ಜಿಲ್ಲೆಗಳು

ಕಳಪೆ ಗುಣಮಟ್ಟದ ಕಾಮಗಾರಿ ಎಂದು ದೂರುದಾರನಿಂದಲೇ ಜೆಸಿಬಿಯಿಂದ ಕಾಮಗಾರಿಯ ನಾಶ

ಹನೂರು: ತಾಲ್ಲೂಕಿನ ಬಂಡಳ್ಳಿ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯಲ್ಲಿ ನಡೆಯುತ್ತಿರುವ 30 ಲಕ್ಷ ರೂ ವೆಚ್ಚದ ಸಿಸಿ ರಸ್ತೆ ಚರಂಡಿ ಕಾಮಗಾರಿ ಯನ್ನು ಕಳಪೆ ಗುಣಮಟ್ಟ ದೆಂದು ದೂರು ನೀಡಿದ ದೂರುದಾರನೇ ಅಭಿವೃದ್ಧಿ ಕಾಮಗಾರಿಯನ್ನು ಜೆಸಿಬಿಯಿಂದ ಹೊಡೆದುಹಾಕಿ ನಾಶಗೊಳಿಸಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಬಂಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿಎಸ್ ಮಲ್ಲೇಶ ಎಂಬ ವ್ಯಕ್ತಿಯೇ ಈ ಕೃತ್ಯ ಎಸಗಿರುವ ದೂರುದಾರರು.

ಗ್ರಾಮ ಪಂಚಾಯತಿ ಕಚೇರಿ ಪಕ್ಕದ ಬಸವನಗುಡಿ ರಸ್ತೆಯು ನರೇಗಾ ಯೋಜನೆಯಲ್ಲಿ 2021-22 ನೇ ಸಾಲಿನ 30 ಲಕ್ಷ ರೂ ವೆಚ್ಚದಲ್ಲಿ ಕೈಗೊಂಡಿರುವ ಸಿ.ಸಿ.ರಸ್ತೆ ಕಾಮಗಾರಿಯು ಕಳಪೆ ಗುಣಮಟ್ಟದ್ದಾಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಪಂಚಾಯತಿ ಸಿಇಒ ರವರಿಗೆ ದೂರು ಸಲ್ಲಿಸಿದ ಮೇರೆಗೆ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಿವಾಸ ರವರು ಸ್ಥಳ ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ.

ಈ ಬಗ್ಗೆ ದೂರುದಾರ ಹಾಗೂ ಮತ್ತವರ ಬೆಂಬಲಿಗರನ್ನು ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಶ್ನಿಸಿದಾಗ,ಕಳಪೆ ಕಾಮಗಾರಿಯನ್ನು ನಿಮಗೆ ತೋರಿಸುವ ಉದ್ದೇಶದಿಂದ ಇದನ್ನು ನಾವೇ ನಾಶ ಮಾಡಿದ್ದೇವೆ ಎಂದು ಒಪ್ಪಿಕೊಂಡ ದೂರುದಾರ ಮಲ್ಲೇಶ್, ಬೇಕಿದ್ದರೆ ನಮ್ಮ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಎಂದು ಅಧಿಕಾರಿಗಳಿಗೆ ಸಮಜಾಯಿಸಿ ಉತ್ತರ ನೀಡಿದರು.

ಕಾಮಗಾರಿ ಪರಿಶೀಲನೆ ಮಾಡಿ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸರವರು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನರೇಗಾ ಯೋಜನೆಯ ಕಾಮಗಾರಿಯ ಸ್ಥಳ ಪರಿಶೀಲನೆ ಮಾಡಲಾಗಿದೆ. ಕಳಪೆ ಕಾಮಗಾರಿ ಆರೋಪದ ಹಿನ್ನೆಲೆಯಲ್ಲಿ ಸದ್ಯಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ.ಆದರೆ ದೂರುದಾರರೇ ಅಭಿವೃದ್ಧಿ ಕೆಲಸವನ್ನು ಜೆಸಿಬಿ ಯಿಂದ ಹಾಳು ಮಾಡಿರುವುದು ಸಾರ್ವಜನಿಕ ಆಸ್ತಿ ನಷ್ಟವಾಗಿದೆ.

ಈ ಬಗ್ಗೆ ಸಾರ್ವಜನಿಕ ಆಸ್ತಿ ಹಾನಿಗೊಳಿಸಿದ ಆರೋಪದ ಮೇಲೆ ಅ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸುವಂತೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು. ಕಾಮಗಾರಿ ಪರಿಶೀಲನೆ ವೇಳೆ ಬಂಡಳ್ಳಿ ಗ್ರಾಮಸ್ಥರು ಒಬ್ಬರಿಗೊಬ್ಬರು ಮಾತಿನ ಚಕಮಕಿ ಶುರುವಾಗಿ ಗಲಭೆ ವಾತಾವರಣ ಸೃಷ್ಟಿಯಾಗುವ ಸಮಯಕ್ಕೆ ಹನೂರು ಪೊಲೀಸರು ಆಗಮಿಸಿ ವಾತಾವರಣವನ್ನು ತಿಳಿಗೊಳಿಸಿದರು.

ಈ ಸಂದರ್ಭದಲ್ಲಿ ಪಿಡಿಒ ರಾಜು ಲಮಾಣಿ, ನರೇಗಾ ಇಂಜಿನಿಯರ್ ಮಲ್ಲಿಕ್, ಪೊಲೀಸ್ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಹಾಜರಿದ್ದರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

2 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

2 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

3 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

5 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

9 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

9 hours ago