ಜಿಲ್ಲೆಗಳು

ಕಳಪೆ ಗುಣಮಟ್ಟದ ಕಾಮಗಾರಿ ಎಂದು ದೂರುದಾರನಿಂದಲೇ ಜೆಸಿಬಿಯಿಂದ ಕಾಮಗಾರಿಯ ನಾಶ

ಹನೂರು: ತಾಲ್ಲೂಕಿನ ಬಂಡಳ್ಳಿ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯಲ್ಲಿ ನಡೆಯುತ್ತಿರುವ 30 ಲಕ್ಷ ರೂ ವೆಚ್ಚದ ಸಿಸಿ ರಸ್ತೆ ಚರಂಡಿ ಕಾಮಗಾರಿ ಯನ್ನು ಕಳಪೆ ಗುಣಮಟ್ಟ ದೆಂದು ದೂರು ನೀಡಿದ ದೂರುದಾರನೇ ಅಭಿವೃದ್ಧಿ ಕಾಮಗಾರಿಯನ್ನು ಜೆಸಿಬಿಯಿಂದ ಹೊಡೆದುಹಾಕಿ ನಾಶಗೊಳಿಸಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಬಂಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿಎಸ್ ಮಲ್ಲೇಶ ಎಂಬ ವ್ಯಕ್ತಿಯೇ ಈ ಕೃತ್ಯ ಎಸಗಿರುವ ದೂರುದಾರರು.

ಗ್ರಾಮ ಪಂಚಾಯತಿ ಕಚೇರಿ ಪಕ್ಕದ ಬಸವನಗುಡಿ ರಸ್ತೆಯು ನರೇಗಾ ಯೋಜನೆಯಲ್ಲಿ 2021-22 ನೇ ಸಾಲಿನ 30 ಲಕ್ಷ ರೂ ವೆಚ್ಚದಲ್ಲಿ ಕೈಗೊಂಡಿರುವ ಸಿ.ಸಿ.ರಸ್ತೆ ಕಾಮಗಾರಿಯು ಕಳಪೆ ಗುಣಮಟ್ಟದ್ದಾಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ಪಂಚಾಯತಿ ಸಿಇಒ ರವರಿಗೆ ದೂರು ಸಲ್ಲಿಸಿದ ಮೇರೆಗೆ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀನಿವಾಸ ರವರು ಸ್ಥಳ ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ.

ಈ ಬಗ್ಗೆ ದೂರುದಾರ ಹಾಗೂ ಮತ್ತವರ ಬೆಂಬಲಿಗರನ್ನು ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಶ್ನಿಸಿದಾಗ,ಕಳಪೆ ಕಾಮಗಾರಿಯನ್ನು ನಿಮಗೆ ತೋರಿಸುವ ಉದ್ದೇಶದಿಂದ ಇದನ್ನು ನಾವೇ ನಾಶ ಮಾಡಿದ್ದೇವೆ ಎಂದು ಒಪ್ಪಿಕೊಂಡ ದೂರುದಾರ ಮಲ್ಲೇಶ್, ಬೇಕಿದ್ದರೆ ನಮ್ಮ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಎಂದು ಅಧಿಕಾರಿಗಳಿಗೆ ಸಮಜಾಯಿಸಿ ಉತ್ತರ ನೀಡಿದರು.

ಕಾಮಗಾರಿ ಪರಿಶೀಲನೆ ಮಾಡಿ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸರವರು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನರೇಗಾ ಯೋಜನೆಯ ಕಾಮಗಾರಿಯ ಸ್ಥಳ ಪರಿಶೀಲನೆ ಮಾಡಲಾಗಿದೆ. ಕಳಪೆ ಕಾಮಗಾರಿ ಆರೋಪದ ಹಿನ್ನೆಲೆಯಲ್ಲಿ ಸದ್ಯಕ್ಕೆ ಕಾಮಗಾರಿಯನ್ನು ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ.ಆದರೆ ದೂರುದಾರರೇ ಅಭಿವೃದ್ಧಿ ಕೆಲಸವನ್ನು ಜೆಸಿಬಿ ಯಿಂದ ಹಾಳು ಮಾಡಿರುವುದು ಸಾರ್ವಜನಿಕ ಆಸ್ತಿ ನಷ್ಟವಾಗಿದೆ.

ಈ ಬಗ್ಗೆ ಸಾರ್ವಜನಿಕ ಆಸ್ತಿ ಹಾನಿಗೊಳಿಸಿದ ಆರೋಪದ ಮೇಲೆ ಅ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸುವಂತೆ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು. ಕಾಮಗಾರಿ ಪರಿಶೀಲನೆ ವೇಳೆ ಬಂಡಳ್ಳಿ ಗ್ರಾಮಸ್ಥರು ಒಬ್ಬರಿಗೊಬ್ಬರು ಮಾತಿನ ಚಕಮಕಿ ಶುರುವಾಗಿ ಗಲಭೆ ವಾತಾವರಣ ಸೃಷ್ಟಿಯಾಗುವ ಸಮಯಕ್ಕೆ ಹನೂರು ಪೊಲೀಸರು ಆಗಮಿಸಿ ವಾತಾವರಣವನ್ನು ತಿಳಿಗೊಳಿಸಿದರು.

ಈ ಸಂದರ್ಭದಲ್ಲಿ ಪಿಡಿಒ ರಾಜು ಲಮಾಣಿ, ನರೇಗಾ ಇಂಜಿನಿಯರ್ ಮಲ್ಲಿಕ್, ಪೊಲೀಸ್ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಹಾಜರಿದ್ದರು.

andolanait

Recent Posts

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

2 hours ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

3 hours ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

3 hours ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

3 hours ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

1 day ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

1 day ago