ಮೈಸೂರು: ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಎಲ್ಲ ಆನೆಗಳು ಇಂದು ವಧು-ವರರಂತೆ ಸಿಂಗಾರಗೊಂಡು ಬಣ್ಣ ಬಣ್ಣದ ಚಿತ್ತಾರಗಳಿಂದ ಕಣ್ಮನ ಸೆಳೆಯುತ್ತಿವೆ.
ನಾಗಲಿಂಗಪ್ಪ ಬಡಿಗೇರ್ ತಂಡದ ಏಳು ಜನರು ಆನೆಗಳ ಮೇಲೆ ಚಿತ್ರ ಬಿಡಿಸುವ ಕಾಯಕ ಆರಂಭಿಸಿದರು. ಅರಮನೆ ಆವರಣದಲ್ಲಿನ ಆನೆಗಳ ಶಿಬಿರದಲ್ಲಿ ಬುಧವಾರ ಬೆಳಗ್ಗೆ 11 ಗಂಟೆಯವರೆಗೆ ಆನೆಗಳ ಮೇಲೆ ಬಣ್ಣದ ಚಿತ್ತಾರ ಬಿಡಿಸುವ ಕಾರ್ಯ ನಡೆದಿತ್ತು. ಮಂಗಳವಾರ ರಾತ್ರಿ 10.30ಕ್ಕೆ ಆರಂಭವಾದ ಈ ಕಲಾತ್ಮಕ ಕೆಲಸ ಮೆರವಣಿಗೆಯ ದಿನದ ಬೆಳಗ್ಗೆ 11ರವರೆಗೂ ಮುಂದುವರಿದಿತ್ತು.
ಎಲ್ಲಾ ಆನೆಗಳು ಚಿತ್ತಾರ ಬರೆಸಿಕೊಂಡು ಪೋಸ್ ನೀಡುತ್ತಿದ್ದರೆ, ಜಂಬೂ ಸವಾರಿ ನಾಯಕ ಅಭಿಮನ್ಯುವಿಗೆ ಕೊನೆಯಲ್ಲಿ ಚಿತ್ರ ಬರೆಯಲು ಆರಂಭಿಸಲಾಯಿತು. ಹೀಗೆ ಈ ಹದಿಮೂರು ಆನೆಗಳ ಸಿಂಗಾರಕ್ಕಾಗಿ ಮೆರವಣಿಗೆಯ ಹಿಂದಿನ ರಾತ್ರಿಯಿಂದ ಜಂಬೂಸವಾರಿ ಆರಂಭವಾಗುವ ಕಡೇ ಕ್ಷಣದವರೆಗೂ ಶ್ರಮಿಸಿದರು.
ನೈಸರ್ಗಿಕ ಬಣ್ಣ ಬಳಕೆ: ದಸರಾ ಆನೆಗಳ ಮೇಲೆ ಚಿತ್ರ ಬರೆಯುವುದಕ್ಕೆ ಬಳಸುವ ಬಣ್ಣಗಳಿಂದ ಯಾವುದೇ ದುಷ್ಪರಿಣಾಮ ಉಂಟಾಗುವುದಿಲ್ಲ. ಚರ್ಮದ ಮೇಲೆ ಯಾವುದೇ ದುಷ್ಪರಿಣಾಮ ನೀಡದಂತಹ ನೈಸರ್ಗಿಕ ಬಣ್ಣ ಬಳಸಲಾಗಿದೆ. ಅಂಬಾರಿ ಹೊರುವ ಅಭಿಮನ್ಯು ಸೇರಿದಂತೆ ಎಲ್ಲಾ ಆನೆಗಳ ಉಗುರಿಗೆ ಸ್ವರ್ಣ ಬಣ್ಣ ಹಚ್ಚಲಾಗಿತ್ತು. ಸೊಂಡಿಲ ಮೇಲಿರುವ ಬಿಳಿ ಮಚ್ಚೆಗಳಿಗೆ ಕಣ್ಣು ಬಣ್ಣದ ಲೇಪನ ಮಾಡಲಾಗಿತ್ತು. ಅಂತಿಮವಾಗಿ ಆನೆಗಳ ಮೇಲೆ ನಾಮ ಮತ್ತು ಗಾದಿ ಹಾಕಿ, ರೇಷ್ಮೆ ವಸ್ತ್ರ ಹೊದಿಸಲಾಯಿತು.
ಚಿತ್ರ ಬಿಡಿಸುವಾಗ ಆನೆಗಳು ಸದಾ ಕಿವಿ ಬಡಿಯುತ್ತಾ ಸೊಂಡಿಲು ಮತ್ತು ಬಾಲ ಅಲ್ಲಾಡಿಸುತ್ತಲೇ ಇದ್ದವು. ಚಿತ್ರಕಾರರು ಇದನ್ನೆಲ್ಲ ಸಂಭಾಳಿಸುತ್ತಾ ಲಘುಬಗೆಯಿಂದ, ಸಾಕಷ್ಟು ತಾಳ್ಮೆಯಿಂದ ಚಿತ್ರ ಬಿಡಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…