ಜಿಲ್ಲೆಗಳು

ಬಣ್ಣ, ಬಣ್ಣದ ಚಿತ್ತಾರದಲ್ಲಿ ಕಂಗೊಳಿಸುತ್ತಿವೆ ದಸರಾ ಆನೆಗಳು

ಮೈಸೂರು: ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಎಲ್ಲ ಆನೆಗಳು ಇಂದು ವಧು-ವರರಂತೆ ಸಿಂಗಾರಗೊಂಡು ಬಣ್ಣ ಬಣ್ಣದ ಚಿತ್ತಾರಗಳಿಂದ ಕಣ್ಮನ ಸೆಳೆಯುತ್ತಿವೆ.

ನಾಗಲಿಂಗಪ್ಪ ಬಡಿಗೇರ್ ತಂಡದ ಏಳು ಜನರು ಆನೆಗಳ ಮೇಲೆ ಚಿತ್ರ ಬಿಡಿಸುವ ಕಾಯಕ ಆರಂಭಿಸಿದರು. ಅರಮನೆ ಆವರಣದಲ್ಲಿನ ಆನೆಗಳ ಶಿಬಿರದಲ್ಲಿ ಬುಧವಾರ ಬೆಳಗ್ಗೆ 11 ಗಂಟೆಯವರೆಗೆ ಆನೆಗಳ ಮೇಲೆ ಬಣ್ಣದ ಚಿತ್ತಾರ ಬಿಡಿಸುವ ಕಾರ್ಯ ನಡೆದಿತ್ತು. ಮಂಗಳವಾರ ರಾತ್ರಿ 10.30ಕ್ಕೆ ಆರಂಭವಾದ ಈ ಕಲಾತ್ಮಕ ಕೆಲಸ ಮೆರವಣಿಗೆಯ ದಿನದ ಬೆಳಗ್ಗೆ 11ರವರೆಗೂ ಮುಂದುವರಿದಿತ್ತು.

 

ಎಲ್ಲಾ ಆನೆಗಳು ಚಿತ್ತಾರ ಬರೆಸಿಕೊಂಡು ಪೋಸ್ ನೀಡುತ್ತಿದ್ದರೆ, ಜಂಬೂ ಸವಾರಿ ನಾಯಕ ಅಭಿಮನ್ಯುವಿಗೆ ಕೊನೆಯಲ್ಲಿ ಚಿತ್ರ ಬರೆಯಲು ಆರಂಭಿಸಲಾಯಿತು. ಹೀಗೆ ಈ ಹದಿಮೂರು ಆನೆಗಳ ಸಿಂಗಾರಕ್ಕಾಗಿ ಮೆರವಣಿಗೆಯ ಹಿಂದಿನ ರಾತ್ರಿಯಿಂದ ಜಂಬೂಸವಾರಿ ಆರಂಭವಾಗುವ ಕಡೇ ಕ್ಷಣದವರೆಗೂ ಶ್ರಮಿಸಿದರು.

 

ನೈಸರ್ಗಿಕ ಬಣ್ಣ ಬಳಕೆ: ದಸರಾ ಆನೆಗಳ ಮೇಲೆ ಚಿತ್ರ ಬರೆಯುವುದಕ್ಕೆ ಬಳಸುವ ಬಣ್ಣಗಳಿಂದ ಯಾವುದೇ ದುಷ್ಪರಿಣಾಮ ಉಂಟಾಗುವುದಿಲ್ಲ. ಚರ್ಮದ ಮೇಲೆ ಯಾವುದೇ ದುಷ್ಪರಿಣಾಮ ನೀಡದಂತಹ ನೈಸರ್ಗಿಕ ಬಣ್ಣ ಬಳಸಲಾಗಿದೆ. ಅಂಬಾರಿ ಹೊರುವ ಅಭಿಮನ್ಯು ಸೇರಿದಂತೆ ಎಲ್ಲಾ ಆನೆಗಳ ಉಗುರಿಗೆ ಸ್ವರ್ಣ ಬಣ್ಣ ಹಚ್ಚಲಾಗಿತ್ತು. ಸೊಂಡಿಲ ಮೇಲಿರುವ ಬಿಳಿ ಮಚ್ಚೆಗಳಿಗೆ ಕಣ್ಣು ಬಣ್ಣದ ಲೇಪನ ಮಾಡಲಾಗಿತ್ತು. ಅಂತಿಮವಾಗಿ ಆನೆಗಳ ಮೇಲೆ ನಾಮ ಮತ್ತು ಗಾದಿ ಹಾಕಿ, ರೇಷ್ಮೆ ವಸ್ತ್ರ ಹೊದಿಸಲಾಯಿತು.

ಚಿತ್ರ ಬಿಡಿಸುವಾಗ ಆನೆಗಳು ಸದಾ ಕಿವಿ ಬಡಿಯುತ್ತಾ ಸೊಂಡಿಲು ಮತ್ತು ಬಾಲ ಅಲ್ಲಾಡಿಸುತ್ತಲೇ ಇದ್ದವು. ಚಿತ್ರಕಾರರು ಇದನ್ನೆಲ್ಲ ಸಂಭಾಳಿಸುತ್ತಾ ಲಘುಬಗೆಯಿಂದ, ಸಾಕಷ್ಟು ತಾಳ್ಮೆಯಿಂದ ಚಿತ್ರ ಬಿಡಿಸಿದರು.

andolana

Recent Posts

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ…

7 hours ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

8 hours ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

8 hours ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

8 hours ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

11 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

12 hours ago