ಜಿಲ್ಲೆಗಳು

ದೂರ: ಚಿರತೆ ದಾಳಿಯಿಂದ 2 ಮೇಕೆಗಳು ಸಾವು

ದೂರ : ಮೈಸೂರು ತಾಲ್ಲೂಕಿನ ದೂರ ಗ್ರಾಮದಲ್ಲಿ ಚಿರತೆಯೊಂದು ಎರಡು ಮೇಕೆಗಳನ್ನು ಕೊಂದುಹಾಕಿದ್ದು, ಗ್ರಾಮಸ್ಥರಲ್ಲಿ ಭೀತಿ ಎದುರಾಗಿದೆ.

ಗ್ರಾಮದ ಪಶ್ಚಿಮ ಭಾಗದಲ್ಲಿ ನನ್ನಗಳ್ಳಿ ವ್ಯಾಪ್ತಿಗೆ ಬರುವ ಶಿವಕುವಾರ್ ಎಂಬವರ ಜಮೀನಿನ ಹತ್ತಿರ ಮಧ್ಯಾಹ್ನದ ಸಮುಂದಲ್ಲಿ ದೂರ ಗ್ರಾಮದ ಪವನ್ ಎಂಬವರು ಮೇಕೆಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಚಿರತೆ ಎರಡು ಮೇಕೆಗಳ ಮೇಲೆ ದಾಳಿ ನಡೆಸಿದೆ. ಒಂದು ಮೇಕೆ ಅಲ್ಲೇ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನೊಂದು ಮೇಕೆ ಕೂಡ ಸ್ವಲ್ಪ ಸಮುಂದ ಬಳಿಕ ಸಾವನ್ನಪ್ಪಿತು. ತಮಗೆ ಪರಿಹಾರ ನೀಡಬೇಕೆಂದು ಪವನ್ ಕೋರಿದ್ದಾರೆ.

ಅಕ್ಟೋಬರ್ ತಿಂಗಳಲ್ಲಿ ಈ ಸ್ಥಳದ ಸಮೀಪದಲ್ಲೇ ಇಟ್ಟಿದ್ದ ಬೋನಿಗೆ ಒಂದು ಹೆಣ್ಣು ಚಿರತೆ ಬಿದ್ದಿತ್ತು. ಇತ್ತೀಚೆಗೆ ದೂರ ಗ್ರಾಮದ ಸುತ್ತಮುತ್ತಲೂ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಒಂದೊಂದು ದಿಕ್ಕಿನಲ್ಲಿ ಒಂದೊಂದು ದಿನ ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ವರ್ಷದಿಂದೀಚೆಗೆ ಇಲ್ಲಿುಂತನಕ ರೈತರು ಮೂವತ್ತಕ್ಕೂ ಹೆಚ್ಚು ಮೇಕೆ ಹಾಗೂ ಕುರಿಗಳನ್ನು ಕಳೆದುಕೊಂಡಿದ್ದಾರೆ. ದೂರ ಗ್ರಾಮದಲ್ಲಿ ವಾತ್ರವಲ್ಲದೆ ಮುರುಡಗಳ್ಳಿ, ದೊಡ್ಡಕಾಟೂರು, ಟಿ.ಕಾಟೂರು, ವಾರ್ಬಳ್ಳಿ, ವಾರ್ಬಳ್ಳಿ ಹುಂಡಿ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಲ್ಲೂ ಚಿರತೆ ಹಾವಳಿ ಹೆಚ್ಚಾಗಿದೆ. ಅರಣ್ಯ ಇಲಾಖೆುಂವರು ಇತ್ತ ಗಮನಹರಿಸಿ ಬೋನನ್ನು ಇಟ್ಟು ಚಿರತೆಗಳನ್ನು ಸೆರೆ ಹಿಡಿುಂಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ..

andolanait

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

8 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

8 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

8 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

9 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

9 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

9 hours ago