ಮೈಸೂರು: ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಎಲ್ಲ ಆನೆಗಳು ಇಂದು ವಧು-ವರರಂತೆ ಸಿಂಗಾರಗೊಂಡು ಬಣ್ಣ ಬಣ್ಣದ ಚಿತ್ತಾರಗಳಿಂದ ಕಣ್ಮನ ಸೆಳೆಯುತ್ತಿವೆ.
ನಾಗಲಿಂಗಪ್ಪ ಬಡಿಗೇರ್ ತಂಡದ ಏಳು ಜನರು ಆನೆಗಳ ಮೇಲೆ ಚಿತ್ರ ಬಿಡಿಸುವ ಕಾಯಕ ಆರಂಭಿಸಿದರು. ಅರಮನೆ ಆವರಣದಲ್ಲಿನ ಆನೆಗಳ ಶಿಬಿರದಲ್ಲಿ ಬುಧವಾರ ಬೆಳಗ್ಗೆ 11 ಗಂಟೆಯವರೆಗೆ ಆನೆಗಳ ಮೇಲೆ ಬಣ್ಣದ ಚಿತ್ತಾರ ಬಿಡಿಸುವ ಕಾರ್ಯ ನಡೆದಿತ್ತು. ಮಂಗಳವಾರ ರಾತ್ರಿ 10.30ಕ್ಕೆ ಆರಂಭವಾದ ಈ ಕಲಾತ್ಮಕ ಕೆಲಸ ಮೆರವಣಿಗೆಯ ದಿನದ ಬೆಳಗ್ಗೆ 11ರವರೆಗೂ ಮುಂದುವರಿದಿತ್ತು.
ಎಲ್ಲಾ ಆನೆಗಳು ಚಿತ್ತಾರ ಬರೆಸಿಕೊಂಡು ಪೋಸ್ ನೀಡುತ್ತಿದ್ದರೆ, ಜಂಬೂ ಸವಾರಿ ನಾಯಕ ಅಭಿಮನ್ಯುವಿಗೆ ಕೊನೆಯಲ್ಲಿ ಚಿತ್ರ ಬರೆಯಲು ಆರಂಭಿಸಲಾಯಿತು. ಹೀಗೆ ಈ ಹದಿಮೂರು ಆನೆಗಳ ಸಿಂಗಾರಕ್ಕಾಗಿ ಮೆರವಣಿಗೆಯ ಹಿಂದಿನ ರಾತ್ರಿಯಿಂದ ಜಂಬೂಸವಾರಿ ಆರಂಭವಾಗುವ ಕಡೇ ಕ್ಷಣದವರೆಗೂ ಶ್ರಮಿಸಿದರು.
ನೈಸರ್ಗಿಕ ಬಣ್ಣ ಬಳಕೆ: ದಸರಾ ಆನೆಗಳ ಮೇಲೆ ಚಿತ್ರ ಬರೆಯುವುದಕ್ಕೆ ಬಳಸುವ ಬಣ್ಣಗಳಿಂದ ಯಾವುದೇ ದುಷ್ಪರಿಣಾಮ ಉಂಟಾಗುವುದಿಲ್ಲ. ಚರ್ಮದ ಮೇಲೆ ಯಾವುದೇ ದುಷ್ಪರಿಣಾಮ ನೀಡದಂತಹ ನೈಸರ್ಗಿಕ ಬಣ್ಣ ಬಳಸಲಾಗಿದೆ. ಅಂಬಾರಿ ಹೊರುವ ಅಭಿಮನ್ಯು ಸೇರಿದಂತೆ ಎಲ್ಲಾ ಆನೆಗಳ ಉಗುರಿಗೆ ಸ್ವರ್ಣ ಬಣ್ಣ ಹಚ್ಚಲಾಗಿತ್ತು. ಸೊಂಡಿಲ ಮೇಲಿರುವ ಬಿಳಿ ಮಚ್ಚೆಗಳಿಗೆ ಕಣ್ಣು ಬಣ್ಣದ ಲೇಪನ ಮಾಡಲಾಗಿತ್ತು. ಅಂತಿಮವಾಗಿ ಆನೆಗಳ ಮೇಲೆ ನಾಮ ಮತ್ತು ಗಾದಿ ಹಾಕಿ, ರೇಷ್ಮೆ ವಸ್ತ್ರ ಹೊದಿಸಲಾಯಿತು.
ಚಿತ್ರ ಬಿಡಿಸುವಾಗ ಆನೆಗಳು ಸದಾ ಕಿವಿ ಬಡಿಯುತ್ತಾ ಸೊಂಡಿಲು ಮತ್ತು ಬಾಲ ಅಲ್ಲಾಡಿಸುತ್ತಲೇ ಇದ್ದವು. ಚಿತ್ರಕಾರರು ಇದನ್ನೆಲ್ಲ ಸಂಭಾಳಿಸುತ್ತಾ ಲಘುಬಗೆಯಿಂದ, ಸಾಕಷ್ಟು ತಾಳ್ಮೆಯಿಂದ ಚಿತ್ರ ಬಿಡಿಸಿದರು.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…