ಜಿಲ್ಲೆಗಳು

ದೂರ: ಚಿರತೆ ದಾಳಿಯಿಂದ 2 ಮೇಕೆಗಳು ಸಾವು

ದೂರ : ಮೈಸೂರು ತಾಲ್ಲೂಕಿನ ದೂರ ಗ್ರಾಮದಲ್ಲಿ ಚಿರತೆಯೊಂದು ಎರಡು ಮೇಕೆಗಳನ್ನು ಕೊಂದುಹಾಕಿದ್ದು, ಗ್ರಾಮಸ್ಥರಲ್ಲಿ ಭೀತಿ ಎದುರಾಗಿದೆ.

ಗ್ರಾಮದ ಪಶ್ಚಿಮ ಭಾಗದಲ್ಲಿ ನನ್ನಗಳ್ಳಿ ವ್ಯಾಪ್ತಿಗೆ ಬರುವ ಶಿವಕುವಾರ್ ಎಂಬವರ ಜಮೀನಿನ ಹತ್ತಿರ ಮಧ್ಯಾಹ್ನದ ಸಮುಂದಲ್ಲಿ ದೂರ ಗ್ರಾಮದ ಪವನ್ ಎಂಬವರು ಮೇಕೆಗಳನ್ನು ಮೇಯಿಸುತ್ತಿದ್ದ ಸಂದರ್ಭದಲ್ಲಿ ಚಿರತೆ ಎರಡು ಮೇಕೆಗಳ ಮೇಲೆ ದಾಳಿ ನಡೆಸಿದೆ. ಒಂದು ಮೇಕೆ ಅಲ್ಲೇ ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನೊಂದು ಮೇಕೆ ಕೂಡ ಸ್ವಲ್ಪ ಸಮುಂದ ಬಳಿಕ ಸಾವನ್ನಪ್ಪಿತು. ತಮಗೆ ಪರಿಹಾರ ನೀಡಬೇಕೆಂದು ಪವನ್ ಕೋರಿದ್ದಾರೆ.

ಅಕ್ಟೋಬರ್ ತಿಂಗಳಲ್ಲಿ ಈ ಸ್ಥಳದ ಸಮೀಪದಲ್ಲೇ ಇಟ್ಟಿದ್ದ ಬೋನಿಗೆ ಒಂದು ಹೆಣ್ಣು ಚಿರತೆ ಬಿದ್ದಿತ್ತು. ಇತ್ತೀಚೆಗೆ ದೂರ ಗ್ರಾಮದ ಸುತ್ತಮುತ್ತಲೂ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಒಂದೊಂದು ದಿಕ್ಕಿನಲ್ಲಿ ಒಂದೊಂದು ದಿನ ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ವರ್ಷದಿಂದೀಚೆಗೆ ಇಲ್ಲಿುಂತನಕ ರೈತರು ಮೂವತ್ತಕ್ಕೂ ಹೆಚ್ಚು ಮೇಕೆ ಹಾಗೂ ಕುರಿಗಳನ್ನು ಕಳೆದುಕೊಂಡಿದ್ದಾರೆ. ದೂರ ಗ್ರಾಮದಲ್ಲಿ ವಾತ್ರವಲ್ಲದೆ ಮುರುಡಗಳ್ಳಿ, ದೊಡ್ಡಕಾಟೂರು, ಟಿ.ಕಾಟೂರು, ವಾರ್ಬಳ್ಳಿ, ವಾರ್ಬಳ್ಳಿ ಹುಂಡಿ ಸೇರಿದಂತೆ ಅಕ್ಕಪಕ್ಕದ ಗ್ರಾಮಗಳಲ್ಲೂ ಚಿರತೆ ಹಾವಳಿ ಹೆಚ್ಚಾಗಿದೆ. ಅರಣ್ಯ ಇಲಾಖೆುಂವರು ಇತ್ತ ಗಮನಹರಿಸಿ ಬೋನನ್ನು ಇಟ್ಟು ಚಿರತೆಗಳನ್ನು ಸೆರೆ ಹಿಡಿುಂಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ..

andolanait

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

7 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

10 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

11 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

13 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

13 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

18 hours ago