ಜಿಲ್ಲೆಗಳು

ದಸರಾ ಕ್ರೀಡಾಕೂಟದ ಅವ್ಯವಸ್ಥೆ: ನೋಟೀಸ್ ಜಾರಿಗೊಳಿಸಿದ ಶಾಲಿನಿ ರಜನೀಶ್

ಮೈಸೂರು: ದಸರಾ ಕ್ರೀಡಾಕೂಟದಲ್ಲಿ ಅವ್ಯವಸ್ಥೆ ಯಾಗಿರುವ ಬಗ್ಗೆ ದೂರುಗಳು ಬಂದಿದ್ದು, ಈ ಕುರಿತು ಕೂಡಲೇ ವರದಿ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಆಯುಕ್ತ ಡಾ.ಎಚ್.ಎನ್. ಗೋಪಾಲಕೃಷ್ಣ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ ಇಲ್ಲದೇ ಇರುವುದು. ದಸರಾ ಕ್ರೀಡಾಕೂಟದಲ್ಲಿ ಭಾಗಿಯಾದವರಿಗೆ ನಿಗದಿಗಿಂತ ಕಡಿಮೆ ಗೌರವಧನ ನೀಡಲಾಗಿರುತ್ತದೆ. ಅಲ್ಲದೆ, ಕರಾಟೆ, ಬಾಡಿಬಿಲ್ಡಿಂಗ್, ಚೆಸ್, ಅಂಧರ ಚೆಸ್ ಮತ್ತು ಸೈಕಲ್ ಪೋಲೋ ಸ್ಪರ್ಧೆಗಳಿಗೆ ನಗದು ಬಹುಮಾನ ನೀಡಿರುವುದಿಲ್ಲ. ಕ್ರೀಡಾಕೂಟಕ್ಕೆ ಸೂಕ್ತ ರೀತಿಯಲ್ಲಿ ಮೈದಾನಗಳನ್ನು ಸಿದ್ಧವಾಗಿಲ್ಲದೇ ಇರುವುದು. ಕ್ರೀಡಾಕೂಟವನ್ನು ಮೊಟಕುಗೊಳಿಸಲಾಗಿರುವುದು. ಕ್ರೀಡಾಪಟುಗಳಿಗೆ ಕ್ರೀಡಾ ಸಮವಸ್ತ್ರ, ಶೂ ವಿತರಿಸಿರುವುದಿಲ್ಲ. ಮ್ಯಾರಥಾನ್ ಕ್ರೀಡೆ ರದ್ದುಗೊಳಿಸಲಾಗಿದೆ. ಬೇರೊಂದು ಸಮಿತಿ ಆಯೋಜಿಸಿರುವ ಯೋಗ ಸ್ಪರ್ಧೆಯನ್ನು ಮತ್ತೊಮ್ಮೆ ಆಯೋಜಿಸಲಾಗಿರುವುದು. ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದವರಿಗೆ ಗೌರವಧನ ನೀಡದೇ ಇರುವುದು. ಕಬ್ಬಡಿ ಕ್ರೀಡೆಯಲ್ಲಿ ಅವ್ಯವಸ್ಥೆ. ಈ ರೀತಿಯಾಗಿ ಅವ್ಯವಸ್ಥೆ ಕುರಿತು ಪಟ್ಟಿ ಮಾಡಿರುವ ಅಪರ ಮುಖ್ಯ ಕಾರ್ಯದರ್ಶಿ ಅವರು, ಇದರಿಂದಾಗಿ ಭಾಗವಹಿಸಿದ್ದ ಕ್ರೀಡಾಪಟುಗಳಿಗೆ ಅನಾನೂಕೂಲವಾಗಿರುತ್ತದೆ ಮತ್ತು ಇಲಾಖೆಯ ಗೌರವಕ್ಕೆ ಧಕ್ಕೆ ಉಂಟಾಗಿರುತ್ತದೆ. ಆದ್ದರಿಂದ ಈ ಮೇಲಿನ ಅಂಶಗಳ ಬಗ್ಗೆ ನಿಮ್ಮ ವರದಿಯನ್ನು ಕೂಡಲೇ ಸಲ್ಲಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ನೋಟಿಸ್‌ನ ಪ್ರತಿಯನ್ನು ಜಂಟಿ ನಿರ್ದೇಶಕರಿಗೂ ನೀಡಲಾಗಿದೆ.

 ದಸರಾ ಕ್ರೀಡಾಕೂಟ ಆಯೋಜಿಸಲು ಸರ್ಕಾರದ ವತಿಯಿಂದ ೫ ಕೋಟಿ ರೂಪಾಯಿ ಅನುದಾನವನ್ನು ನೀಡಲಾಗಿತ್ತು. ಕ್ರೀಡಾಕೂಟದ ಅವ್ಯವಸ್ಥೆ ಬಗ್ಗೆ ಪತ್ರಿಕೆಯಲ್ಲಿ ಬಂದಿರುವ ವರದಿಯನ್ನು ಗಮನಿಸಿ ನೋಟಿಸ್ ನೀಡಲಾಗಿದೆ.
– ಡಾ.ಶಾಲಿನಿ ರಜನೀಶ್ 

andolana

Recent Posts

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

4 mins ago

ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್‌ ಕುಸಿದ ಗಾಳಿಯ ಗುಣಮಟ್ಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…

1 hour ago

ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆ ತಂದಿಲ್ಲ: ಸಚಿವ ಪರಮೇಶ್ವರ್‌

ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…

1 hour ago

ಕಾಡಲ್ಲಿ ಸಿಂಹನೇ ರಾಜ: ಕಿಚ್ಚ ಸುದೀಪ್‌ಗೆ ನಟ ಧನ್ವೀರ್‌ ಟಾಂಗ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಮತ್ತೆ ಸ್ಟಾರ್‌ ವಾರ್‌ ಶುರುವಾಗಿದೆ. ಕಿಚ್ಚ ಸುದೀಪ್‌ ನೀಡಿದ ಆ ಒಂದು ಹೇಳಿಕೆಯಿಂದ ಡಿ ಬಾಸ್‌ ಅಭಿಮಾನಿಗಳು…

2 hours ago

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ಈ ವಿಷಯದಲ್ಲಿ ಹೈಕಮಾಂಡ್‌ ತೀರ್ಮಾನವೇ…

2 hours ago

ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ: 30 ಮಂದಿಗೆ ಗಾಯ

ಬೆಳಗಾವಿ: ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬೈಲಹೊಂಗಲ…

3 hours ago