ಜಿಲ್ಲೆಗಳು

ಬಣ್ಣ, ಬಣ್ಣದ ಚಿತ್ತಾರದಲ್ಲಿ ಕಂಗೊಳಿಸುತ್ತಿವೆ ದಸರಾ ಆನೆಗಳು

ಮೈಸೂರು: ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಎಲ್ಲ ಆನೆಗಳು ಇಂದು ವಧು-ವರರಂತೆ ಸಿಂಗಾರಗೊಂಡು ಬಣ್ಣ ಬಣ್ಣದ ಚಿತ್ತಾರಗಳಿಂದ ಕಣ್ಮನ ಸೆಳೆಯುತ್ತಿವೆ.

ನಾಗಲಿಂಗಪ್ಪ ಬಡಿಗೇರ್ ತಂಡದ ಏಳು ಜನರು ಆನೆಗಳ ಮೇಲೆ ಚಿತ್ರ ಬಿಡಿಸುವ ಕಾಯಕ ಆರಂಭಿಸಿದರು. ಅರಮನೆ ಆವರಣದಲ್ಲಿನ ಆನೆಗಳ ಶಿಬಿರದಲ್ಲಿ ಬುಧವಾರ ಬೆಳಗ್ಗೆ 11 ಗಂಟೆಯವರೆಗೆ ಆನೆಗಳ ಮೇಲೆ ಬಣ್ಣದ ಚಿತ್ತಾರ ಬಿಡಿಸುವ ಕಾರ್ಯ ನಡೆದಿತ್ತು. ಮಂಗಳವಾರ ರಾತ್ರಿ 10.30ಕ್ಕೆ ಆರಂಭವಾದ ಈ ಕಲಾತ್ಮಕ ಕೆಲಸ ಮೆರವಣಿಗೆಯ ದಿನದ ಬೆಳಗ್ಗೆ 11ರವರೆಗೂ ಮುಂದುವರಿದಿತ್ತು.

 

ಎಲ್ಲಾ ಆನೆಗಳು ಚಿತ್ತಾರ ಬರೆಸಿಕೊಂಡು ಪೋಸ್ ನೀಡುತ್ತಿದ್ದರೆ, ಜಂಬೂ ಸವಾರಿ ನಾಯಕ ಅಭಿಮನ್ಯುವಿಗೆ ಕೊನೆಯಲ್ಲಿ ಚಿತ್ರ ಬರೆಯಲು ಆರಂಭಿಸಲಾಯಿತು. ಹೀಗೆ ಈ ಹದಿಮೂರು ಆನೆಗಳ ಸಿಂಗಾರಕ್ಕಾಗಿ ಮೆರವಣಿಗೆಯ ಹಿಂದಿನ ರಾತ್ರಿಯಿಂದ ಜಂಬೂಸವಾರಿ ಆರಂಭವಾಗುವ ಕಡೇ ಕ್ಷಣದವರೆಗೂ ಶ್ರಮಿಸಿದರು.

 

ನೈಸರ್ಗಿಕ ಬಣ್ಣ ಬಳಕೆ: ದಸರಾ ಆನೆಗಳ ಮೇಲೆ ಚಿತ್ರ ಬರೆಯುವುದಕ್ಕೆ ಬಳಸುವ ಬಣ್ಣಗಳಿಂದ ಯಾವುದೇ ದುಷ್ಪರಿಣಾಮ ಉಂಟಾಗುವುದಿಲ್ಲ. ಚರ್ಮದ ಮೇಲೆ ಯಾವುದೇ ದುಷ್ಪರಿಣಾಮ ನೀಡದಂತಹ ನೈಸರ್ಗಿಕ ಬಣ್ಣ ಬಳಸಲಾಗಿದೆ. ಅಂಬಾರಿ ಹೊರುವ ಅಭಿಮನ್ಯು ಸೇರಿದಂತೆ ಎಲ್ಲಾ ಆನೆಗಳ ಉಗುರಿಗೆ ಸ್ವರ್ಣ ಬಣ್ಣ ಹಚ್ಚಲಾಗಿತ್ತು. ಸೊಂಡಿಲ ಮೇಲಿರುವ ಬಿಳಿ ಮಚ್ಚೆಗಳಿಗೆ ಕಣ್ಣು ಬಣ್ಣದ ಲೇಪನ ಮಾಡಲಾಗಿತ್ತು. ಅಂತಿಮವಾಗಿ ಆನೆಗಳ ಮೇಲೆ ನಾಮ ಮತ್ತು ಗಾದಿ ಹಾಕಿ, ರೇಷ್ಮೆ ವಸ್ತ್ರ ಹೊದಿಸಲಾಯಿತು.

ಚಿತ್ರ ಬಿಡಿಸುವಾಗ ಆನೆಗಳು ಸದಾ ಕಿವಿ ಬಡಿಯುತ್ತಾ ಸೊಂಡಿಲು ಮತ್ತು ಬಾಲ ಅಲ್ಲಾಡಿಸುತ್ತಲೇ ಇದ್ದವು. ಚಿತ್ರಕಾರರು ಇದನ್ನೆಲ್ಲ ಸಂಭಾಳಿಸುತ್ತಾ ಲಘುಬಗೆಯಿಂದ, ಸಾಕಷ್ಟು ತಾಳ್ಮೆಯಿಂದ ಚಿತ್ರ ಬಿಡಿಸಿದರು.

andolana

Recent Posts

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

3 mins ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

15 mins ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

3 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

5 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

6 hours ago

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

9 hours ago