ದೂರ : ಮೈಸೂರು ತಾಲ್ಲೂಕಿನ ದೂರ ಗ್ರಾಮದಲ್ಲಿ ಚಿರತೆಯೊಂದು ಎರಡು ಮೇಕೆಗಳನ್ನು ಕೊಂದುಹಾಕಿದ್ದು, ಗ್ರಾಮಸ್ಥರಲ್ಲಿ ಭೀತಿ ಎದುರಾಗಿದೆ.
ಗ್ರಾಮದ ಪಶ್ಚಿಮ ಭಾಗದಲ್ಲಿ ನನ್ನಗಳ್ಳಿ ವ್ಯಾಪ್ತಿಗೆ ಬರುವ ಶಿವಕುವಾರ್ ಎಂಬವರ ಜಮೀನಿನ ಹತ್ತಿರ ಮಧ್ಯಾಹ್ನದ ಸಮುಂದಲ್ಲಿ ದೂರ ಗ್ರಾಮದ ಪವನ್ ಎಂಬವರು ಮೇಕೆಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಚಿರತೆ ಎರಡು ಮೇಕೆಗಳ ಮೇಲೆ ದಾಳಿ ನಡೆಸಿದೆ. ಒಂದು ಮೇಕೆ ಅಲ್ಲೇ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನೊಂದು ಮೇಕೆ ಕೂಡ ಸ್ವಲ್ಪ ಸಮುಂದ ಬಳಿಕ ಸಾವನ್ನಪ್ಪಿತು. ತಮಗೆ ಪರಿಹಾರ ನೀಡಬೇಕೆಂದು ಪವನ್ ಕೋರಿದ್ದಾರೆ.
ಅಕ್ಟೋಬರ್ ತಿಂಗಳಲ್ಲಿ ಈ ಸ್ಥಳದ ಸಮೀಪದಲ್ಲೇ ಇಟ್ಟಿದ್ದ ಬೋನಿಗೆ ಒಂದು ಹೆಣ್ಣು ಚಿರತೆ ಬಿದ್ದಿತ್ತು. ಇತ್ತೀಚೆಗೆ ದೂರ ಗ್ರಾಮದ ಸುತ್ತಮುತ್ತಲೂ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಒಂದೊಂದು ದಿಕ್ಕಿನಲ್ಲಿ ಒಂದೊಂದು ದಿನ ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ವರ್ಷದಿಂದೀಚೆಗೆ ಇಲ್ಲಿುಂತನಕ ರೈತರು ಮೂವತ್ತಕ್ಕೂ ಹೆಚ್ಚು ಮೇಕೆ ಹಾಗೂ ಕುರಿಗಳನ್ನು ಕಳೆದುಕೊಂಡಿದ್ದಾರೆ. ದೂರ ಗ್ರಾಮದಲ್ಲಿ ವಾತ್ರವಲ್ಲದೆ ಮುರುಡಗಳ್ಳಿ, ದೊಡ್ಡಕಾಟೂರು, ಟಿ.ಕಾಟೂರು, ವಾರ್ಬಳ್ಳಿ, ವಾರ್ಬಳ್ಳಿ ಹುಂಡಿ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಲ್ಲೂ ಚಿರತೆ ಹಾವಳಿ ಹೆಚ್ಚಾಗಿದೆ. ಅರಣ್ಯ ಇಲಾಖೆುಂವರು ಇತ್ತ ಗಮನಹರಿಸಿ ಬೋನನ್ನು ಇಟ್ಟು ಚಿರತೆಗಳನ್ನು ಸೆರೆ ಹಿಡಿುಂಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ..
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…
ಬೆಂಗಳೂರು: ಆನ್ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಆಗಲಿವೆ. ಅಖಿಲ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…