಲ ಅಧಿಕಾರಿಗಳು ಬಾಯಿಗೆ ಬಂದಂತೆ ಬೈಯುತ್ತಾರೆ. ಇದರಿಂದ ಯಾರು ತಾನೆ ಕೆಲಸ ಮಾಡಲು ಸಾಧ್ಯ? ಪೌರಕಾರ್ಮಿಕರು ಮನುಷ್ಯರಲ್ಲವೇ?
-ಶ್ರೀರಂಗ, ಪೌರಕಾರ್ಮಿಕರ ಸಂಘದ ಅಧ್ಯಕ್ಷ.


ಅಧಿಕಾರಿಗಳು ಮತ್ತು ವಾಹನ ಚಾಲಕರು ನಡುವೆ ಏನೇ ಸಮಸ್ಯೆಗಳಿದ್ದರೂ ಗೊಂದಲಗಳಿದ್ದರೂ ಬಗೆಹರಿಸುತ್ತೇವೆ. ಅಧಿಕಾರಿಗಳು ಬಾಯಿಗೆ ಬಂದಂತೆ ಯಾರನ್ನೂ ನಿಂದಿಸಬಾರದು. ವಾಹನ ಚಾಲಕರು ನಮಗೆ ಮತ್ತು ಅಧ್ಯಕ್ಷರ ಗಮನಕ್ಕೆ ತಿಳಿಸದೆ ಗೈರುಹಾಜರಾಗಿರುವುದು ಸರಿಯಲ್ಲ.
-ಸುರೇಶ್, ಮುಖ್ಯಾಧಿಕಾರಿ, ಪುರಸಭೆ.

andolanait

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

10 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

12 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

14 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

14 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

15 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

15 hours ago