ಜಿಲ್ಲೆಗಳು

ಕಳಪೆ ಗುಣಮಟ್ಟದ ಕಾಮಗಾರಿ ಎಂದು ದೂರುದಾರನಿಂದಲೇ ಜೆಸಿಬಿಯಿಂದ ಕಾಮಗಾರಿಯ ನಾಶ

ಹನೂರು: ತಾಲ್ಲೂಕಿನ ಬಂಡಳ್ಳಿ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯಲ್ಲಿ ನಡೆಯುತ್ತಿರುವ 30 ಲಕ್ಷ ರೂ ವೆಚ್ಚದ ಸಿಸಿ ರಸ್ತೆ ಚರಂಡಿ ಕಾಮಗಾರಿ ಯನ್ನು ಕಳಪೆ ಗುಣಮಟ್ಟ ದೆಂದು ದೂರು ನೀಡಿದ ದೂರುದಾರನೇ ಅಭಿವೃದ್ಧಿ ಕಾಮಗಾರಿಯನ್ನು ಜೆಸಿಬಿಯಿಂದ ಹೊಡೆದುಹಾಕಿ ನಾಶಗೊಳಿಸಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಬಂಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿಎಸ್ ಮಲ್ಲೇಶ ಎಂಬ ವ್ಯಕ್ತಿಯೇ ಈ ಕೃತ್ಯ ಎಸಗಿರುವ ದೂರುದಾರರು.

ಗ್ರಾಮ ಪಂಚಾಯತಿ ಕಚೇರಿ ಪಕ್ಕದ ಬಸವನಗುಡಿ ರಸ್ತೆಯು ನರೇಗಾ ಯೋಜನೆಯಲ್ಲಿ 2021-22 ನೇ ಸಾಲಿನ 30 ಲಕ್ಷ ರೂ ವೆಚ್ಚದಲ್ಲಿ ಕೈಗೊಂಡಿರುವ ಸಿ.ಸಿ.ರಸ್ತೆ ಕಾಮಗಾರಿಯು ಕಳಪೆ ಗುಣಮಟ್ಟದ್ದಾಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಪಂಚಾಯತಿ ಸಿಇಒ ರವರಿಗೆ ದೂರು ಸಲ್ಲಿಸಿದ ಮೇರೆಗೆ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಿವಾಸ ರವರು ಸ್ಥಳ ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ.

ಈ ಬಗ್ಗೆ ದೂರುದಾರ ಹಾಗೂ ಮತ್ತವರ ಬೆಂಬಲಿಗರನ್ನು ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಶ್ನಿಸಿದಾಗ,ಕಳಪೆ ಕಾಮಗಾರಿಯನ್ನು ನಿಮಗೆ ತೋರಿಸುವ ಉದ್ದೇಶದಿಂದ ಇದನ್ನು ನಾವೇ ನಾಶ ಮಾಡಿದ್ದೇವೆ ಎಂದು ಒಪ್ಪಿಕೊಂಡ ದೂರುದಾರ ಮಲ್ಲೇಶ್, ಬೇಕಿದ್ದರೆ ನಮ್ಮ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಎಂದು ಅಧಿಕಾರಿಗಳಿಗೆ ಸಮಜಾಯಿಸಿ ಉತ್ತರ ನೀಡಿದರು.

ಕಾಮಗಾರಿ ಪರಿಶೀಲನೆ ಮಾಡಿ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸರವರು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನರೇಗಾ ಯೋಜನೆಯ ಕಾಮಗಾರಿಯ ಸ್ಥಳ ಪರಿಶೀಲನೆ ಮಾಡಲಾಗಿದೆ. ಕಳಪೆ ಕಾಮಗಾರಿ ಆರೋಪದ ಹಿನ್ನೆಲೆಯಲ್ಲಿ ಸದ್ಯಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ.ಆದರೆ ದೂರುದಾರರೇ ಅಭಿವೃದ್ಧಿ ಕೆಲಸವನ್ನು ಜೆಸಿಬಿ ಯಿಂದ ಹಾಳು ಮಾಡಿರುವುದು ಸಾರ್ವಜನಿಕ ಆಸ್ತಿ ನಷ್ಟವಾಗಿದೆ.

ಈ ಬಗ್ಗೆ ಸಾರ್ವಜನಿಕ ಆಸ್ತಿ ಹಾನಿಗೊಳಿಸಿದ ಆರೋಪದ ಮೇಲೆ ಅ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸುವಂತೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು. ಕಾಮಗಾರಿ ಪರಿಶೀಲನೆ ವೇಳೆ ಬಂಡಳ್ಳಿ ಗ್ರಾಮಸ್ಥರು ಒಬ್ಬರಿಗೊಬ್ಬರು ಮಾತಿನ ಚಕಮಕಿ ಶುರುವಾಗಿ ಗಲಭೆ ವಾತಾವರಣ ಸೃಷ್ಟಿಯಾಗುವ ಸಮಯಕ್ಕೆ ಹನೂರು ಪೊಲೀಸರು ಆಗಮಿಸಿ ವಾತಾವರಣವನ್ನು ತಿಳಿಗೊಳಿಸಿದರು.

ಈ ಸಂದರ್ಭದಲ್ಲಿ ಪಿಡಿಒ ರಾಜು ಲಮಾಣಿ, ನರೇಗಾ ಇಂಜಿನಿಯರ್ ಮಲ್ಲಿಕ್, ಪೊಲೀಸ್ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಹಾಜರಿದ್ದರು.

andolanait

Recent Posts

ಸೂಟುಬೂಟಿನ ಜಿರಳೆ ಪಡೆಯೊಂದು

ದಿಲೀಪ್ ಎನ್ಕೆ ಊರ ಮಾರಿಹಬ್ಬಗಳಲ್ಲಿ ಕೇರಿಯಾಗಿನ ಕೇರಿಗಳಲ್ಲಿ ಮೊಳಗುವ ಚಿತ್ರಗೀತೆಗಳಂತೆ ಈಗ ದೇಶದ ತುಂಬೆಲ್ಲಾ ಬರೀ ಅವ್ಯವಸ್ಥೆಯ ವಿರುದ್ಧ ಸೆಟೆದು…

6 mins ago

ತಿರಸ್ಕಾರದ ವ್ಯಂಗ್ಯ ಪ್ರತಿಭಟನೆಯ ಸಂಕೇತವಾದಾಗ

ಶೇಷಾದ್ರಿ ಗಂಜೂರು ಸಂಕೇತವನ್ನೇ ಬ್ರಾಂಡ್ ಆಗಿಸಿಕೊಂಡ ದಿಢೀರ್ ಚಳವಳಿಯೊಂದು ಇದ್ದಕ್ಕಿದ್ದಂತೆ ಎದುರು ನಿಂತಾಗ ಅದರ ಬಗೆಗೆ ಒಂದು ಆರೋಗ್ಯಕರ ಸಂದೇಹದ…

9 mins ago

ಕುಕ್ಕರಿನ ಶೀಟಿ ತರಹದ ಜಿರಲೆ ಹೋರಾಟ

ಸುರೇಶ ಕಂಜರ್ಪಣೆ ಜಿರಲೆ ಪಕ್ಷದ ಹುಟ್ಟು ಮತ್ತು ಅದರ ಇತ್ತೀಚಿಗಿನ ಚಳವಳಿ ಕುರಿತು ವರ್ಣರಂಜಿತ ಊಹಾಪೋಹ, ವಿಶ್ಲೇಷಣೆಗಳು ನಡೆದಿವೆ. ಇವೆಲ್ಲಾ…

15 mins ago

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

3 hours ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

3 hours ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

4 hours ago